"ಸೋನಿಯಾ ಗಾಂಧಿ ದೇಶದ್ರೋಹಿಯ ಮಗಳು"
ಮೈಸೂರು, ಏ. 5 : "ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಒಬ್ಬ ದೇಶ ದ್ರೋಹಿಯ ಮಗಳು, ಅವರಿಂದ ದೇಶಪ್ರೇಮ ಹೇಗೆ ಇರಲು ಸಾಧ್ಯ" ಎಂದು ಹೇಳುವ ಮೂಲಕ ಮಾಜಿ ಸಚಿವ, ಬಿಜೆಪಿ ಮುಖಂಡ ಎಸ್.ಎ.ರಾಮದಾದ್ ಹೊಸ ವಿವಾದ ಹುಟ್ಟುಹಾಕಿದ್ದಾರೆ.
ಶನಿವಾರ ಮೈಸೂರು ನಗರದಲ್ಲಿ ಬಿಜೆಪಿ ಮಹಿಳಾ ಸಮಾವೇಶ ಉದ್ದೇಶಿಸಿ ಮಾತನಾಡಿದ ರಾಮದಾಸ್, "ಸೋನಿಯಾ ಗಾಂಧಿ ಓರ್ವ ದೇಶ ದ್ರೋಹಿ ತಂದೆಯ ಮಗಳು, ಸೋನಿಯಾ ಗಾಂಧಿ ಅವರ ತಂದೆ ಇಟಲಿಯ ಸೈನಿಕರಾಗಿದ್ದರು" ಎಂದು ಹೇಳಿದರು. [ಮೋದಿ ಮಾತನ್ನು ಕನ್ನಡಲ್ಲಿ ಕೇಳಿರಿ]

"ಇಟಲಿ ಸೈನಿಕರಾಗಿದ್ದ ಸೋನಿಯಾ ತಂದೆ, ತನ್ನ ದೇಶದ ಬಗೆಗಿನ ಗುಪ್ತ ಮಾಹಿತಿಯನ್ನು ಅನ್ಯ ದೇಶಗಳಿಗೆ ಮಾರಾಟ ಮಾಡಿದ್ದರು. ಇಂಥವರ ಮಗಳಾದ ಸೋನಿಯಾ ಗಾಂಧಿ ಅವರಿಂದ ದೇಶಪ್ರೇಮ ನಿರೀಕ್ಷಿಸಲು ಹೇಗೆ ಸಾಧ್ಯ?" ಎಂದು ಪ್ರಶ್ನಿಸಿದ್ದಾರೆ.
"ಸ್ವಂತ ದೇಶದ ಬಗ್ಗೆಯೇ ಪ್ರೀತಿ ಹೊಂದದೇ ಇರುವ ವ್ಯಕ್ತಿಯ ಮಗಳಿಂದ ಭಾರತದ ಜನರು ಹೇಗೆ ತಾನೆ ದೇಶಪ್ರೇಮ ನಿರೀಕ್ಷಿಸಲು ಸಾಧ್ಯ? ಎಂದು ಲೇವಡಿ ಮಾಡಿದ್ದಾರೆ. ಎಸ್ಎ ರಾಮದಾಸ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹುಟ್ಟುಹಾಕುವ ಸಾಧ್ಯತೆ ಇದೆ.
ವಿಷಾದ ವ್ಯಕ್ತಪಡಿಸಿದ ರಾಮದಾಸ್ : ಸಮಾವೇಶದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ರಾಮದಾಸ್ "ನನ್ನ ದೇಶದ್ರೋಹಿಯ ಮಗಳು" ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಉದ್ದೇಶಪೂರ್ವಕವಾಗಿ ನಾನು ಇಂತಹ ಹೇಳಿಕೆ ನೀಡಿಲ್ಲ ಎಂದು ರಾಮದಾಸ್ ಸ್ಪಷ್ಟೀಕರಣ ನೀಡಿದ್ದಾರೆ. ಇಂತಹ ಹೇಳಿಕೆ ನೀಡುವುದು ತಪ್ಪು ಎಂದು ತಿಳಿದಿದೆ. ಆದ್ದರಿಂದ ತಪ್ಪನ್ನು ತಿದ್ದುಕೊಳ್ಳಲು ವಿಷಾದ ವ್ಯಕ್ತಪಡಿಸುತ್ತಿದ್ದೇನೆ ಎಂದು ಅವರು ಹೇಳಿದರು.
ದೇವೇಗೌಡರಿಗೆ ತಿರುಗೇಟು : ಸಮಾವೇಶದಲ್ಲಿ ಜೆಡಿಎಸ್ ನಾಯಕ ಜಿಟಿ ದೇವೇಗೌಡರಿಗೆ ತಿರುಗೇಟು ನೀಡಿದ ಮಾಜಿ ಸಚಿವ ರಾಮದಾಸ್, ಜೆಡಿಎಸ್ ಅಭ್ಯರ್ಥಿಗೆ ನಾನು ಬೆಂಬಲ ನೀಡುತ್ತಿದ್ದೇನೆ ಎಂಬ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ. ನಾನು ರಾಜಕೀಯವನ್ನು ತೊರೆದರೂ ಬಿಜೆಪಿ ಪಕ್ಷವನ್ನು ಬಿಡುವುದಿಲ್ಲ. ಬಿಜೆಪಿ ತಮಗೆ 2ನೇ ತಾಯಿ ಇದ್ದಂತೆ ಎಂದು ಹೇಳಿದರು.
ಶುಕ್ರವಾರ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ್ದ ಜಿಟಿ ದೇವೇಗೌಡರು, ಮಾಜಿ ಸಚಿವ ಎಸ್ಎ ರಾಮದಾಸ್ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದ್ದರು. ಇಂದು ಇದಕ್ಕೆ ರಾಮದಾಸ್ ತಿರುಗೇಟು ನೀಡಿದ್ದಾರೆ. ಆ ಮೂಲಕ ತಾವು ಜೆಡಿಎಸ್ ಬೆಂಬಲಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications