ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭೂ ಹಗರಣ : ಸಿದ್ದರಾಮಯ್ಯಗೆ ಬಂಧನ ಭೀತಿ!

By Yashaswini
|
Google Oneindia Kannada News

ಮೈಸೂರು, ಜೂನ್ 24 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಂಧನದ ಭೀತಿ ಎದುರಾಗಿದೆ. ಸಿದ್ದರಾಮಯ್ಯ ಅವರು ಧರ್ಮಸ್ಥಳದಲ್ಲಿದ್ದು, ಪ್ರಕೃತಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಭೂ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಲಕ್ಷ್ಮೀಪುರಂ ಠಾಣೆ ಪೊಲೀಸರು ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ್ದಾರೆ. ಜಾಮೀನು ರಹಿತ ಸೆಕ್ಷನ್‌ಗಳನ್ನು ಹಾಕಲಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲಕ್ಷ್ಮೀಪುರಂ ಪೊಲೀಸರಿಂದ ಎಫ್ಐಆರ್ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲಕ್ಷ್ಮೀಪುರಂ ಪೊಲೀಸರಿಂದ ಎಫ್ಐಆರ್

ಸಿದ್ದರಾಮಯ್ಯ, ಮುಡಾ ಮಾಜಿ ಅಧ್ಯಕ್ಷ ಬಸವೇಗೌಡ, ಧ್ರುವ ಕುಮಾರ್, ಮುಡ ಆಯುಕ್ತ ಕಾಂತರಾಜು ಅವರಿಗೂ ಬಂಧನದ ಭೀತಿ ಎದುರಾಗಿದೆ. ಈ ಪ್ರಕರಣದಲ್ಲಿ ಯಾವ ಆರೋಪಿಗಳು ನಿರೀಕ್ಷಣಾ ಜಾಮೀನು ಪಡೆದಿಲ್ಲ.

Siddaramaiah may file bail application on June 25

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಗದಿತ ಕಾರ್ಯಕ್ರಮದಂತೆ ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವಾರ ಅವರು ಧರ್ಮಸ್ಥಳಕ್ಕೆ ದಾಖಲಾಗಿದ್ದು, 10 ದಿನಗಳ ಕಾಲ ಚಿಕಿತ್ಸೆ ಪಡೆಯಲಿದ್ದಾರೆ.

ಆಪ್ತ ಶಾಸಕರ ಜೊತೆ ರಹಸ್ಯ ಸಭೆ ನಡೆಸಿದ ಸಿದ್ದರಾಮಯ್ಯ!ಆಪ್ತ ಶಾಸಕರ ಜೊತೆ ರಹಸ್ಯ ಸಭೆ ನಡೆಸಿದ ಸಿದ್ದರಾಮಯ್ಯ!

ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ನಡೆದ ಭೂ ಹಗರಣಕ್ಕೆ ಸಂಬಂಧಿಸಿದಂತೆ ಈಗ ದೂರು ದಾಖಲಾಗಿದ್ದು, ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ಸಿದ್ದರಾಮಯ್ಯ ಸೇರಿ 9 ಜನರ ವಿರುದ್ಧ ಕೇಸು ದಾಖಲು ಮಾಡಲು ಮೈಸೂರಿನ 2ನೇ ಪ್ರಧಾನ ಸತ್ರ ನ್ಯಾಯಾಲಯ ಆದೇಶ ನೀಡಿತ್ತು.

ಸಾಮಾಜಿಕ ಕಾರ್ಯಕರ್ತ ಗಂಗರಾಜು ಹಾಗೂ ಸಂಗಮೇಶ್ ದಾಖಲಿಸಿದ್ದ ದೂರಿನ ಅನ್ವಯ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಸೆಕ್ಷನ್​ 120ಬಿ, 197, 166, 167, 169, 200, 417, 409, 420
ಹಾಗೂ ಐಪಿಸಿ ಸೆಕ್ಷನ್​ 468 ಅಡಿ ಎಫ್‌ಐಆರ್ ದಾಖಲಾಗಿದೆ.

English summary
Karnataka Former Chief Minister Siddaramaiah may file bail application on June 25, 2018. FIR has been filed at the Lakshmipuram station, Mysuru against Siddaramaiah and three others in a land encroachment case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X