ಇದು ಟ್ರೆಂಡ್; ರಾಖಿ ಕಟ್ಟಿ ಹೆಲ್ಮೆಟ್ ನೀಡುತ್ತಿದ್ದಾರೆ ಸಹೋದರಿಯರು
ಮೈಸೂರು, ಆಗಸ್ಟ್ 14 : ರಾಖಿ ಕಟ್ಟಿದ ಸೋದರಿಯರಿಗೆ ಉಡುಗೊರೆ ನೀಡುವುದು ವಾಡಿಕೆ. ಆದರೆ ಈಗ ಹಾಗಿಲ್ಲ. ತಂಗಿಯರೂ ಅಣ್ಣನಿಗೆ ಉಡುಗೊರೆ ನೀಡುತ್ತಾರೆ. ರಕ್ಷಾ ಬಂಧನದ ದಿನ ಅಣ್ಣನಿಗೆ ರಾಖಿ ಕಟ್ಟಿ ಅವನ ರಕ್ಷಣೆಗಾಗಿ ಹೆಲ್ಮೆಟ್ ಉಡಗೊರೆಯಾಗಿ ನೀಡುತ್ತಿದ್ದಾರೆ.
ಹುತಾತ್ಮ ಅಣ್ಣನ ಪ್ರತಿಮೆಗೆ ರಾಖಿ ಕಟ್ಟಿ ಕಣ್ಣೀರಿಟ್ಟ ತಂಗಿ
ಹೌದು. ನಾಳೆ ಎಲ್ಲೆಡೆ ರಕ್ಷಾ ಬಂಧನದ ಸಂಭ್ರಮ. ಈಗಾಗಲೇ ಮಾರುಕಟ್ಟೆಯಲ್ಲಿ ವೈವಿಧ್ಯಮಯ ರಾಖಿಗಳು ಬಿಕರಿಯಾಗುತ್ತಿವೆ. ರಾಖಿ ಜೊತೆ ನಗರದಲ್ಲಿ ಕೆಲವರು ಸಹೋದರಿಯರು ತಮ್ಮ ಸಹೋದರರಿಗೆ ಹೆಲ್ಮೆಟ್ ಕಾಣಿಕೆ ನೀಡುವ ಮೂಲಕ ರಕ್ಷಾ ಬಂಧನಕ್ಕೆ ವಿಶಿಷ್ಟ ಅರ್ಥ ಕಲ್ಪಿಸಿದ್ದಾರೆ. ಹಲವು ಯುವತಿಯರು ಹಾಗೂ ಗೃಹಿಣಿಯರು ಈ ಬಾರಿಯ ರಾಖಿ ಹಬ್ಬಕ್ಕೆ ಹೆಲ್ಮೆಟ್ ಉಡುಗೊರೆ ನೀಡಲು ಮುಂದಾಗಿದ್ದಾರೆ.

ಪ್ರೀತಿಯ ಅಣ್ಣ- ತಮ್ಮಂದಿರಿಗೆ ರಾಖಿ ಕಟ್ಟಿ ರಕ್ಷಣೆ ಕೋರುವುದು ಹಬ್ಬದ ವಾಡಿಕೆ. ಆದರೆ, ಈಗ ಕಾಲ ಬದಲಾಗಿದೆ. ಗಂಡುಮಕ್ಕಳಿಗೂ ತಮ್ಮ ಸಹೋದರಿಯರಿಂದ ರಕ್ಷಣೆ ಅಗತ್ಯವಿದೆ. ಹೀಗೆ ರಾಖಿ ಕಟ್ಟಿದ ಮೇಲೆ ಸಹೋದರರ ಜೀವ ರಕ್ಷಣೆಗಾಗಿ ಹೆಲ್ಮೆಟ್ ನೀಡಿ ಸುರಕ್ಷಿತವಾ ಗಿರುವಂತೆ ಹಾರೈಸುತ್ತಿದ್ದಾರೆ.

ಸುಪ್ರೀಂಕೋರ್ಟ್ ಹೆಲ್ಮೆಟ್ ಕಡ್ಡಾಯ ನಿಯಮ ಜಾರಿ ತಂದ ನಂತರ ಹೆಲ್ಮೆಟ್ ಧರಿಸದೇ ಸಂಚರಿಸುತ್ತಿದ್ದವರು ಆಲೋಚಿಸುವಂತಾಗಿದೆ. ಹೆಲ್ಮೆಟ್ ಧರಿಸದಿರುವುದು ಸೇರಿ ಮತ್ತಿತರೆ ಕಾರಣಕ್ಕೆ ಇನ್ಮುಂದೆ 1 ಸಾವಿರ ರೂ ದಂಡ ಪಾವತಿಸಬೇಕು. ಈ ಕಾರಣಕ್ಕಾಗಿ ಹೆಲ್ಮೆಟ್ ನೀಡುವುದು ಎಲ್ಲಾ ರೀತಿಯಿಂದಲೂ ಒಳ್ಳೆಯದೇ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications