Siddeshwara Swamiji: ಮೈಸೂರಿಗೂ, ಸಿದ್ದೇಶ್ವರ ಶ್ರೀಗಳಿಗೂ ಅವಿನಾಭಾವ ನಂಟು, ಹೇಗೆ?; ಇಲ್ಲಿದೆ ವಿವರ
ಮೈಸೂರು, ಜನವರಿ, 03: ವಿಜಯಪುರ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀಸಿದ್ಧೇಶ್ವರ ಸ್ವಾಮೀಜಿ ಅವರು 2012ರಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿದ್ದರು. ಅಲ್ಲದೆ, ಮೈಸೂರಿಗೂ ಹಾಗೂ ಶ್ರೀಗಳಿಗೂ ಅವಿನಾಭಾವ ನಂಟು ಕೂಡ ಇದೆ.
ಶ್ರೀಗಳು 1991ರಲ್ಲಿ ಭಗವಂತನ ಕುರಿತು ಪ್ರವಚನ ನೀಡಲು ಒಂದು ತಿಂಗಳವರೆಗೆ ಮೈಸೂರಿನ ನಕತ್ರಾರಂನಲ್ಲಿ ತಂಗಿದ್ದರು. ಬಳಿಕ 1995ರಲ್ಲಿ ಭಕ್ತಿಯೋಗ, 1999ರಲ್ಲಿ ಈಶ ಉಪನಿಷತ್ತು ಮತ್ತು 2000ರಲ್ಲಿ ವಿಶ್ವವಿದ್ಯಾಲಯದಲ್ಲಿ ಯೋಗೋಪನಿಷತ್ತು ಕುರಿತು ಪ್ರವಚನ ನೀಡಿದ್ದರು. ಸಿದ್ಧೇಶ್ವರ ಸ್ವಾಮೀಜಿ ಅವರು ಮೈಸೂರಿಗೆ ಆಗಮಿಸಿದರೆ ಸುತ್ತೂರಿನ ವಸತಿಗೃಹದಲ್ಲಿ ತಂಗುತ್ತಿದ್ದರು. ಶ್ರೀಗಳ ಪ್ರವಚನವನ್ನು ಆಲಿಸಲು ಸಹಸ್ರಾರು ಭಕ್ತರು ಉತ್ಸುಕರಾಗಿರುತ್ತಿದ್ದರು. ಪ್ರತಿದಿನ ಮುಂಜಾನೆ ಶ್ರೀಗಳು ಚಾಮುಂಡಿಬೆಟ್ಟ ಏರಿ ಬಸವನ ಬಳಿ ಚಿಂತನದಲ್ಲಿ ತೊಡಗಿ ಕೆಳಗಿಳಿಯುತ್ತಿದ್ದರು. ಹೀಗೆ ಸತತವಾಗಿ ಮೂರುವರೆ ತಿಂಗಳು ಮೈಸೂರಿನಲ್ಲಿ ತಂಗಿದ್ದರು.

ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದ ಶ್ರೀಗಳು
ಮೈಸೂರು ವಿಶ್ವ ವಿದ್ಯಾಲಯ ಬಸವೇಶ್ವರ ಅಧ್ಯಯನ ಪೀಠಕ್ಕಾಗಿ ಒಂದು ಭವನ ನಿರ್ಮಿಸಲು ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಶ್ರೀಗಳು ಆಗಮಿಸಿ ಮಾತನಾಡಿದ್ದರು. ಕಳೆದ ವರ್ಷ ಜೂನ್ ತಿಂಗಳಿನಲ್ಲಿ ಜೆಎಸ್ಎಸ್ ಸಂಸ್ಥೆಯ ಸಂಸ್ಕೃತ ಪಾಠಶಾಲೆಯ ನೂತನ ಕಟ್ಟಡ ಮತ್ತು ವಿದ್ಯಾರ್ಥಿನಿಲಯವನ್ನು ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ಸಿದ್ದೇಶ್ವರ ಸ್ವಾಮೀಜಿ ಕೂಡ ವೇದಿಕೆ ಹಂಚಿಕೊಂಡಿದ್ದರು. ಗಣಪತಿ ಸಚ್ಚಿದಾನಂದ ಆಶ್ರಮಕ್ಕೂ ಭೇಟಿ ನೀಡಿದ್ದನ್ನು ಸ್ಮರಿಸಬಹುದಾಗಿದೆ.

ಮೈಸೂರಿಗೂ, ಶ್ರೀಗಳಿಗೂ ಅವಿನಾಭಾವ ನಂಟು
ಮೈಸೂರು ವಿಶ್ವದ್ಯಾಲಯವಿ ವಿಶ್ರಾಂತ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು 2002ರಲ್ಲಿ ಶ್ರೀಗಳನ್ನು ಗಣಕವಿಜ್ಞಾನ ವಿಭಾಗಕ್ಕೆ ಆಹ್ವಾನಿಸಿ ವಿಶೇಷ ಉಪನ್ಯಾಸ ಏರ್ಪಡಿಸಿದ್ದರು. ಇಂದಿನ ಮಾಹಿತಿ ಯುಗದಲ್ಲಿ ಜ್ಞಾನ ಹಾಗೂ ತಂತ್ರಜ್ಞಾನದ ಪಾತ್ರ, ಅದರ ಕೊಡುಗೆ ಕುರಿತು ಶ್ರೀಗಳು ಉಪನ್ಯಾಸ ನೀಡಿದ್ದರು. ಅಲ್ಲದೆ, ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜೀವನದಲ್ಲಿ ರೂಢಿಸಿಕೊಳ್ಳಬಹುದಾದ ಮೌಲ್ಯಗಳ ಬಗ್ಗೆ ಸಂದೇಶ ನೀಡುತ್ತಿದ್ದರು. ಹಾಗೆಯೇ ಜೆಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿಯೂ ಶ್ರೀಗಳು ಭಾಗವಹಿಸಿದ್ದರು. ಹೀಗೆ ಸಿದ್ದೇಶ್ವರ ಶ್ರೀಗಳಿಗೂ ಮತ್ತು ಮೈಸೂರಿಗೂ ಇರುವ ಅವಿನಾಭವ ನಂಟಾಗಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications