ದೂರು ಕೊಟ್ಟಿದ್ದಕ್ಕೆ ಗ್ರಾಮದಿಂದಲೇ ಕುಟುಂಬಕ್ಕೆ ಬಹಿಷ್ಕಾರ

ಮೈಸೂರು, ಫೆಬ್ರವರಿ 05: ಸ್ವಾತಂತ್ರ್ಯ ಬಂದು ಏಳು ದಶಕಗಳೇ ಕಳೆದರೂ ಇನ್ನೂ ಸಾಮಾಜಿಕ ಬಹಿಷ್ಕಾರದ ಪಿಡುಗು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬೆಳಲೆ ಗ್ರಾಮದಲ್ಲಿ ಇನ್ನೂ ಜೀವಂತವಾಗಿದೆ.

ಕ್ಷುಲ್ಲಕ ಕಾರಣಕ್ಕೆ ವೃದ್ಧ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ವ್ಯಕ್ತಿಯೋರ್ವ ಚಪ್ಪಲಿ ಎಸೆದ ಕಾರಣಕ್ಕೆ ಬಹಿಷ್ಕಾರಕ್ಕೆ ಒಳಗಾಗಿದ್ದಾರೆ.

ಬಹಿಷ್ಕಾರಗೊಂಡ ಕುಟುಂಬವು ನಂಜನಗೂಡು ಶಾಸಕ ಹರ್ಷವರ್ಧನ್ ಮುಂದೆ ಕಣ್ಣೀರಿಟ್ಟು ಅಳಲು ತೋಡಿಕೊಂಡಿದ್ದಾರೆ. ಗ್ರಾಮದಲ್ಲಿ ಯಾರೂ ಮಾತನಾಡುತ್ತಿಲ್ಲ, ಯಾವುದೇ ಕೆಲಸ ಕಾರ್ಯಗಳಿಗೆ ಕರೆಯುತ್ತಿಲ್ಲ ಎಂದು ಅಳಲು ತೋಡಿಕೊಂಡರು.

Social Boycott Still Existed In Nanjanagudu

ನಂಜನಗೂಡು ತಾಲೂಕಿನ ಬೆಳಲೆ ಗ್ರಾಮದಲ್ಲಿ ಜೀವಂತವಾಗಿರುವ ಸಾಮಾಜಿಕ ಬಹಿಷ್ಕಾರದ ಪಿಡುಗಿಗೆ ಬೆಳಲೆ ಗ್ರಾಮದ ಈರನಾಯಕ ಎಂಬವರ ಪುತ್ರಿ ಭಾಗ್ಯಮ್ಮ ಎಂಬ ಅವಿವಾಹಿತ ಮಹಿಳೆ ಮಾನಸಿಕ ಕಿರುಕುಳಕ್ಕೊಳಗಾಗಿದ್ದಾರೆ.

ದಿನನಿತ್ಯ ಹೂವು ಮಾರಿ ಜೀವನ ಸಾಗಿಸುತ್ತಿರುವ ಕುಟುಂಬದ ಭಾಗ್ಯಮ್ಮ ಎಂಬುವವರ ಮೇಲೆ ಗ್ರಾಮದ ವ್ಯಕ್ತಿಯೋರ್ವ ಚಪ್ಪಲಿ ಎಸೆದಿದ್ದು, ಈ ಬಗ್ಗೆ ಈರನಾಯಕನ ಮತ್ತೋರ್ವ ಮಗಳು ದೂರು ಕೊಟ್ಟಿದ್ದಾರೆ. ಇದನ್ನು ಅಸ್ತ್ರವನ್ನಾಗಿ ಮಾಡಿಕೊಂಡ ಬೆಳಲೆ ಗ್ರಾಮದ ಹಿರಿಯರು ಈರನಾಯಕನ ಕುಟುಂಬಕ್ಕೆ ಹತ್ತು ದಿನಗಳಿಂದ ಸಾಮಾಜಿಕ ಬಹಿಷ್ಕಾರ ಹೇರಿದ್ದಾರೆ.

ಶಾಸಕ ಹರ್ಷ ವರ್ಧನ್ ಅವರು ಗ್ರಾಮದ ಕಾಮಗಾರಿಗಳಿಗೆ ಗುದ್ದಲಿ ಪೂಜೆಗೆ ತೆರಳಿದ ಸಂದರ್ಭದಲ್ಲಿ ನೋವು ತೋಡಿಕೊಂಡು ನ್ಯಾಯಕ್ಕಾಗಿ ಕುಟುಂಬ ಅಂಗಲಾಚಿದೆ. ನ್ಯಾಯ ಕೊಡಿಸುವ ಭರವಸೆ ಕೊಟ್ಟು ಶಾಸಕ ಹರ್ಷವರ್ಧನ್ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಹಿಂದುಳಿದ ಹಾಗೂ ಮೀಸಲು ವಿಧಾನಸಭಾ ಕ್ಷೇತ್ರಗಳಲ್ಲಿ 21 ನೇ ಶತಮಾನದಲ್ಲೂ ಇಂತಹ ಸಾಮಾಜಿಕ ಬಹಿಷ್ಕಾರದ ಪಿಡುಗುಗಳು ಇನ್ನೂ ಜೀವಂತವಾಗಿದೆ ಎಂದರೆ ನಾಗರೀಕ ಸಮಾಜವೇ ತಲೆತಗ್ಗಿಸಬೇಕಾಗಿದೆ. ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿರುವ ನೊಂದ ಕುಟುಂಬಕ್ಕೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನ್ಯಾಯ ಕಲ್ಪಿಸಿಕೊಡುವರೇ ಎಂಬುದು ಇದೀಗ ಯಕ್ಷ ಪ್ರಶ್ನೆಯಾಗಿ ಉಳಿದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+