ಮೈಸೂರು ವಿವಿಯಲ್ಲಿ ಪಿಎಚ್ಡಿ ಪಡೆದ ಸಿಕ್ಕಿಂ ಬುಡಕಟ್ಟು ಸಮುದಾಯದ ಯುವತಿ
ಮೈಸೂರು, ಮಾರ್ಚ್ 08; ಈಶಾನ್ಯ ರಾಜ್ಯಗಳಲ್ಲಿ ಒಂದಾದ ಸಿಕ್ಕಿಂ ರಾಜ್ಯದ ಭುಟಿಯಾ ಎಂಬ ಬುಡಕಟ್ಟು ಸಮುದಾಯಕ್ಕೆ ಸೇರಿದ ಡಿಕಿಲಾ ಎಂಬ ಯುವತಿ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪಿಎಚ್ಡಿ ಪದವಿ ಪಡೆದಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದ ಪ್ರತಿಕೋದ್ಯಮ ವಿಭಾಗದಿಂದ ಪಿಎಚ್ಡಿ ಪಡೆದ ಮೊದಲ ಸಿಕ್ಕಿಂ ಮೂಲದ ಯುವತಿ ಡಿಕಿಲಾ. 2015ರಲ್ಲಿ ಬೆಂಗಳೂರಿನ ಸಿಎಂಆರ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು, 2016ರಲ್ಲಿ ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಎನ್.ಮಮತಾ ಅವರ ಮಾರ್ಗದರ್ಶನದಲ್ಲಿ ಪಿಎಚ್ಡಿ ಆರಂಭಿಸಿದ್ದರು.
'ನ್ಯೂಸ್ ಪೇಪರ್ ಅಂಡ್ ಡೆಮಾಕ್ರಸಿ ಇನ್ ದ ಸ್ಟೇಟ್ ಆಫ್ ಸಿಕ್ಕಿಂ' ಎಂಬ ವಿಷಯದಲ್ಲಿ ಮಹಾಪ್ರಬಂಧವನ್ನು ಮಂಡಿಸಿದ್ದಾರೆ. ಡಿಕಿಲಾ ಅವರು ಪ್ರಸ್ತುತ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಸ್ನೇಹಿತರೊಬ್ಬರ ಸೂಚನೆಯಂತೆ ಬೆಂಗಳೂರಿನ ಸಿಎಂಆರ್ ಕಾಲೇಜಿಗೆ ಸೇರಿದ್ದ ಡಿಕಿಲಾ ಅವರಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಪಿಎಚ್ಡಿ ಮಾಡುವ ಆಸೆ ಚಿಗುರಿತ್ತು. ಈಗ ಪಿಎಚ್ಡಿ ಪದವಿಯನ್ನು ಪಡೆದು ಹೊಸ ದಾಖಲೆ ಮಾಡಿದ್ದಾರೆ.
"ದೇಶದಲ್ಲೇ ಮೈಸೂರು ವಿಶ್ವವಿದ್ಯಾಲಯಕ್ಕೆ ಒಳ್ಳೆಯ ಹೆಸರು, ಘನತೆ ಇದೆ. ಇಲ್ಲಿಗೆ ಬಂದ ಬಳಿಕ ನನಗೆ ಎದುರಾದ ಪ್ರಮುಖ ಸಮಸ್ಯೆ ಭಾಷೆ. ಆದರೂ, ಕನ್ನಡವನ್ನು ತಕ್ಕಮಟ್ಟಿಗೆ ಅರ್ಥ ಮಾಡಿಕೊಳ್ಳುತ್ತೇನೆ. ಇಲ್ಲಿನ ವಾತಾವರಣ, ಕಲೆ, ಸಂಸ್ಕೃತಿ ನನಗೆ ತುಂಬಾ ಇಷ್ಟವಾಯಿತು" ಎಂದು ಡಿಕಿಲಾ ಹೇಳಿದ್ದಾರೆ.
ದಕ್ಷಿಣ ಸಿಕ್ಕಿಂ ಜಿಲ್ಲೆಯ ರವಾಂಗ್ಲ ಎಂಬ ಪಟ್ಟಣದವರು ಡಿಕಿಲಾ. ತಂದೆ ಛಾತುಕ್ ಭುಟಿಯಾ, ತಾಯಿ ಯಂಗ್ ಜೂನ್. ತಂದೆ ಶಿಕ್ಷಕರು, ಇಬ್ಬರು ಅಣ್ಣಂದಿರಿದ್ದು ಅವರು ಇಂಜಿನಿಯರ್ಗಳಾಗಿದ್ದಾರೆ.
"ಭುಟಿಯಾ ಬುಡಕಟ್ಟು ಸಮುದಾಯವಾದರೂ, ಆರ್ಥಿಕವಾಗಿ ಸದೃಢರಾಗಿದ್ದಾರೆ. ಲಿಪ್ಚಾ ಎಂಬ ಸಮುದಾಯದಲ್ಲಿ ಮಾತ್ರ ಹೆಚ್ಚಿನ ಬಡವರಿದ್ದಾರೆ. ಸಿಕ್ಕಿಂನಲ್ಲಿ ಹಿಂದೂಗಳು ಹೆಚ್ಚಾಗಿದ್ದರೂ, ಬೌದ್ಧ ಸಂಸ್ಕೃತಿಯ ಪ್ರಭಾವ ಹೆಚ್ಚಾಗಿದೆ. ಬೌದ್ಧ ದೇವಾಲಯಗಳು ಹೆಚ್ಚಾಗಿವೆ. ನೈಸರ್ಗಿಕ ಪರಿಸರವೂ ಉತ್ತಮವಾಗಿದೆ" ಡಿಕಿಲಾ ತಿಳಿಸಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications