Siddaramaiah vs Somanna: ವರುಣಾದಲ್ಲಿ 24,000 ಮತದಾರರ ಸಂಖ್ಯೆ ಹೆಚ್ಚಳ- ಯಾರಿಗೆ ಲಾಭ? ಇನ್ಸೈಡ್ ಸ್ಟೋರಿ
ಮೈಸೂರು, ಮೇ 12: ಶನಿವಾರ ಬೆಳಗ್ಗೆ 7 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಫಲಿತಾಂಶವನ್ನು ಕರ್ನಾಟಕದ ಜನರು ಅತ್ಯಂತ ಕುತೂಹಲದಿಂದ ನೋಡುತ್ತಿದ್ದಾರೆ. 2018 ರ ಚುನಾವಣೆಗೆ ಹೋಲಿಸಿದರೆ ವರುಣಾದಲ್ಲಿ 24,000 ಮತದಾರರ ಸಂಖ್ಯೆ ಹೆಚ್ಚಳವಾಗಿದೆ.
ಪ್ರತಿಪಕ್ಷದ ನಾಯಕ ಹಾಗೂ ಕುರುಬ ಸಮುದಾಯಕ್ಕೆ ಸೇರಿದ ಸಿದ್ದರಾಮಯ್ಯ ಹಾಗೂ ಬಿಜೆಪಿ ಸಚಿವ, ಲಿಂಗಾಯತ ಸಮುದಾಯಕ್ಕೆ ಸೇರಿದ ವಿ ಸೋಮಣ್ಣ ಅವರ ನಡುವೆ ಪ್ರಬಲ ಸ್ಪರ್ಧೆ ಏರ್ಪಟ್ಟಿದೆ. ಹೈ-ಪ್ರೊಫೈಲ್ ಚುನಾವಣಾ ಕದನವು ರಾಜ್ಯದಲ್ಲಿ ವ್ಯಾಪಕ ಕುತೂಹಲಕ್ಕೆ ಕಾರಣವಾಗಿದೆ.

ಮೇ 10 ರಂದು ನಡೆದ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ 1,98,740 ಜನರು ಮತ ಚಲಾಯಿಸಿದ್ದಾರೆ. ಶೇಕಡಾವಾರು 84.74 ಕ್ಕೆ ತಲುಪಿದೆ. 2018 ರ ಚುನಾವಣೆಯಲ್ಲಿ, 2,21,050 ಮತದಾರರಲ್ಲಿ 1,74,457 ಜನರು ಮತ ಚಲಾಯಿಸಿದ್ದರು. ಆಗ ಮತದಾನದ ಪ್ರಮಾಣ ಶೇ 79.2 ಆಗಿತ್ತು.
ಈ ಕ್ಷೇತ್ರದಲ್ಲಿ ತಳಮಟ್ಟದಲ್ಲಿ ಬಿಜೆಪಿ ಶ್ರಮಿಸಿದೆ. ವಿ ಸೋಮಣ್ಣ ಅವರು ಹಳ್ಳಿಗಳಿಗೆ ಭೇಟಿ ಮತ ನೀಡಲು ಮನವಿ ಮಾಡಿಕೊಂಡಿರುವುದು ಈ ಬಾರಿ ಮತದಾನ ಹೆಚ್ಚಳಕ್ಕೆ ಕಾರಣವಾಗಿದೆ.

ಸಾಂಪ್ರದಾಯಿಕ ಕಾಂಗ್ರೆಸ್ ಮತದಾರರ ಬಲವರ್ಧನೆ ಮಾಜಿ ಸಿಎಂಗೆ ನೆರವಾಗಲಿದೆ ಎಂದು ಸಿದ್ದರಾಮಯ್ಯ ಪಾಳಯ ನಂಬಿದೆ. ತಮ್ಮ ನಾಯಕ 25,000 ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಅವರು ಹೇಳುತ್ತಾರೆ.
ಲಿಂಗಾಯತ ಪ್ರಾಬಲ್ಯವಿರುವ ಭಾಗದಲ್ಲಿ ಹೆಚ್ಚಿನ ಮತದಾನವಾಗಿರುವುದು ಸೋಮಣ್ಣ ಅವರಿಗೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ. ಲಿಂಗಾಯತರು ಪ್ರಬಲವಾಗಿರುವ ನಂಜನಗೂಡು ತಾಲೂಕಿನಲ್ಲಿ ಭಾರೀ ಮತದಾನವಾಗಿದೆ. ಸೋಮಣ್ಣ ಬೆಂಬಲಿಗರು ಬಿಜೆಪಿ ಸುಮಾರು 5,000-11,000 ಮತಗಳ ಅಂತರದಿಂದ ಗೆಲ್ಲಲಿದೆ ಎಂದು ಹೇಳಿದ್ದಾರೆ ಎಂದು 'ಟೈಮ್ಸ್ ಆಫ್ ಇಂಡಿಯಾ' ವರದಿ ಮಾಡಿದೆ. ಮತದಾನದ ಶೇಕಡಾವಾರು ಹೆಚ್ಚಳಕ್ಕೆ ಇಬ್ಬರೂ ನಾಯಕರು ತಮ್ಮದೇ ಆದ ಅಭಿಪ್ರಾಯಗಳನ್ನು ಹೊಂದಿದ್ದಾರೆ.

ಎಲ್ಲಾ ಹಿಂದುಳಿದ ವರ್ಗದವರು ಪಕ್ಷವನ್ನು ಬೆಂಬಲಿಸಲು ಬಂದಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೊಂಡರೆ, ಬಿಜೆಪಿ ಕಾರ್ಯಕರ್ತರು ಈ ಬಾರಿ ದಲಿತರು ಮತ್ತು ಲಿಂಗಾಯತರು ಹೆಚ್ಚಿನ ಶೇಕಡಾವಾರು ಸಂಖ್ಯೆಯಲ್ಲಿ ಕಾಣಿಸಿಕೊಂಡು ಸೋಮಣ್ಣ ಅವರಿಗೆ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ಸೋಮಣ್ಣ ಇಬ್ಬರೂ ತಮಗೆ ಎಲ್ಲಾ ಸಮುದಾಯಗಳ ಬೆಂಬಲವಿದೆ ಮತ್ತು ಅವರೆಲ್ಲರೂ ತಮಗೆ ಮತ ಹಾಕಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಸೋಮಣ್ಣ ಅವರನ್ನು ಬೆಂಬಲಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲ. ಇದು ಲಿಂಗಾಯತ ಮತಗಳಲ್ಲಿ ಶೇ 40 ರಷ್ಟು ವಿಭಜನೆಯಾಗುವ ಸೂಚನೆಯಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿದ್ದಾರೆ.

ಆದಾಗ್ಯೂ, ಅನುಭವಿ ರಾಜಕಾರಣಿ ಸೋಮಣ್ಣ ಅವರು ಕಣಕ್ಕೆ ಇಳಿಯುವ ಮೊದಲು ಪಕ್ಷದೊಳಗಿನ ಅಸಮಾಧಾನವನ್ನು ಸೂಕ್ಷ್ಮವಾಗಿ ಪರಿಹರಿಸಿದ್ದಾರೆ. ಆ ಮೂಲಕ ವರುಣಾದ ಯಡಿಯೂರಪ್ಪ ಅವರ ಬೆಂಬಲಿಗರನ್ನು ಸೋಮಣ್ಣ ಸೆಳೆದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಚುನಾವಣೆ ಮುಗಿದ ನಂತರ ಸಿದ್ದರಾಮಯ್ಯ ಅವರು ಸುಲಭವಾಗಿ ಗೆಲ್ಲುತ್ತೇವೆ ಎಂದು ಪುನರುಚ್ಚರಿಸಿದ್ದಾರೆ. 'ಬಿಜೆಪಿ ನಾಯಕರು ಜಾತಿ ಕಾರ್ಡ್ ಆಡಲು ಪ್ರಯತ್ನಿಸಿದರು. ಆದರೆ, ಅವರು ವಿಫಲರಾಗಿದ್ದಾರೆ. ಜೆಡಿಎಸ್ ಬೆಂಬಲಿಗರು ಸಹ ಬಿಜೆಪಿಗೆ ಮತ ಹಾಕಿದ್ದಾರೆ. ಆದರೂ, ನಾನು ಗೆಲ್ಲುತ್ತೇನೆ' ಎಂದು ಅವರು ಹೇಳಿದರು.
ರಾಜ್ಯಾದ್ಯಂತ ಮತ್ತು ಕರ್ನಾಟಕದ ಹೊರಗಿನ ಜನರು ವರುಣಾದಲ್ಲಿ ಅವರನ್ನು ಪ್ರೀತಿ ಮತ್ತು ಗೌರವದಿಂದ ಬೆಂಬಲಿಸುತ್ತಾರೆ ಎಂದು ಸಿದ್ದರಾಮಯ್ಯ ಗುರುವಾರ ಟ್ವೀಟ್ ಮಾಡಿದ್ದಾರೆ.
'ನಾನು ಅವರಲ್ಲಿ ಪ್ರತಿಯೊಬ್ಬರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಆದರೆ ಅವರ ಅಚಲ ಬೆಂಬಲಕ್ಕಾಗಿ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ವ್ಯಕ್ತಪಡಿಸುತ್ತೇನೆ' ಎಂದು ಅವರು ಹೇಳಿದ್ದಾರೆ.
ಸೋಮಣ್ಣ ಕೂಡ ತಮಗೆ ಬೆಂಬಲ ನೀಡಿದ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.
ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯ್ಕುಮಾರ್ ಮಾತನಾಡಿ, ಮತದಾನದ ಶೇಕಡಾವಾರು ಹೆಚ್ಚಳದಿಂದ ಕಾಂಗ್ರೆಸ್ ಪರವಾಗಿರುವುದು ಸೂಚಿಸುತ್ತದೆ ಎಂದು ಹೇಳಿದ್ದಾರೆ.
'ಈ ಬಾರಿ ಎಲ್ಲಾ ಸಮುದಾಯಗಳ ದೈನಂದಿನ ವೇತನದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದಾರೆ. ಲಿಂಗಾಯತ ಸೇರಿದಂತೆ ಇತರೆ ಸಮುದಾಯದ ಮತದಾರರು ಕೂಡ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದಾರೆ. ನನ್ನ ಅಂದಾಜಿನ ಪ್ರಕಾರ, ಸಿದ್ದರಾಮಯ್ಯ ವಿರುದ್ಧ ಯಾವುದೇ ಅಸಮಾಧಾನವಿಲ್ಲ ಮತ್ತು ಈ ಅಂಶ ಅವರಿಗೆ ಅನುಕೂಲವಾಗಲಿದೆ. ಕ್ಷೇತ್ರದ ಜನರ ನಾಡಿಮಿಡಿತ ನನಗೆ ಗೊತ್ತಿದೆ' ಎಂದಿದ್ದಾರೆ.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications