'ನನ್ನ ಸೋಲಿಗಿಂತ ಸಿದ್ದರಾಮಯ್ಯರ ಸೋಲು ನೋವುಂಟು ಮಾಡಿದೆ'
ಮೈಸೂರು, ಮೇ 28 : ವಿಧಾನಸಭೆ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಬಂದಿಲ್ಲ. ಕ್ಷೇತ್ರದಲ್ಲಿ ನನಗೂ ಸೋಲು ಆಗಿದ್ದು, ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದರಿಂದ ಜಿಲ್ಲೆಯಲ್ಲಿ ಪಕ್ಷದ ಸೋಲಿಗೆ ನಾನೇ ಜವಾಬ್ದಾರಿ. ಸ್ವ ಕ್ಷೇತ್ರದ ಸೋಲಿಗೂ ನಾನೇ ನೇರ ಹೊಣೆ ಎಂದು ಕಾಂಗ್ರೆಸ್ ನ ಪರಾಜಿತ ಅಭ್ಯರ್ಥಿ, ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಮತದಾರರಿಗೆ ಕೃತಜ್ಞತೆ ಹಾಗೂ ಸೋಲಿನ ಆತ್ಮಾವಲೋಕನಾ ಸಭೆಯಲ್ಲಿ ಅವರು ಭಾವನಾತ್ಮಕ ನುಡಿಗಳನ್ನಾಡಿದರು. ಈಗಲೂ ಚುನಾವಣೆ ನಡೆದರೆ ಸೋತಿರುವ ಅಂತರದಲ್ಲಿ ಮತ್ತೆ ನನ್ನನ್ನು ಗೆಲ್ಲಿಸುವಷ್ಟು ಆಕ್ರೋಶ ಇಲ್ಲಿ ಸೇರಿರುವ ಕಾರ್ಯಕರ್ತರು ಮತ್ತು ಮುಖಂಡರಲ್ಲಿದೆ ಎಂದು ಹೇಳಿದರು.
ನನ್ನ ಕೈಯಲ್ಲಿ ಮಾಡಲು ಸಾಧ್ಯವಿಲ್ಲದ ಕೆಲಸಗಳನ್ನು ಗೆದ್ದಿರುವವರು ಮಾಡಲಿ ಎಂದು ಶುಭವನ್ನು ಹಾರೈಸುವುದಾಗಿ ವಿರೋಧಿಗಳಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಹಲವು ದಶಕಗಳ ಕಾಲ ಚುನಾವಣೆಯಲ್ಲಿ ಕೈ ಹಿಡಿದು ಜನರು ಅಧಿಕಾರ ಕೊಟ್ಟಿದ್ದರು. 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದ್ದರಿಂದ ಯಾರೂ ಕಂಡರಿಯದ ಮಟ್ಟಿಗೆ ಅಭಿವೃದ್ಧಿ ಕೆಲಸವನ್ನು ಮಾಡಿದೆ. ಅಭಿವೃದ್ಧಿಯೇ ಗೆಲುವಿಗೆ ಮಾನದಂಡ ಅಲ್ಲ ಎಂಬುದನ್ನು ಚುನಾವಣೆ ತೋರಿಸಿಕೊಟ್ಟಿದೆ ಎಂದರು.
ಇನ್ನು ನನ್ನ ಸೋಲಿಗಿಂತ ಹೆಚ್ಚು ನೋವು ತಂದಿದ್ದು ಸಿದ್ದರಾಮಯ್ಯನವರ ಸೋಲು. ನಿಮ್ಮಪ್ಪನಾಣೆ ಮುಖ್ಯಮಂತ್ರಿಯಾಗಲ್ಲ ಎಂದು ಕುಮಾರಸ್ವಾಮಿಯನ್ನು ಲೇವಡಿ ಮಾಡುತ್ತಿದ್ದ ಸಿದ್ದರಾಮಯ್ಯನವರೇ ಇಂದು ಕುಮಾರಸ್ವಾಮಿ ಅವರನ್ನೇ ಮುಖ್ಯಮಂತ್ರಿ ಮಾಡಿರುವುದು ಬಿಜೆಪಿಯವರನ್ನು ದೂರ ಮಾಡಲು ಮಾತ್ರ ಎಂದು ಜೆಡಿಎಸ್ ಜತೆಗಿನ ಕಾಂಗ್ರೆಸ್ ಮೈತ್ರಿಯನ್ನು ಸಮರ್ಥಿಸಿಕೊಂಡರು.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications