"ಪ್ರತಾಪ್ ಸಿಂಹ ಜೊತೆ ಹುಷಾರಾಗಿರು ಎಂದಿದ್ದರು ಸಿದ್ದರಾಮಯ್ಯ"; ಬಾಂಬ್ ಸಿಡಿಸಿದ ಸೋಮಣ್ಣ
ಮೈಸೂರು, ಅಕ್ಟೋಬರ್ 9: "ಪ್ರತಾಪ್ ಸಿಂಹನ ಜೊತೆ ಹುಷಾರಾಗಿರು. ಸುಲಭವಾಗಿ ಆತನನ್ನು ನಂಬಬೇಡ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದರು" ಎಂದು ಹೇಳಿಕೊಂಡಿದ್ದಾರೆ ಸಚಿವ ವಿ ಸೋಮಣ್ಣ. ನಾಡ ಹಬ್ಬ ದಸರಾವನ್ನು ಯಶಸ್ವಿಯಾಗಿ ನಿರ್ವಹಿಸಿದ ನಂತರ ಸೋಮಣ್ಣ, ಪ್ರತಾಪ್ ಸಿಂಹ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಸಂತಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಈ ಹೇಳಿಕೆಯನ್ನೂ ನೀಡಿದ್ದಾರೆ. "ದಸರಾ ಆಚರಣೆ ಸಿದ್ಧತೆ ಸಂದರ್ಭ ಸಿದ್ದರಾಮಯ್ಯ ಅವರಿಗೆ ಸಲಹೆ ಪಡೆಯಲೆಂದು ಎರಡು ಮೂರು ಬಾರಿ ಕರೆ ಮಾಡಿದ್ದೆ. ಆ ವೇಳೆ ಅವರು ಪ್ರತಾಪ್ ಸಿಂಹ ತುಂಬ ಬುದ್ಧಿವಂತ. ಆತನ ಜೊತೆ ಎಚ್ಚರದಿಂದಿರು. ಸುಲಭವಾಗಿ ನಂಬಬೇಡ ಎಂದು ಕಿವಿ ಮಾತು ಹೇಳಿದರು. ನೀವೆಲ್ಲಾ ದಸರಾ ಕಾರ್ಯಕ್ರಮವನ್ನು ಚೆನ್ನಾಗಿ ಮಾಡುತ್ತೀರಾ ಎಂಬ ಭರವಸೆ ಇದೆ ಎಂದಿದ್ದರು" ಎಂದು ಬಾಂಬ್ ಹಾಕಿದರು.

"ಮೈಸೂರು ಉಸ್ತುವಾರಿ ಸಚಿವನಾಗಿ ದಸರಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರೈಸಿದ್ದೇನೆ. ಈ ಅವಕಾಶ ನೀಡಿದ್ದಕ್ಕೆ ಮುಖ್ಯಮಂತ್ರಿಗಳಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಜಿಲ್ಲೆಯ ಎಲ್ಲಾ ಶಾಸಕರು, ಪರಿಷತ್ ಸದಸ್ಯರು, ಅಧಿಕಾರಿಗಳು ನನಗೆ ಸಹಕಾರ ನೀಡಿದರು" ಎಂದು ಧನ್ಯವಾದ ಅರ್ಪಿಸಿದರು. "ದಸರಾ ಅಂದರೆ ಅಂಬಾರಿ ಮೆರವಣಿಗೆಯಷ್ಟೇ ಅಂದುಕೊಂಡಿದ್ದೆ. ಆದರೆ ಇಷ್ಟೊಂದು ಕೆಲಸ ಕಾರ್ಯಗಳು ಇರುತ್ತವೆ ಎಂದು ಗೊತ್ತೇ ಇರಲಿಲ್ಲ. ಇಡೀ ದಸರಾ ಸಂಪೂರ್ಣವಾಗಿ ಯಶಸ್ವಿಯಾಗಿದೆ. ಇದಕ್ಕೆ ಕಾರಣ ಬಿಎಸ್ ಯಡಿಯೂರಪ್ಪ ಹಾಗೂ ಸಹಕಾರ ನೀಡಿದ ಜಿಲ್ಲೆಯ ಸಂಸದ ಪ್ರತಾಪ್ ಸಿಂಹ" ಎಂದು ಹೊಗಳಿದರು.
"ದಸರಾ ಉಸ್ತುವಾರಿ ವಹಿಸಿದ್ದಾಗಿನಿಂದ ನಿಷ್ಠೆಯಿಂದ ಕಾರ್ಯನಿರ್ವಹಿಸಿದ್ದೇನೆ. ಇನ್ನು ವಸತಿ ಸಚಿವನಾಗಿ ಸಂಪುಟದಲ್ಲಿರುತ್ತೇನೆ. ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ನಡೆಸಿ ಪ್ರವಾಹ ಸಂತ್ರಸ್ತರ ಕಷ್ಟ ಆಲಿಸುತ್ತೇನೆ. ಅವರಿಗೆ ಮನೆ ಕಟ್ಟಿಕೊಡುತ್ತೇನೆ" ಎಂದರು.
-
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ












Click it and Unblock the Notifications