ಕೆ.ಆರ್.ನಗರದಲ್ಲಿ ಬೆಂಕಿ ತಗುಲಿ ತಂದೆ ಮಗನ ಸಾವು
ಮೈಸೂರು, ಫೆಬ್ರವರಿ 14: ನೀರು ಕಾಯಿಸುವ ಒಲೆಯಿಂದ ಆಕಸ್ಮಿಕ ಬೆಂಕಿ ತಗುಲಿದ್ದ ತಂದೆಯನ್ನು ರಕ್ಷಿಸಲು ಹೋದ ಪುತ್ರ ಸಾವನ್ನಪ್ಪಿದ್ದು, ಬೆಂಕಿ ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕೆ.ಆರ್.ನಗರದಲ್ಲಿ ನಡೆದಿದೆ.
ಮೃತರನ್ನು ಕೆ.ಆರ್.ನಗರದ ಈಶ್ವರ ನಗರದಲ್ಲಿ ವಾಸವಿದ್ದ ಮೈಸೂರು ನಗರ ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸಟೇಬಲ್ ರೇಣುಕಾಸ್ವಾಮಿ(45) ಮತ್ತವರ ಪುತ್ರ ತೇಜಸ್(14) ಎಂದು ಹೇಳಲಾಗಿದೆ.
ಹೆಡ್ ಕಾನ್ಸಟೇಬಲ್ ಪತ್ನಿ ಪುಷ್ಪಲತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಡ್ ಕಾನ್ಸಟೇಬಲ್ ರೇಣುಕಾಸ್ವಾಮಿಯವರು ನೀರು ಕಾಯಿಸಲು ಒಲೆಗೆ ತೆಂಗಿನ ಸಿಪ್ಪೆ ಹಾಕಿ ಬೆಂಕಿ ಹಚ್ಚಿದ್ದರು. ಬೆಂಕಿ ಸರಿಯಾಗಿ ಉರಿಯದ ಕಾರಣ ಪಕ್ಕದಲ್ಲೇ ಇದ್ದ ಸೀಮೆಎಣ್ಣೆ ಕ್ಯಾನ್ ತೆರೆದು ಸ್ವಲ್ಪ ಸೀಮೆಎಣ್ಣೆಯನ್ನು ಒಲೆಗೆ ಎರೆಚಿದ್ದರು.

ಈ ವೇಳೆ ಸೀಮೆ ಎಣ್ಣೆ ಕ್ಯಾನ್ ಗೆ ಬೆಂಕಿ ತಗುಲಿದ್ದು, ಕ್ಯಾನ್ ಉರುಳಿ ಸೀಮೆ ಎಣ್ಣೆಯು ನೆಲದ ಮೇಲೆ ಚೆಲ್ಲಿದ್ದರಿಂದ ಬೆಂಕಿಯ ಕೆನ್ನಾಲಗೆ ಎಲ್ಲೆಡೆ ಹರಡಿತ್ತು. ರೇಣುಕಾಸ್ವಾಮಿಯವರನ್ನು ರಕ್ಷಿಸಲು ಬೆಂಕಿಯನ್ನು ಆರಿಸಲು ಬಂದ ಪುಷ್ಪಲತಾ ಅವರ ಸೀರೆಗೆ ಬೆಂಕಿ ತಗುಲಿ ಅವರು ಕಿರುಚುತ್ತಾ ಓಡಿ ಬರುತ್ತಿದ್ದರು.
ತಾಯಿ ಮತ್ತು ತಂದೆಯನ್ನು ರಕ್ಷಿಸಲು ಬಂದ ಪುತ್ರ ತೇಜಸ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದ್ದಾರೆ. ನೆರೆ ಹೊರೆಯವರು ಬಾಗಿಲು ಒಡೆದು ಒಳಪ್ರವೇಶಿಸಿ ಬೆಂಕಿ ಆರಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ರೇಣುಕಾಸ್ವಾಮಿ ಮೃತಪಟ್ಟಿದ್ದಾರೆ. ಪುಷ್ಪಲತಾ ಅವರು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುತ್ರಿ ಚಿನ್ಮಯಿ ಮಾತ್ರ ಅಪಾಯದಿಂದ ಪಾರಾಗಿದ್ದಾರೆ.
ಕೆ.ಆರ್.ನಗರ ಠಾಣೆಯ ಸರ್ಕಲ್ ಇನ್ಸಪೆಕ್ಟರ್ ಪಿ.ಕೆ.ರಾಜು ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications