Get Updates
Get notified of breaking news, exclusive insights, and must-see stories!

CM ಪರಿಹಾರ ನಿಧಿಗೆ ಭೈರಪ್ಪ, PM ಪರಿಹಾರ ನಿಧಿಗೆ ಕಣವಿ ದೇಣಿಗೆ

ಮೈಸೂರು, ಧಾರವಾಡ, ಏಪ್ರಿಲ್ 10: ಕೊರೊನಾ ನಿಯಂತ್ರಣ ಸಹಾಯ ಆಗುವಂತೆ ದೇಣಿಗೆ ನೀಡಲು ಕನ್ನಡ ಖ್ಯಾತ ಸಾಹಿತಿಗಳು ಮುಂದೆ ಬಂದಿದ್ದಾರೆ. ಸಾಹಿತಿ ಎಸ್‌ ಎಲ್ ಭೈರಪ್ಪ ಹಾಗೂ ಕವಿ ಡಾ ಚೆನ್ನವೀರ ಕಣವಿ ನೆರವು ನೀಡಿದ್ದಾರೆ.

ನಿನ್ನೆ ಎಸ್‌ ಎಲ್‌ ಭೈರಪ್ಪ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ಹಣವನ್ನು ನೀಡಿದ್ದಾರೆ. ಮೈಸೂರಿನಲ್ಲಿ ಒಂದು ಲಕ್ಷ ರೂಪಾಯಿಯ ಚೆಕ್‌ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣರಿಗೆ ನೀಡಿದರು. ಈ ವೇಳೆ ಮೈಸೂರು ಸಂಸದ ಪ್ರತಾಪ್ ಸಿಂಹ ಸಹ ಹಾಜರಿದ್ದರು.

ಇಂದು ಧಾರವಾಡದಲ್ಲಿ ಕವಿ ಚನ್ನವೀರ ಕಣವಿ ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಒಂದು ಲಕ್ಷ ರೂಪಾಯಿಗಳ ನೆರವನ್ನು ಕೊರೊನಾ ಹೋರಾಟಕ್ಕೆ ನೀಡಿದ್ದಾರೆ. ಶಾಸಕ ಅರವಿಂದ ಬೆಲ್ಲದ ಮೂಲಕ ಪಿಎಂ ಪರಿಹಾರ ನಿಧಿಗೆ ಚೆಕ್ ತಲುಪಿಸಿದರು.

Sl Bhyrappa Donated For Cm Fund And Channaveera Kanavi Donated For Pm Fund

ಈ ವೇಳೆ ಮಾತನಾಡಿರುವ ಅವರು, ಜನರು ಮನೆ ಬಿಟ್ಟು ಹೊರಗೆ ಬರಬಾರದು ಎಂದು ಮನವಿ ಮಾಡಿದ್ದಾರೆ. ಲಾಕ್ ಡೌನ್ ಮುಂದುಡುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಂದಹಾಗೆ, ಕರ್ನಾಟಕದಲ್ಲಿ 197 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. 6 ಮಂದಿ ಕೊರೊನಾದಿಂದ ಮರಣ ಹೊಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+