ಭಗವಾನ್ ಮೇಲಿನ ಎಲ್ಲಾ ದೂರುಗಳನ್ನು ವಜಾಗೊಳಿಸುವಂತೆ ಪೊಲೀಸರಿಗೆ ಒತ್ತಡ
ಮೈಸೂರು, ಜನವರಿ 5 : ಸಾಹಿತಿ, ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆಗೊಳಪಡಿಸಿರುವುದನ್ನು ತೀವ್ರವಾಗಿ ಖಂಡಿಸಿ ಕರ್ನಾಟಕ ಪ್ರಗತಿಪರ ಚಿಂತಕರ ವೇದಿಕೆ, ದಲಿತ ವೆಲ್ ಫೇರ್ ಟ್ರಸ್ಟ್ ನ ಮುಖ್ಯಸ್ಥರು , ಅವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಕೂಡಲೇ ವಜಾಗೊಳಿಸಬೇಕೆಂದು ಒತ್ತಾಯಿಸಿದವು.
ದಲಿತ ವೆಲ್ ಫೇರ್ ಟ್ರಸ್ಟ್, ಕಾಯಕ ಸಮಾಜ ಹಾಗೂ ಪ್ರಗತಿಪರ ಚಿಂತಕರ ವೇದಿಕೆಯಿಂದ ಸುದ್ದಿಗೋಷ್ಠಿಯಲ್ಲಿ ಪ್ರಗತಿಪರ ಚಿಂತಕರ ವೇದಿಕೆ ರಾಜ್ಯಾಧ್ಯಕ್ಷ ಕೆ.ಸಿ.ಪುಟ್ಟಸಿದ್ದಶೆಟ್ಟಿ ಅವರು ಮಾತನಾಡಿ, ಭಗವಾನ್ ಅವರ ವಿರುದ್ಧ ದೃಶ್ಯ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಯುತ್ತಿದೆ.
ಅವರೊಬ್ಬ ಮಾನಸಿಕ ಅಸಮತೋಲನದ ಹೊಂದಿರುವ ಹಿಂದೂ ವಿರೋಧಿಯೆಂದು ಬಿಂಭಿಸಲಾಗುತ್ತಿದೆ, ಇದು ಸಲ್ಲದು ತಮಗೂ ಅಭಿವ್ಯಕ್ತ ಸ್ವಾತಂತ್ರ್ಯವಿದ್ದು ಸಂವಿಧಾನದಡಿಯಲ್ಲಿ ತಮ್ಮ ಹಕ್ಕುಗಳನ್ನು ಚಾಲಯಿಸಲು ಅವಕಾಶ ನೀಡಿ ಎಂದು ಮಾರ್ಮಿಕವಾಗಿ ನುಡಿದರು.

ತಮಗೂ ಮಾತನಾಡುವ, ಬರೆಯುವ, ವಿಮರ್ಶಿಸುವ, ಸಂಶೋಧಿಸುವ, ಚರ್ಚಿಸುವ ಸ್ವಾತಂತ್ರವಿದ್ದು ಅದನ್ನು ಹತ್ತಿಕ್ಕುವ ಯತ್ನ ನಡೆಯುತ್ತಿದೆ, ನಾವ್ಯಾರೂ ಹಿಂದೂ ಧರ್ಮ ವಿರೋಧಿಗಳಲ್ಲ, ಹಿಂದೂ ಧರ್ಮವನ್ನು ಯಾರು ಗುತ್ತಿಗೆ ಪಡೆದಿಲ್ಲ, ಗುತ್ತಿಗೆ ಪಡೆದವರಂತೆ ಹೋರಾಡುವವರ ವಿರುದ್ಧ ತಾವು ಪ್ರತಿ ಹೋರಾಟ ನಡೆಸಬೇಕಾಗುವುದು ಎಂದು ಎಚ್ಚರಿಕೆ ನೀಡಿದರು.
ದಲಿತ ವೆಲ್ ಫೇರ್ ಟ್ರಸ್ಟ್ ಅಧ್ಯಕ್ಷ ಶಾಂತರಾಜು ಅವರು ಮಾತನಾಡಿ, ಭಗವಾನ್ ಅವರ 'ರಾಮಮಂದಿರ ಏಕೆ ಬೇಕೆಂಬ' ಪುಸ್ತಕ ಪ್ರಕಟಗೊಂಡು ಆದಾಗಲೇ ಆರು ತಿಂಗಳೇ ಕಳೆದಿವೆ.
ಅದರ ಎರಡನೇ ಆವೃತ್ತಿಯೂ ಇನ್ನೂ ಕೆಲವೇ ದಿನಗಳಲ್ಲಿ ಹೊರಬರಲಿದೆ, ಹೀಗಿದ್ದರೂ ಈಗೇಕೆ ಈ ಹೋರಾಟ ಎಂದು ಪ್ರಶ್ನಿಸಿ, ತಮಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದ್ದು ನಮ್ಮನ್ನು ಬದುಕಲು ಬಿಡಿ, ಭಗವಾನ್ ಅವರ ವಿಚಾರಣೆಯಿಂದ ಅಭಿವ್ಯಕ್ತಿ ಸ್ವಾತಂತ್ರಕ್ಕೆ ಧಕ್ಕೆಯಾಗಿದ್ದು ಅವರ ವಿರುದ್ಧ ದಾಖಲಾಗಿರುವ ದೂರನ್ನು ಕೂಡಲೇ ರದ್ದುಗೊಳಿಸಬೇಕೆಂದು ಆಗ್ರಹಿಸಿದರು.
-
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications