ಮಾ. 27 ರಂದು ಗುಂಡ್ಲುಪೇಟೆಗೆ ಕೃಷ್ಣಾಗಮನ!
ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಅವರು ಮಾರ್ಚ್ 27 ರಂದು ಗುಂಡ್ಲುಪೇಟೆಗೆ ಉಪಚುನಾವಣೆ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ.
ಗುಂಡ್ಲುಪೇಟೆ, ಮಾರ್ಚ್ 24: ಮಹದೇವಪ್ರಸಾದ್ ಅವರ ನಿಧನದ ಬಳಿಕ ತೆರವಾದ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರಕ್ಕೆ ಏಪ್ರಿಲ್ 9, ಭಾನುವಾರದಂದು ಚುನಾವಣೆ ನಡೆಯಲಿದ್ದು, ಉಭಯ ಪಕ್ಷಗಳೂ ಬಿರುಸಿನಿ ಪ್ರಚಾರ ನಡೆಸುತ್ತಿವೆ.
ಏಪ್ರಿಲ್ 13, ಗುರುವಾರದಂದು ಹೊರಬೀಳಲಿರುವ ಫಲಿತಾಂಶದಲ್ಲಿ ತಾನೇ ವಿಜಯ ಮಾಲೆಯನ್ನು ತೊಡಬೇಕೆಂಬ ಉದ್ದೇಶದಿಂದ ಬಿಜೆಪಿ ಹರಸಾಹಸ ಪಡುತ್ತಿದೆ. ಇದೀಗ ತನ್ನ ಅಭ್ಯರ್ಥಿ ನಿರಂಜನ್ ಕುಮಾರ್ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಲು ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಗುಂಡ್ಲುಪೇಟೆಗೆ ಕರೆತರಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಅದಕ್ಕೆ ಮುಹೂರ್ತವನ್ನು ನಿಗದಿ ಮಾಡಿಕೊಂಡಿದೆ.[ನಂಜನಗೂಡು ಗೆಲುವಿಗೆ ಬಿಜೆಪಿ-ಕಾಂಗ್ರೆಸ್ ನಿಂದ ಜಾತಿ ಲೆಕ್ಕಾಚಾರ]

ಮಾ. 27 ರಂದು ಕೃಷ್ಣ ಕ್ಷೇತ್ರಕ್ಕೆ ಆಗಮಿಸಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಜತೆಗೆ ವಿವಿಧೆಡೆ ಪ್ರಚಾರ ಸಭೆಯನ್ನು ನಡೆಸಲಿದ್ದಾರೆ. ಎಸ್.ಎಂ.ಕೃಷ್ಣರೊಂದಿಗೆ ಬಿಜೆಪಿಯ ಪ್ರಭಾವಿ ನಾಯಕರ ದೊಡ್ಡ ದಂಡೇ ಆಗಮಿಸುವ ಸಾಧ್ಯತೆಯಿದೆ.
ಇನ್ನು ಮಾ.30ರಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಗಮಿಸಲಿದ್ದು, ಚುನಾವಣಾ ಪ್ರಚಾರಕ್ಕೆ ಧುಮುಕಲಿದ್ದಾರೆ.[ಕೃಷ್ಣ ಸೇರ್ಪಡೆಯಿಂದ ಪಕ್ಷಕ್ಕೆ ಮತ್ತಷ್ಟು ಬಲ: ಯಡಿಯೂರಪ್ಪ]
ಅಂದು ಅವರು ಚಿಕ್ಕಾಟಿ, ಬರಗಿ, ಗರಗನಹಳ್ಳಿ, ಮಂಚಹಳ್ಳಿ, ಶೆಟ್ಟಹಳ್ಳಿ, ಹೊನ್ನಶೆಟ್ಟರಹುಂಡಿ, ತೆಂಕಲಹುಮಡಿ, ಹುಲಸಗುಂದಿ, ಮಲ್ಲಯ್ಯನಪುರ, ಕಲ್ಲಿಗೌಡನಹಳ್ಳಿ, ಕಲ್ಲಿಗೌನಹಳ್ಳಿ, ರಾಘವಾಪುರ, ಕಾಳನಹುಂಡಿ, ಹೊಕಣಪುರ, ಶ್ರೀಕಂಠಪುರ, ಹೊಸಪುರ, ಹೀರಾಕಟ್ಟಿ, ತೊರಹಳ್ಳಿ, ತೆರಕಣಾಂಬಿ, ಕುರುಬರ ಹುಂಡಿ, ಬಾಚಹಳ್ಳಿ ಸೇರಿದಂತೆ ವಿವಿಧೆಡೆ ಪ್ರಚಾರ ನಡೆಸಲಿದ್ದಾರೆ.[ನಂಜನಗೂಡಿನಲ್ಲಿ ಲಿಂಗಾಯತ, ದಲಿತ ಮತಗಳ ಹಿಡಿತ ಯಾರಿಗೆ?]
ಕಾಂಗ್ರೆಸ್ ಪಕ್ಷದಿಂದ ಮಹದೇವ ಪ್ರಸಾದ್ ಅವರ ಪತ್ನಿ ಗೀತಾ ಮಹದೇವ ಪ್ರಸಾದ್ ಕಣಕ್ಕಿಳಿದಿದ್ದು, ಅನುಕಂಪದ ಆಧಾರದ ಮೇಲೆ ಮತದಾರ ಪ್ರಭು ಅವರತ್ತ ನೋಡುತ್ತಾನೆ ಎಂಬುದನ್ನು ಕಾದುನೋಡಬೇಕಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications