ಮಾ.12ರಿಂದ ಎಸ್.ಎಲ್ ಭೈರಪ್ಪನವರ 'ಪರ್ವ' ಕಾದಂಬರಿ ನಾಟಕ ಪ್ರದರ್ಶನ
ಮೈಸೂರು, ಮಾರ್ಚ್ 10: ಹಿರಿಯ ರಂಗ ನಿರ್ದೇಶಕ ಪ್ರಕಾಶ್ ಬೆಳವಾಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ 'ಪರ್ವ' ಕಾದಂಬರಿ ನಾಟಕ ಮಾರ್ಚ್ 12ರಿಂದ ಮೂರು ದಿನಗಳ ಕಾಲ ಪ್ರದರ್ಶನವಾಗಲಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದರು.
ಮೈಸೂರಿನ ರಂಗಾಯಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ನಗರದ ಕಲಾಮಂದಿರದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ನಾಟಕಕ್ಕೆ ಸಾಹಿತಿ ಎಸ್.ಎಲ್.ಭೈರಪ್ಪ ಚಾಲನೆ ನೀಡಲಿದ್ದು, ಪರ್ವ ಕಾದಂಬರಿಯ ರಂಗರೂಪ ಮತ್ತು 7 ಗಂಟೆ 30 ನಿಮಿಷಗಳ ನಾಟಕ ಪ್ರದರ್ಶನವಾಗಿದೆ. ವಿಶೇಷ ಯೋಜನೆಯ ಅನುಷ್ಠಾನಕ್ಕಾಗಿ ರಂಗಾಯಣ 12 ಹಿರಿಯ ಕಲಾವಿದರ ಜೊತೆಗೆ 25 ಮಂದಿ ಕಲಾವಿದರು 10 ತಂತ್ರಜ್ಞರ ಆಯ್ಕೆ ಮಾಡಿದೆ ಎಂದಿದ್ದಾರೆ.
ಕಳೆದ ಆರು ತಿಂಗಳಿನಿಂದ ಸತತವಾಗಿ ತಾಲೀಮು ನಡೆಸಲಾಗುತ್ತಿದೆ. ಇದೀಗ 12ರಂದು ನಾಟಕ ಪ್ರದರ್ಶನವಾಗುತ್ತಿದೆ. ಕಲಾಮಂದಿರದಲ್ಲಿ ಪ್ರದರ್ಶನ ನಡೆಯಲಿದ್ದು 10ಕ್ಕೆ ನಾಟಕ ಆರಂಭವಾಗಿ 6.30ಕ್ಕೆ ಮುಗಿಯಲಿದೆ. ರಂಗಮಂದಿರದ 2 ಕಡೆಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ, 70% ಟಿಕೆಟ್ ಸೇಲ್ ಆಗಿದೆ ಎಂದು ಮಾಹಿತಿ ನೀಡಿದರು.

ಎಸ್.ಎಲ್.ಬೈರಪ್ಪ ನವರ ಪರ್ವ ನಾಟಕಕ ಪ್ರದರ್ಶನ ಒಂದು ಮೈಲಿಗಲ್ಲಾಗಬೇಕು ಎಂಬ ಆಸೆ ಹೊತ್ತಿದ್ದೆವು. ರಾಜ್ಯದಾದ್ಯಂತ ಇದರ ಪ್ರದರ್ಶನಕ್ಕೆ ಹಣಕಾಸಿನ ನೆರವು ಕೇಳಿದ್ದೆವು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಹಾಗೂ ಶಾಸಕ ನಾಗೇಂದ್ರ ಅವರಿಗೆ ಮನವಿ ಮಾಡಲಾಗಿತ್ತು. ಬಜೆಟ್ ನಲ್ಲಿ ಹಣ ಕೊಡಿಸುವುದಾಗಿ ತಿಳಿಸಿದ್ದಾರೆ ಎಂದರು.
ಸದ್ಯ ಬಜೆಟ್ ನಲ್ಲಿ ರಂಗಾಯಣ ಹೆಸರು ಪ್ರಸ್ತಾಪಿಸಿ ಪರ್ವ ನಾಟಕ ಪ್ರದರ್ಶನಕ್ಕೆ ಒಂದು ಕೋಟಿ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ನವರಿಗೆ ರಂಗಾಯಣದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications