Get Updates
Get notified of breaking news, exclusive insights, and must-see stories!

ಶ್ರೀರಾಮನ ಮೊರೆ ಹೋದ ಸಿದ್ಧರಾಮಯ್ಯ: ನಾಮಪತ್ರ ಸಲ್ಲಿಕೆಗೆ ಮುನ್ನ ಹುಟ್ಟೂರಿನಲ್ಲಿ ದೇವಸ್ಥಾನಕ್ಕೆ ಭೇಟಿ

ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ಧರಾಮಯ್ಯ ಇಂದು (ಏಪ್ರಿಲ್ 19) ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ಹುಟ್ಟೂರಾದ ಸಿದ್ಧರಾಮನ ಹುಂಡಿಯಲ್ಲಿರುವ ಸಿದ್ದರಾಮೇಶ್ವರ ದೇವಾಲಯ ಹಾಗೂ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಿಜೆಪಿ ಶ್ರೀರಾಮ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಸಿದ್ಧರಾಮಯ್ಯ ಹಲವು ಬಾರಿ ಟೀಕೆ ಮಾಡಿದ್ದರು.

ನಾಮಪತ್ರ ಸಲ್ಲಿಕೆಗೆ ಮುನ್ನ ಶ್ರೀರಾಮ ಮತ್ತು ಸಿದ್ಧರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶಿರ್ವಾದ ಪಡೆದುಕೊಂಡಿದ್ದೇನೆ ಎಂದು ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ. ಎರಡೂ ದೇವಸ್ಥಾನಗಳಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿರುವು ಫೋಟೊಗಳನ್ನು ಹಂಚಿಕೊಂಡಿದ್ದಾರೆ.

ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲನುಭವಿಸಿದ್ದರೆ, ಬಾದಾಮಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಮತ್ತೆ ತಮ್ಮ ತವರು ಕ್ಷೇತ್ರಕ್ಕೆ ಮರಳಿದ್ದು ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದಾರೆ.

Siddaramaiah visited the Sriram Temple before filing his nomination in Varuna

ವರುಣಾ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ಅವರಿಗೆ ಎದುರಾಳಿಯಾಗಿ ಬಿಜೆಪಿ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ. ಸಂಸದ ಪ್ರತಾಪ್ ಸಿಂಹ ವಿ. ಸೋಮಣ್ಣ ಅವರನ್ನು ಗೆಲ್ಲಿಸಲು ಪಣತೊಟ್ಟಿದ್ದು, ವರುಣಾದಲ್ಲಿ ರಾಜಕೀಯ ಅಖಾಡ ರಂಗೇರಿದೆ.

ವರುಣಾದಲ್ಲಿ ಡಾ. ಭಾರತಿ ಶಂಕರ್ ಕಣಕ್ಕೆ

ವರುಣಾ ಕ್ಷೇತ್ರದಲ್ಲಿ ಟಿ. ನರಸೀಪುರದ ಮಾಜಿ ಶಾಸಕ ಡಾ.ಎನ್‌.ಎಲ್‌. ಭಾರತೀಶಂಕರ್‌ ಜೆಡಿಎಸ್ ಪರವಾಗಿ ಕಣಕ್ಕಿಳಿಯಲಿದ್ದಾರೆ. ಸಾಮಾನ್ಯ ಕ್ಷೇತ್ರವಾಗಿರುವ ವರುಣಾದಲ್ಲಿಎಎಸ್‌.ಎಂ. ಅಭಿಷೇಕ್ ಅವರು ಕಣಕ್ಕಿಳಿಯುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಪರಿಶಿಷ್ಠ ಜಾತಿಗೆ ಸೇರಿದ ಡಾ.ಎನ್‌.ಎಲ್‌. ಭಾರತೀಶಂಕರ್‌ ಅವರನ್ನು ಕಣಕ್ಕಿಳಿಸುವ ಮೂಲಕ ಸಿದ್ಧರಾಮಯ್ಯ ಅವರನ್ನು ಸೋಲಿಸಲು ತಂತ್ರ ಹೂಡಿದೆ ಎನ್ನಲಾಗಿದೆ.

ಜೆಡಿಎಸ್-ಬಿಜೆಪಿ ಮೈತ್ರಿಯಾಗಿವೆ ಎಂದ ಸಿದ್ಧರಾಮಯ್ಯ

ನಂಜನಗೂಡಿನ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ವರುಣಾದಲ್ಲಿ ನನ್ನನ್ನು ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿವೆ ಎಂದು ಆರೋಪಿಸಿದರು. ಯಾರು ಏನೇ ಮಾಡಿದರು ಈ ಬಾರಿ ಜನ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಇದೇ ನನ್ನ ಕೊನೆಯ ಚುನಾವಣೆ ಎಂದಿರುವ ಅವರು ರಾಜಕೀಯ ನಿವೃತ್ತಿ ಪಡೆಯುವ ಮುನ್ಸೂಚನೆ ನೀಡಿದ್ದಾರೆ. ಇದೇ ವೇಳೆ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ, ಶಾಸಕ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಮೈಸೂರು ಜಿಲ್ಲೆಯ ಸ್ಥಳಿಯ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+