ಸಿದ್ದರಾಮಯ್ಯಗೆ ಗಲಿಬಿಲಿ ಯಾಕೆ?; ಬಸವರಾಜ ಬೊಮ್ಮಾಯಿ
ಮೈಸೂರು, ಏಪ್ರಿಲ್ 07; "ಅಲ್ ಖೈದಾ ಹೇಳಿಕೆ ನೀಡಿದರೆ ಸಿದ್ದರಾಮಯ್ಯಗೆ ಗಲಿಬಿಲಿ ಯಾಕೆ?.
ಸಿದ್ದರಾಮಯ್ಯ ಹೇಳಿಕೆ ಆಧಾರವಿಲ್ಲದ ಹೇಳಿಕೆಯಾಗಿದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಗುರುವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, "ಈ ನೆಲದ ಮತ್ತು ಕಾನೂನಿನ ವಿರುದ್ಧ ನಿರಂತರ ಷಡ್ಯಂತ್ರ ನಡೆದಿವೆ. ಈ ಬಗ್ಗೆ ತನಿಖೆಗೆ ಪೊಲೀಸರಿಗೆ ಸೂಚಿಸಿದ್ದೇನೆ, ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ" ಎಂದರು.
"ಅಲ್ ಖೈದಾ ಹೇಳಿಕೆ ಹಿಂದೆ ಆರ್ಎಸ್ಎಸ್ ಕೈವಾಡವಿದೆ" ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿ, "ಅಲ್ ಖೈದಾ ಹೇಳಿಕೆ ನೀಡಿದರೆ ಸಿದ್ದರಾಮಯ್ಯಗೆ ಗಲಿಬಿಲಿ ಯಾಕೆ?" ಎಂದು ಪ್ರಶ್ನಿಸಿದರು.

"ದೆಹಲಿ ಪ್ರವಾಸ ಯಶಸ್ವಿಯಾಗಿದೆ. ರಾಜ್ಯದ ಬೇಡಿಕೆಗಳಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಅನೇಕ ವಿಚಾರಗಳ ಕುರಿತು ಚರ್ಚಿಸಿದ್ದೇನೆ. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಸ್ತೂಲ ಚರ್ಚೆ ಮಾಡಿದ್ದೇನೆ" ಎಂದು ಹೇಳಿದರು.
"ಮುಂದಿನ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಂಪುಟ ವಿಸ್ತರಣೆ ಆಗುವ ಬಗ್ಗೆ ನಿರ್ಧಾರವಾಗುವ ನಿರೀಕ್ಷೆ ಇದೆ" ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಹೇಳಿಕೆಯನ್ನು ಖಂಡಿಸಬೇಕು; ಗುರುವಾರ ಮೈಸೂರಿನಲ್ಲಿ ಮಾತನಾಡಿದ್ದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ ಸಹ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದರು, "ಸಿದ್ದರಾಮಯ್ಯ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ" ಎಂದು ದೂರಿದ್ದರು.
"ಇಂತಹ ಸೂಕ್ಷ್ಮ ವಿಚಾರದ ಬಗ್ಗೆ ಈ ರೀತಿ ಯಾವುದೇ ಪುರಾವೆ ಇಲ್ಲದೆ ಆರೋಪ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯ ಮೊದಲು ಅಲ್ ಖೈದಾ ಸಂಘಟನೆಯ ಹೇಳಿಕೆ ಖಂಡಿಸಬೇಕು. ಇದನ್ನು ಬಿಟ್ಟು ಈ ರೀತಿ ಬೇಜಾವಾಬ್ದಾರಿಯಾಗಿ ಒಂದು ಸಂಘಟನೆ ಮೇಲೆ ಆರೋಪ ಮಾಡುವುದು ಸರಿಯಲ್ಲ" ಎಂದು ಹೇಳಿದ್ದರು.
"ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಯಾವ ಬೆಲೆಯೂ ಇಲ್ಲ. ಹಿಂದೆ ಹಿಜಾಬ್ ಬಗ್ಗೆ ಮಾತಾಡುತ್ತಾ ಅದನ್ನು ಖಾವಿಗೆ ಹೋಲಿಸಿ ಜನರಿಂದ ಟೀಕೆಗೆ ಒಳಗಾಗಿದ್ದರು. ಈ ಹೇಳಿಕೆಯಿಂದಲ್ಲೂ ಸಿದ್ದರಾಮಯ್ಯ ಇದೇ ರೀತಿ ಟೀಕೆಗೆ ಒಳಗಾಗುತ್ತಾರೆ" ಎಂದು ಅಶ್ವತ್ಥ್ ನಾರಾಯಣ ತಿಳಿಸಿದ್ದರು.
"ವೀಡಿಯೋ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರ ಬಗ್ಗೆ ಪೊಲೀಸರು ಮಾಹಿತಿಗಳನ್ನು ಪಡೆಯುತ್ತಿದ್ದಾರೆ" ಎಂದು ಸ್ಪಷ್ಟಪಡಿಸಿದ್ದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications