ಈ ಕಾರಣಕ್ಕೆ ಮಡಿಕೇರಿಯಿಂದ ಎಚ್.ಡಿ.ಕೋಟೆಗೆ ಶಿಫ್ಟ್ ಆಯ್ತಾ ಸೋನಿಯಾ ವಾಸ್ತವ್ಯ?
ಮೈಸೂರು,ಅಕ್ಟೋಬರ್ 3 : ಇತ್ತೀಚೆಗೆ ಮಡಿಕೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತೆರಳಿದ್ದ ಸಂದರ್ಭ ಮೊಟ್ಟೆ ಎಸೆತ ಸೇರಿದಂತೆ ಅಹಿತಕರ ಘಟನೆಗಳು ಸಂಭವಿಸಿದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ವಾಸ್ಯವ್ಯ ಹೂಡುವ ಜಾಗವನ್ನು ಎಚ್.ಡಿ.ಕೋಟೆಗೆ ಬದಲಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ನ ಅಧಿನಾಯಕಿ ಸೋನಿಯಾ ಗಾಂಧಿ ಅವರು ಕಬಿನಿ ಹಿನ್ನೀರಿನಲ್ಲಿರುವ ಆರೆಂಜ್ ಕೌಂಟಿ ಹೋಟೆಲ್ನಲ್ಲಿ ಸೋಮವಾರ ಸಂಜೆ ವಾಸ್ತವ್ಯ ಹೂಡಿದ್ದಾರೆ. ಎಚ್.ಡಿ. ಕೋಟೆ ತಾಲೂಕಿಗೆ ಆಗಮಿಸಿದ ಸೋನಿಯಾಗಾಂಧಿ ಅವರನ್ನು ಶಾಸಕ ಅನಿಲ್ ಚಿಕ್ಕಮಾದು ಸೇರಿದಂತೆ ಇನ್ನಿತರ ಸ್ಥಳೀಯ ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡರು. ಪಕ್ಷದ ವರಿಷ್ಠರು ತಮ್ಮ ಕ್ಷೇತ್ರದಲ್ಲಿ 2ನೇ ಬಾರಿ ಉಳಿಯುತ್ತಿರುವುದು ಸಂತೋಷದ ವಿಚಾರ. ವಾಸ್ತವ್ಯದ ದೃಷ್ಟಿಯಿಂದ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಎಚ್.ಡಿ.ಕೋಟೆಯಲ್ಲಿ ವಾಸ್ತವ್ಯವಿರುವ ಸೋನಿಯಾ ಗಾಂಧಿ ಅಕ್ಟೋಬರ್ 6ರಂದು ಪಾಂಡವಪುರ ತಾಲೂಕಿನ ಬೆಲ್ಲಾಳೆ ಗ್ರಾಮದಿಂದ ಆರಂಭವಾಗುವ ಭಾರತ್ ಐಕ್ಯತಾ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.
ಪೊಲೀಸ್ ಬಿಗಿ ಭದ್ರತೆ
ಸೋನಿಯಾಗಾಂಧಿ ಆಗಮನದ ಹಿನ್ನೆಲೆಯಲ್ಲಿ ಖಾಸಗಿ ರೆಸಾರ್ಟ್ನಲ್ಲಿ ಮುಂಚಿತವಾಗಿಯೇ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಛಾಯಾಚಿತ್ರ ತೆಗೆಯುವುದನ್ನೂ ನಿಷೇಧಿಸಲಾಗಿತ್ತು. ಮಾತ್ರವಲ್ಲದೇ ಕೆಲಸ ಮಾಡುವ ಸಿಬ್ಬಂದಿಯ ಮೊಬೈಲ್ ಸೀಜ್ ಮಾಡಲಾಗಿತ್ತು. ಮೈಸೂರಿನಿಂದ ಜೀರೊ ಟ್ರಾಫಿಕ್ನಲ್ಲಿ ತೆರಳಲು ಅವಕಾಶ ಕಲ್ಪಿಸಲಾಗಿತ್ತು. ಕೆಎಸ್ಆರ್ಪಿ ಪೊಲೀಸರು ಸೇರಿದಂತೆ ಭದ್ರತಾ ಸಿಬ್ಬಂದಿ ರಕ್ಷಣೆ ಒದಗಿಸಿದರು.

ಮೈಸೂರು-ಮಾನಂದವಾಡಿ ರಸ್ತೆಯ ಮೂಲಕ ಎಚ್.ಡಿ. ಕೋಟೆ ತಾಲೂಕಿನ ಹ್ಯಾಂಡ್ ಪೋಸ್ಟ್, ಅಂತರಸಂತೆ, ಕಾರಾಪುರ ಜಂಗಲ್ ಲಾಡ್ಜ್ಗೆ ಬಂದರು. ನಂತರ ವಿಶೇಷ ಬೋಟ್ ಮುಖಾಂತರ ಕಬಿನಿ ಹಿನ್ನೀರಿನಲ್ಲಿರುವ ಆರೆಂಜ್ ಕೌಂಟಿ ಹೋಟೆಲ್ಗೆ ತೆರಳಿ ವಾಸ್ತವ್ಯ ಹೂಡಿದರು. ಆರೆಂಜ್ ಕೌಂಟಿಗೆ ತೆರಳುವ ಮಾರ್ಗದ ರಸ್ತೆ ತೀರಾ ಹದಗೆಟ್ಟಿರುವ ಕಾರಣ ಕಾರಾಪುರ ಜಂಗಲ್ ಲಾಡ್ಜ್ ಮೂಲಕ ಅಲ್ಲಿಂದ ಆರೆಂಜ್ ಕೌಂಟಿ ರೆಸಾರ್ಟ್ಗೆ ತೆರಳಿದರು.
ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ, ರಾಹುಲ್ಗಾಂಧಿ ಸೇರಿದಂತೆ ಕಾಂಗ್ರೆಸ್ನ ಅಗ್ರಗಣ್ಯ ಮುಖಂಡರೆಲ್ಲರೂ ಸೇರಿದ್ದಾರೆ. ಈ ಸಂದರ್ಭದಲ್ಲಿ ಸದ್ಯದಲ್ಲಿಯೇ ನಡೆಯಲಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ವಿಚಾರ ಹಾಗೂ ರಾಜ್ಯದ ಮುಖಂಡರೊಂದಿಗೆ ಸ್ಥಳೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications