ಸಿದ್ದರಾಮಯ್ಯ ಒಬ್ಬ ತಲಾಕ್ ರಾಜಕಾರಣಿ: ಈಶ್ವರಪ್ಪ ವ್ಯಂಗ್ಯ
ಸಿದ್ದರಾಮಯ್ಯ ಒಬ್ಬ ತಲಾಖ್ ರಾಜಕಾರಣಿ. ಅಧಿಕಾರ ಸಿಗಲಿಲ್ಲ ಅಂತ ಜೆಡಿಎಸ್ ಪಕ್ಷಕ್ಕೆ ತಲಾಖ್ ನೀಡಿದರು. ಇದೀಗ ಮುಖ್ಯಮಂತ್ರಿ ಸ್ಥಾನದಿಂದ ಇಳಿದ ಮೇಲೆ ಕಾಂಗ್ರೆಸ್ ಗೂ ತಲಾಖ್ ನೀಡಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
ಮೈಸೂರು, ಏಪ್ರಿಲ್ 4 : ತಾಯಿಯ ಎದೆ ಹಾಲು ಕುಡಿದು ಅವಳಿಗೆ ವಿಷ ಉಣಿಸುವ ಕೆಲಸವನ್ನು ನಾನೆಂದೂ ಮಾಡೋಲ್ಲ. ನನ್ನ ಹುಟ್ಟು-ಸಾವು ಎಲ್ಲವೂ ಬಿಜೆಪಿಯಲ್ಲೇ. ನನ್ನ ಪಕ್ಷ ನಿಷ್ಠೆ ಬಗ್ಗೆ ಮಾತನಾಡಬೇಡಿ ಎಂದು ವಿಧಾನ ಪರಿಷತ್ ವಿಪಕ್ಷನಾಯಕ ಕೆ.ಎಸ್.ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಮೈಸೂರಿನ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ನಿಷ್ಠೆ ಬಗ್ಗೆ ಮಾತನಾಡಿದರೆ ನನ್ನ ತಾಯಿಯ ಬಗ್ಗೆ ಮಾತನಾಡಿದಷ್ಟು ಕೋಪ ಬರುತ್ತೆ. ಸಿದ್ದರಾಮಯ್ಯ ನಿಮಗೆ ಪಕ್ಷ ನಿಷ್ಠೆ ಎಂದರೆ ಏನು ಅಂತ ಗೊತ್ತಿಲ್ಲ.ಅದಕ್ಕೇ ಬೇರೆಯವರ ಪಕ್ಷ ನಿಷ್ಠೆ ಬಗ್ಗೆ ಮಾತನಾಡುತ್ತಿರಿ. ಸಿದ್ದರಾಮಯ್ಯ ಒಬ್ಬ ತಲಾಖ್ ರಾಜಕಾರಣಿ. ಅಧಿಕಾರ ಸಿಗಲಿಲ್ಲ ಅಂತ ಜೆಡಿಎಸ್ ಪಕ್ಷಕ್ಕೆ ತಲಾಖ್ ನೀಡಿದರು. ಇದೀಗ ಮುಖ್ಯಮಂತ್ರಿ ಸ್ಥಾನದಿಂದ ಇಳಿದ ಮೇಲೆ ಕಾಂಗ್ರೆಸ್ ಗೂ ತಲಾಖ್ ನೀಡಲಿದ್ದಾರೆ ಎಂದು ವ್ಯಂಗ್ಯವಾಗಿ ಹೇಳಿದರು.[ಕೃಷ್ಣರ 'ದೂರಾಲೋಚನೆ' ಹೇಳಿಕೆಗೆ ಸಿದ್ದು ತಿರುಗೇಟು]

ಸಿದ್ದರಾಮಯ್ಯ ನನ್ನ ಬಗ್ಗೆ ಟೀಕೆ ಮಾಡಿದರೆ ಅದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ನನ್ನ ತಾಯಿಯ ಬಗ್ಗೆ ಮಾತನಾಡಬೇಡಿ. ಇಂಥ ಹೇಳಿಕೆಗಳಿಗೆ ಈ ಕೂಡಲೇ ಕ್ಷಮೆ ಕೇಳಿ ಎಂದು ಒತ್ತಾಯಿಸಿದರು. ನನಗೆ ತಲೆ ಕೆಟ್ಟಿದ್ದರೆ ಅದನ್ನ ನೋಡಲು ಒಳ್ಳೆಯ ಡಾಕ್ಟರ್ ಇದ್ದಾರೆ. ಆದರೆ ಸಿದ್ದರಾಮಯ್ಯ ಅವರ ನಡವಳಿಕೆ ಹಾಗೂ ಭಾವನೆ ಅರ್ಥ ಮಾಡಿಕೊಳ್ಳಲು ಯಾರೂ ಇಲ್ಲ ಎಂದು ಕುಟುಕಿದರು.[84ರ ಪ್ರಾಯದಲ್ಲಿ ಮದುವೆ ಆಗೋಕೆ ಸಾಧ್ಯವೇ: ಕೃಷ್ಣಗೆ ಇಬ್ರಾಹೀಂ ಲೇವಡಿ]
ಸಿದ್ದರಾಮಯ್ಯ ತಾವೇ ದಲಿತರ ಚಕ್ರಾಧಿಪತಿ ಎಂದುಕೊಂಡಿದ್ದಾರೆ. ಆದರೆ ಅವರೊಬ್ಬ ಸುಳ್ಳಿನ ಸರದಾರ. ಸುಳ್ಳು ಹೇಳುವುದರಲ್ಲಿ ನೊಬೆಲ್ ಪ್ರಶಸ್ತಿ ನೀಡುವುದಿದ್ದರೆ ಅದನ್ನು ಸಿದ್ದರಾಮಯ್ಯನವರಿಗೆ ನೀಡಬೇಕಾಗುತ್ತಿತ್ತು ಎಂದರು.[ಸಿದ್ದರಾಮಯ್ಯ ಸರ್ಕಾರಕ್ಕೆ ದೂರದೃಷ್ಟಿ ಇಲ್ಲ: ಕೃಷ್ಣ ಟೀಕೆ]
ಏಪ್ರಿಲ್ 9, ಭಾನುವಾರದಂದು ನಡೆಯಲಿರುವ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿರುವ ಉಭಯ ಪಕ್ಷಗಳ ನಾಯಕರು ಪರಸ್ಪರ ಮಾತಿನಲ್ಲೇ ಕೆಸರೆರಚಾಟ ಆರಂಭಿಸಿದ್ದು, ಏಪ್ರಿಲ್ 13, ಗುರುವಾರ ಫಲಿತಾಂಶ ಪ್ರಕಟವಾಗುವವರೆಗೂ ಜನರಿಗೆ ಮನರಂಜನೆಗಂತೂ ಕೊರತೆಯಿಲ್ಲ![ನಂಜನಗೂಡು: ಜನಸೇವೆ ಮಾಡುವ ಅಭ್ಯರ್ಥಿಗೆ ಮತನೀಡಿ-ಸಿದ್ದರಾಮಯ್ಯ]
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications