ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಗನ ಗೆಲ್ಲಿಸಿದ ವರುಣಾ ಮತದಾರರಿಗೆ ಸಿದ್ದರಾಮಯ್ಯರಿಂದ ಹೋಳಿಗೆ ಊಟ

By Manjunatha
|
Google Oneindia Kannada News

ಮೈಸೂರು, ಜೂನ್ 12: ಗೆಲುವಿಗೆ ಕಾರಣರಾದ ಬಾದಾಮಿ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಿದ ಬಳಿಕ ಮಗನನ್ನು ಗೆಲ್ಲಿಸಿರುವ ವರುಣಾ ಕ್ಷೇತ್ರದ ಜನರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ.

ಮೈಸೂರಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕೃತಜ್ಞತಾ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರು ವರುಣಾ ಮತದಾರರಿಗೆ ಧನ್ಯವಾದ ಅರ್ಪಿಸಿದರು. ಆ ನಂತರ ಎಲ್ಲರಿಗೂ ಹೋಳಿಗೆ ಊಟ ಹಾಕಲಾಯಿತು.

ಜನರೇ ಟೋಪಿ ಹಾಕಿದ್ರು, ನೀನ್ಯಾಕೆ ಈಗ ಟೋಪಿ ಹಾಕ್ತಿಯಪ್ಪ ಎಂದ ಸಿದ್ದು ಜನರೇ ಟೋಪಿ ಹಾಕಿದ್ರು, ನೀನ್ಯಾಕೆ ಈಗ ಟೋಪಿ ಹಾಕ್ತಿಯಪ್ಪ ಎಂದ ಸಿದ್ದು

ಕಾರ್ಯಕ್ರಮದಲ್ಲಿ ಸಾವಿರಾರು ಜನ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಎಲ್ಲರಿಗೂ ಕಲ್ಯಾಣ ಮಂಟಪದಲ್ಲಿಯೇ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

Siddaramiah thanks Varuna constituency people

ವರುಣಾದಲ್ಲಿ ಚುನಾವಣೆಗೆ ನಿಂತಿದ್ದ ಯತೀಂದ್ರ ಸಿದ್ದರಾಮಯ್ಯ ಅವರು 58616 ಮತಗಳ ಬೃಹತ್ ಅಂತರದಿಂದ ಗೆಲುವು ಪಡೆದಿದ್ದಾರೆ. ಆದರೆ ಪಕ್ಕದ ಕ್ಷೇತ್ರವಾದ ಚಾಮುಂಡೇಶ್ವರಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಸೋಲನ್ನನುಭವಿಸಿದ್ದರು.

English summary
Former CM Siddaramiah today visited Varuna constituency to thank people for voting his son Yathindra Siddaramiah. He arranged a food for the voters and congress party workers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X