ಉಪಚುನಾವಣೆ ಪ್ರಚಾರಕ್ಕಾಗಿ ಮೈಸೂರಿಗೆ ಬಂದ ಕೃಷ್ಣ
ಕಾಂಗ್ರೆಸ್ ನ ಹಿರಿಯ ನಾಯಕರಾಗಿದ್ದ ಎಸ್ ಎಂ ಕೃಷ್ಣ, ಮಾರ್ಚ್ 22 ರಂದು ಅಧಿಕೃತವಾಗಿ ಬಿಜೆಪಿ ಸೇರಿದ ಮೇಲೆ ಇದೇ ಮೊದಲಬಾರಿಗೆ ಉಪಚುನಾವಣಾ ಪ್ರಚಾರಕ್ಕಾಗಿ ಮೈಸೂರಿಗೆ ಬಂದಿದ್ದಾರೆ.
ಮೈಸೂರು, ಏಪ್ರಿಲ್ 3: ನಂಜನಗೂಡು ಮತ್ತು ಗುಂಡ್ಲೆಪೇಟೆ ಎರಡು ಉಪಚುನಾವಣಾ ಕ್ಷೇತ್ರಗಳಲ್ಲೂ ಬಿಜೆಪಿ ಅದ್ಭುತ ಜಯ ದಾಖಲಿಸಲಿದೆ ಎಂದು ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದು, ಬಿಜೆಪಿ ಅದ್ಭುತ ಜಯ ಸಾಧಿಸಲಿದೆ ಎಂದು ಅನುಭವದ ಮಾತುಗಳನ್ನಾಡಿದರು. ಬಿಜೆಪಿ ಸೇರಿದ ಮೇಲೆ ಅವರು ಮೊದಲ ಬಾರಿಗೆ ಪ್ರಚಾರಕ್ಕೆ ಇಳಿದಿದ್ದಾರೆ.
ಏಪ್ರಿಲ್ 9, ಭಾನುವಾರದಂದು ನಡೆಯಲಿರುವ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡ್ಡಿಯೂರಪ್ಪರಂಥ ಘಟಾನುಘಟಿ ನಾಯಕರ ಉಪಸ್ಥಿತಿ ಮತ್ತಷ್ಟು ಕಳೆತಂದಿದೆ. ಇದೀಗ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಸಹ ಪ್ರಚಾರ ಕಣಕ್ಕಿಳಿದಿರುವುದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.[ಎಸ್.ಎಂ. ಕೃಷ್ಣ ಅಧಿಕೃತವಾಗಿ ಬಿಜೆಪಿ ಸೇರ್ಪಡೆ]

ಅರಮನೆ ನಗರಿಗೆ ಕೃಷ್ಣಾಗಮನ
ಕಾಂಗ್ರೆಸ್ ನ ಹಿರಿಯ ನಾಯಕರಾಗಿದ್ದ ಎಸ್ ಎಂ ಕೃಷ್ಣ, ಮಾರ್ಚ್ 22 ರಂದು ಅಧಿಕೃತವಾಗಿ ಬಿಜೆಪಿ ಸೇರಿದ ಮೇಲೆ ಇದೇ ಮೊದಲಬಾರಿಗೆ ಉಪಚುನಾವಣಾ ಪ್ರಚಾರಕ್ಕಾಗಿ ಮೈಸೂರಿಗೆ ಬಂದಿದ್ದಾರೆ. ಅವರ ಅಭಿಮಾನಿಗಳಿಗೆ ಕೃಷ್ಣ ಆಗಮನದಿಂದ ಮತ್ತಷ್ಟು ಬಲಬಂದಂತಾಗಿದೆ.[ಕೃಷ್ಣ ಸೇರಿದ್ದೇ ಸೇರಿದ್ದು, ಬಿಜೆಪಿ ಲೆಕ್ಕಾಚಾರವೂ ಬದಲು!]

ಟ್ರೇನಿನಲ್ಲಿ ಬಂದ ಕೃಷ್ಣ
ಬೆಂಗಳೂರಿನಿಂದ ಅರಮನೆ ನಗರಿಗೆ ಇಂದು (ಏಪ್ರಿಲ್ 3), ಟಿಪ್ಪು ಎಕ್ಸ್ ಪ್ರೆಸ್ ಟ್ರೇನಿನಲ್ಲಿ ಬಂದ ಕೃಷ್ಣ ಅವರೊಂದಿಗೆ ಬಿಜೆಪಿ ಮುಖಂಡ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಸಹ ಇದ್ದರು.[ಮೋದಿ ಆದರ್ಶಗಳಿಗೆ ಮರುಳಾಗಿ ಬಿಜೆಪಿ ಸೇರಿದೆ: ಎಸ್ಸೆಂ ಕೃಷ್ಣ]

ಸ್ಟಾರ್ ಐಕಾನ್ ಗೆ ಆತ್ಮೀಯ ಸ್ವಾಗತ
ಬಿಜೆಪಿಯ ಸ್ಟಾರ್ ಐಕಾನ್ ಎಸ್.ಎಂ.ಕೃಷ್ಣ ಅವರನ್ನು ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಿಜೆಪಿ ನಗರಾಧ್ಯಕ್ಷ ಬಿ.ಮಂಜುನಾಥ್ ಸೇರಿದಂತೆ ಹಲವು ಕಾರ್ಯಕರ್ತರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಗದ್ದುಗೆ ಬಿಜೆಪಿಗೇ!
ಈ ಸಂದರ್ಭ ಮಾತನಾಡಿದ ಎಸ್.ಎಂ.ಕೃಷ್ಣ ಇಂದಿನಿಂದ ಎರಡೂ ಕ್ಷೇತ್ರಗಳ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಎರಡೂ ಕ್ಷೇತ್ರದಲ್ಲಿಯೂ ಬಿಜೆಪಿ ಅದ್ಭುತ ಗೆಲುವನ್ನು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭವಿಷ್ಯ ನಿಜವಾಗುತ್ತಾ?
ಏಪ್ರಿಲ್ 13, ಗುರುವಾರದಂದು ಹೊರಬೀಳಲಿರುವ ಫಲಿತಾಂಶ ಎಸ್.ಎಂ.ಕೃಷ್ಣ ಅವರು ನುಡಿದ ಭವಿಷ್ಯ ನಿಜವಾಗುತ್ತದೆಯೇ, ಇಲ್ಲವೆ ಎಂಬುದನ್ನು ನಿರ್ಧರಿಸಲಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications