ಎಂ.ಆರ್.ಸಿ. ಕಣ್ಣಿನ ಆಸ್ಪತ್ರೆಯಲ್ಲಿ ಪ್ರಜ್ವಲ್ ಯೋಜನೆಗೆ ಚಾಲನೆ
ಮೈಸೂರು, ಆಗಸ್ಟ್ 13: ಮೈಸೂರು ರೇಸ್ ಕ್ಲಬ್ ಚಾರಿಟಬಲ್ ಕಣ್ಣಿನ ಆಸ್ಪತ್ರೆಯ 3ನೇ ಹಂತದ ಪ್ರಜ್ವಲ್ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂ.ಆರ್.ಸಿ. ಕಣ್ಣಿನ ಆಸ್ಪತ್ರೆ ಆವರಣದಲ್ಲಿ ಉದ್ಘಾಟಿಸಿದರು.
ಉದ್ಘಾಟನೆಯ ನಂತರ ಮಾತನಾಡಿ ಮನುಷ್ಯನಿಗೆ ಕಣ್ಣಿನ ದೃಷ್ಠಿ ಅತ್ಯಮೂಲ್ಯ ಅನೇಕ ಕಾರಣ ಹಾಗೂ ರೋಗಗಳಿಂದ ಕಣ್ಣಿನ ದೃಷ್ಠಿ ಊನವಾಗುತ್ತದೆ. ಕಣ್ಣಿನ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಕಣ್ಣಿನ ತೊಂದರೆವುಂಟಾದ ಸಂದರ್ಭದಲ್ಲಿ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದರು.
ಸಕ್ಕರೆ ಕಾಯಿಲೆ ಇರುವವರಲ್ಲಿ ಕಣ್ಣಿಗೆ ಸಂಬಂಧಿಸಿದ ತೊಂದರೆಗಳು ಹೆಚ್ಚಿರುತ್ತದೆ. ಅವರು ಕಣ್ಣಿನ ದೃಷ್ಠಿಯ ಬಗ್ಗೆ ಆಗಾಗ ವೈದ್ಯರಲ್ಲಿ ತಪಾಸಣೆ ಒಳಗಾಗಿ ಸಲಹೆ ಪಡೆಯಬೇಕು ಎಂದರು.
ಹೆಚ್ಚಾಗಿ ಬಡವರು ಹಾಗೂ ಮಾಧ್ಯಮ ವರ್ಗದ ಜನ ಸಾಮಾನ್ಯರು ಕುದುರೆ ರೇಸ್ಗಳಿಗೆ ಹಣ ಕಟ್ಟಿ ಭಾಗವಹಿಸುತ್ತಾರೆ. ಕುದುರೆ ರೇಸನ್ನು ಕ್ರೀಡಾ ಹಾಗೂ ಹವ್ಯಾಸದ ರೂಪದಲ್ಲಿ ಸ್ವೀಕರಿಸಬೇಕು. ಅದನ್ನು ಬಿಟ್ಟು ಜೂಜಿನ ರೀತಿಯಲ್ಲಿ ಸ್ವೀಕರಿಸಿದರೆ ಆರ್ಥಿಕ ಸ್ಥಿತಿಯಲ್ಲಿ ತೊಂದರೆಯಾಗುತ್ತದೆ ಎಂದು ಸಲಹೆ ನೀಡಿದರು.

ಎಂ.ಆರ್.ಸಿ. ಕಣ್ಣಿನ ಆಸ್ಪತ್ರೆ 70,000 ಜನರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ಮಾಡಿ ದುರ್ಬಲ ವರ್ಗದ ಜನರಿಗೆ ಸಹಾಯ ಮಾಡಿದೆ. ಈ ಕೆಲಸಕ್ಕಾಗಿ ಎಂ.ಆರ್.ಸಿ. ಕಣ್ಣಿನ ಆಸ್ಪತ್ರೆಯ ವೈದ್ಯರು ಹಾಗೂ ಆಡಳಿತ ಮಂಡಳಿಯವರನ್ನು ಅಭಿನಂದಿಸಿದರು.
ಮೈಸೂರು ರೇಸ್ ಕ್ಲಬ್ ಚಾರಿಟಬಲ್ ಕಣ್ಣಿನ ಆಸ್ಪತ್ರೆಯನ್ನು ಸೂಪರ್ ಸ್ಪೆಷಲಿಟಿ ಆಸ್ಪತ್ರೆಯನ್ನಾಗಿ ಮಾಡಲು ಆಡಳಿತ ಮಂಡಳಿಯವರು ಯೋಜಿಸುತ್ತಿದ್ದು, ಸರ್ಕಾರದಿಂದ 50 ಲಕ್ಷ ರೂ. ನೀಡಲು ಚಿಂತಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಮೈಸೂರು ರೇಸ್ ಕ್ಲಬ್ ನವರು 10 ಲಕ್ಷ ರೂ. ಚಕ್ನ್ನು ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್, ಸಹಕಾರ ಸಚಿವ ಮಹದೇವಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಉಮಾಶ್ರೀ, ಶಾಸಕ ಎಂ.ಕೆ. ಸೋಮಶೇಖರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಡಾ|| ಬಿ. ಪುಷ್ಪ ಅಮರನಾಥ್, ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಆರ್. ಲಿಂಗಪ್ಪ, ಉಪಮಹಾಪೌರರಾದ ಮಹದೇವಮ್ಮ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications