ಯುವ ಸಮೂಹ ಹುಚ್ಚೆದ್ದು ಕುಣಿಯುವಂತೆ ಮಾಡಿದ ಬಾದಶಾ ಹಾಡು
ಮೈಸೂರು, ಅಕ್ಟೋಬರ್. 14 : ಹಿಂದಿ ಗಾಯಕ ಬಾದಶಾ ತಂಡದವರು ನಡೆಸಿಕೊಟ್ಟ ಆಲ್ಬಂ ಸಂಗೀತ ನೆರೆದಿದ್ದವರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತು.
ಯುವ ದಸರಾ ಪಯುಕ್ತ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಎರಡನೇ ದಿನದ ಕಾರ್ಯಕ್ರಮದಲ್ಲಿ ಪ್ರಖ್ಯಾತ ಗಾಯಕರಾದ ಬಾದಶಾ, ಆಸ್ತಗಿಲ್ ತಂಡದ ಗಾಯನದ ಮೋಡಿ ಯುವ ಸಮೂಹ ಸಂಭ್ರಮದಲ್ಲಿ ಮುಳುಗೇಳುವಂತೆ ಮಾಡಿದೆ.
ಲಗೋರಿ ತಂಡ ನಡೆಸಿಕೊಟ್ಟ ಬಹ್ಮ ನಿಂಗೆ ಜೋಡಿಸ್ತಿನಿ ಹೆಂಡ ಮುಟ್ಟಿದ್ ಕೈನಾ.., ದುನಿಯಾರೆ ದುನಿಯ.., ಕುಲದಲ್ಲಿ ಕೀಳಾವುದೋ ಹುಚ್ಚಪ್ಪ.., ತರವಲ್ಲ ತಂಗಿ ನಿನ್ನ ತಂಬೂರಿ ಪದ.., ಎಳ್ಕೊಳಕ್ಕೊಂದೂರು, ತಲೆಮ್ಯಾಗೆ ಒಂಚೂರು..' ಗೀತೆಗಳಿಗೆ ನೆರೆದಿದ್ದವರನ್ನು ಕುಣಿದು ಕುಪ್ಪಳಿಸುವಂತೆ ಮಾಡಿತು.

ನಾಗಮಂಗಲದ ಬಿಜಿಎಸ್ ಕಾಲೇಜು ತಂಡ ಬುದ್ಧ ಶರಣಂ ಗಚ್ಚಾಮಿ.., ಜೋಗಯ್ಯ ನೃತ್ಯ ಅಕಾಡೆಮಿಯು ಅಕ್ಕಯ್ಯ ನೋಡುಬಾರೆ ಚೆಲುವನಾ' ಎಂಬ ಗೀತೆಗಳಿಗೆ ನೃತ್ಯ ಪ್ರದರ್ಶಿಸಿ ನೆರೆದಿದ್ದವರ ಮನ ತಣಿಸಿದವು.
ಅಂಬಾರಿ ಡ್ಯಾನ್ಸ್ ಅಕಾಡೆಮಿ 'ರಾವಣ' ಕುರಿತು ನರ್ತಿಸಿದರೆ, ಡಿವೈನ್ ಡ್ಯಾನ್ಸ್ ಅಕಾಡೆಮಿ ಐಗಿರಿ.. ನಂದಿನಿ' ಸಂಗೀತದ ಮೂಲಕ ನವಶಕ್ತಿ ವೈಭವ ಪ್ರದರ್ಶಿಸಿತು.
ರಾತ್ರಿ 8.30ಕ್ಕೆ ಇದ್ದಂತಹ ಕಾರ್ಯಕ್ರಮ ರಾತ್ರಿ 10ಕ್ಕೆ ಆರಂಭವಾದ್ದರಿಂದ ತಮ್ಮ ನೆಚ್ಚಿನ ಗಾಯಕನ ಹಾಡಿಗೆ ಕಾದು ಕುಳಿತ್ತಿದ್ದ ಯುವ ಸಮೂಹ ವೇದಿಕೆಯ ಬಲಬದಿಯಲ್ಲಿ ಅಡ್ಡಲಾಗಿದ್ದ ಮರವನ್ನು ಹಾರಿ ಮುಂದೆ ಓಡಿ ಬಂದರು. ಬಾದಶಾ, ಬಾದಶಾ ಎಂದು ಹೆಸರನ್ನೂ ಸಾಮೂಹಿಕವಾಗಿ ಹೇಳಿ ಕಿರುಚಲಾರಂಭಿಸಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications