ತಿ.ನರಸೀಪುರ: 150 ಎಕರೆಯಲ್ಲಿ ತಲೆ ಎತ್ತುತ್ತಿದೆ ಸೋಲಾರ್ ಪ್ಲಾಂಟ್!
ಮೈಸೂರು: ಮರಗಳನ್ನು ಧರೆಗುರುಳಿಸಿ, ಕೃಷಿಗೆ ನೀರುಣಿಸುವ ನೂರಾರು ತೋಡುಗಾಲುವೆಗಳನ್ನು ಮುಚ್ಚಿ ಅಪಾಯಕಾರಿ ಸೋಲಾರ್ ಪ್ಲಾಂಟ್ ನಿರ್ಮಾಣ ಕಾಮಗಾರಿ ಮೈಸೂರಿನ ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದಲ್ಲಿ ನಡೆಯುತ್ತಿದೆ.
ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ಬಳಿ ಫಲವತ್ತಾದ ನೂರಾರು ಎಕರೆ ಕೃಷಿ ಭೂಮಿಯಲ್ಲಿ ಈ ಸೋಲಾರ್ ಪ್ಲಾಂಟೇಶನ್ ತಲೆ ಎತ್ತುತ್ತಿದ್ದು, ಜನ ಜಾನುವಾರುಗಳಿಗೆ ಮುಂದೊಂದು ದಿನ ಕಂಟಕ ಎದುರಾಗಲಿದೆ ಎಂಬ ಭಯ ಈ ವ್ಯಾಪ್ತಿಯ ಜನರನ್ನು ಕಾಡುತ್ತಿದೆ.

ಖಾಸಗಿ ಕಂಪನಿ ಇದನ್ನು ನಿರ್ಮಾಣ ಮಾಡುತ್ತಿದ್ದು, 150 ಎಕರೆಯನ್ನು ಇದಕ್ಕಾಗಿ ಬಳಸಿಕೊಳ್ಳುತ್ತಿದೆ. ಇಲ್ಲಿ ನೂರಾರು ಮರಗಳು ಹನನವಾಗಿ ನೀರಿನ ಆಸರೆಯಾಗಿದ್ದ ತೋಡುಗಾಲುವೆಗಳನ್ನು ಮುಚ್ಚುತ್ತಿದ್ದರೂ ಸಂಬಂಧಿಸಿದವರು ಯಾವುದೇ ರೀತಿಯ ಚಕಾರ ಎತ್ತುತ್ತಿಲ್ಲ ಎಂಬ ಆರೋಪವನ್ನು ಸ್ಥಳೀಯರು ಮಾಡುತ್ತಿದ್ದಾರೆ.

ಇದು ಕಾವೇರಿ ಅಚ್ಚುಕಟ್ಟು ಪ್ರದೇವಾಗಿದ್ದು, ಇಲ್ಲಿ ಭತ್ತ, ರಾಗಿ, ಕಬ್ಬು ಹಾಗೂ ದ್ವಿದಳ ಧಾನ್ಯಗಳನ್ನೇ ಹೆಚ್ಚಾಗಿ ಬೆಳೆಯುವ ಕೃಷಿ ಭೂಮಿ ಸೋಲಾರ್ ವಿದ್ಯುತ್ ಪ್ಲಾಂಟೇಷನ್ ಆಗಿ ಪರಿವರ್ತಿತವಾಗುತ್ತಿರುವುದನ್ನು ಜನ ನೋಡಿಕೊಂಡು ಸುಮ್ಮನಾಗುತ್ತಿದ್ದಾರೆ.
ಕೃಷಿ ಮಾಡಿಕೊಂಡು ಬರುತ್ತಿರುವ ರೈತರಿಗೆ ಎಕರೆ ಭೂಮಿಗೆ 30 ವರ್ಷಕ್ಕೆ ವಾರ್ಷಿಕವಾಗಿ 30ಸಾವಿರ ರೂಗಳ ಬಾಡಿಗೆ ಹಣವನ್ನು ನೀಡಿ ಕುಟುಂಬದ ಒಬ್ಬನಿಗೆ ಉದ್ಯೋಗ ನೀಡುವ ಒಪ್ಪಂದವನ್ನು ಮಾಡಿಕೊಂಡು ಭೂಮಿಯನ್ನು ಪಡೆಯಲಾಗಿದೆ. ಆದರೆ ಹೊರ ರಾಜ್ಯಗಳ ಕಾರ್ಮಿಕರು ದುಡಿಯುತ್ತಿರುವುದು ಕಂಡು ಬರುತ್ತಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications