SM ಕೃಷ್ಣ ನಿಧನದ ವಿಚಾರದಲ್ಲಿ ಸೋನಿಯಾ ಗಾಂಧಿ ನಡೆಗೆ ಹೆಚ್.ವಿಶ್ವನಾಥ್ ಗರಂ
ಮೈಸೂರು, ಡಿಸೆಂಬರ್ 12: ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ವಿದೇಶಾಂಗ ಸಚಿರಾಗಿದ್ದ, ಎಸ್.ಎಂ.ಕೃಷ್ಣ ಅವರ ನಿಧನದ ವಿಚಾರದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಡೆಗೆ ಮಾಜಿ ಸಚಿವ ಹೆಚ್.ವಿಶ್ವನಾಥ್ ಟೀಕಿಸಿದ್ದಾರೆ.
ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ಸೂಚಿಸಿದರು. ಆದರೆ ಸೋನಿಯಾ ಗಾಂಧಿ ಈ ವಿಷಯದಲ್ಲಿ ತುಟಿ ಬಿಚ್ಚಲಿಲ್ಲ. ಒಬ್ಬ ವ್ಯಕ್ತಿ ಕಾಲವಾದಾಗ ಮನುಷ್ಯತ್ವ ಇರಬೇಕು, ದ್ವೇಷ ಇರಬಾರದು, ಸತ್ತಾಗಲೂ ದ್ವೇಷ ಮಾಡುವುದು ಸರಿಯಲ್ಲ ಎಂದರು.

ಸಾರ್ವಜನಿಕ ಜೀವನದಲ್ಲಿರುವವರು ಪಕ್ಷಾತೀತವಾಗಿ ನಡೆದುಕೊಳ್ಳಬೇಕಿದೆ. ಸೋನಿಯಾ ಗಾಂಧಿ ಈ ಹಿಂದೆ ಕಾಂಗ್ರೆಸ್ ಹಿರಿಯ ನಾಯಕ ದೇವರಾಜ ಅರಸು ಸತ್ತಾಗಲೂ ಸಹ ಸಂತಾಪ ಸೂಚಿಸಲಿಲ್ಲ. ಪಿ.ವಿ.ನರಸಿಂಹರಾವ್, ವಿ.ಪಿ. ಸಿಂಗ್ ಹಾಗೂ ಚಂದ್ರಶೇಖರ್ ಸತ್ತಾಗಲೂ ಸಂತಾಪ ಸೂಚಿಸಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎಸ್.ಎಂ.ಕೃಷ್ಣ ಅವರು ಹಲವು ಕಾರ್ಯಕ್ರಮಗಳ ಮೂಲಕ ಕಾಂಗ್ರೆಸ್ಗೆ ಹೆಸರು ತಂದುಕೊಟ್ಟಿದ್ದಾರೆ. ಆದರೆ, ಅವರ ಸಾವಿನ ವಿಷಯದಲ್ಲೂ ರಾಜಕಾರಣ, ಪಕ್ಷ ದ್ವೇಷ ಮುಖ್ಯವಾಗಿದ್ದು ಸರಿಯಲ್ಲ. ಎಸ್.ಎಂ.ಕೃಷ್ಣ ಅವರು ತಮ್ಮ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೊಡುಗೆಗಳನ್ನು ನೀಡಿದ್ದರೂ, ಇನ್ಫೋಸಿಸ್ ಸಂಸ್ಥೆ ಇಂದು ಸಾವಿರಾರು ಕೋಟಿ ರೂ.ಗಳ ವ್ಯವಹಾರ ನಡೆಯುತ್ತಿದ್ದು, ಇದಕ್ಕೆಲ್ಲ ಎಸ್.ಎಂ.ಕೃಷ್ಣ ಅವರೇ ಕಾರಣರಾಗಿದ್ದಾರೆ. ಆದರೆ ಮೈಸೂರಿನಲ್ಲಿ ಇನ್ಫೋಸಿಸ್ ಸಂಸ್ಥೆಯಿಂದಲೂ ಒಂದು ಸಂತಾಪ ಸೂಚಿಸಲಿಲ್ಲ. ಇತ್ತೀಚೆಗೆ ಬ್ಯುಸಿನೆಸ್, ಇಂಡಸ್ಟ್ರಿ ಮನುಷ್ಯತ್ವ ಕಳೆದುಕೊಂಡಿವೆ ಎಂದು ಬೇಸರಿಸಿದರು.

ಅನರ್ಹ ಜಾತಿಗಳನ್ನು ಪಟ್ಟಿಯಿಂದ ತೆಗೆದು ಹಾಕಿ
2ಎ ಮೀಸಲಾತಿ ಭರ್ತಿಯಾಗಿ ಬಹಳ ಕಾಲವೇ ಆಗಿದ್ದು, ಈಗ ಅದು ಮುಗಿದು ಹೋಗಿರುವ ವಿಚಾರವಾಗಿದೆ. ಅಲ್ಲದೇ ಈಗಾಗಲೇ 45ಕ್ಕೂ ಹೆಚ್ಚು ಜಾತಿಗಳು ಈ ಪಟ್ಟಿಗೆ ಸೇರಿದ್ದು, ಮೊದಲು ಇವುಗಳ ಪರಿಶೀಲನೆ ನಡೆಸಿ ಅನರ್ಹ ಜಾತಿಗಳನ್ನು ಪಟ್ಟಿಯಿಂದ ತೆಗೆದು ಹಾಕಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಒತ್ತಾಯಿಸಿದರು.
2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟದ ಕುರಿತು ಮಾತನಾಡಿದ ಅವರು, 2ಎ ಮೀಸಲಾತಿ ಭರ್ತಿಯಾಗಿ ಬಹಳ ಕಾಲವಾಗಿದ್ದು, ಅದು ಮುಗಿದು ಹೋದ ವಿಚಾರ. ಈಗಾಗಲೇ ಸಿಕ್ಕ ಸಿಕ್ಕ ಜಾತಿಗಳೆಲ್ಲಾ 2ಎ ಮೀಸಲಾತಿಗೆ ಸೇರಿಕೊಂಡಿದ್ದು, 45ಕ್ಕೂ ಹೆಚ್ಚು ಜಾತಿಗಳು ಈಗಾಗಲೇ 2ಎ ಮೀಸಲಾತಿ ಪಟ್ಟಿಗೆ ಸೇರಿವೆ. ಹೀಗಾಗಿ ಮೊದಲು ಇವುಗಳ ಬಗ್ಗೆ ರಿವ್ಯೂ ಮಾಡಿ, ಅನರ್ಹ ಜಾತಿಗಳನ್ನು ಆ ಪಟ್ಟಿಯಿಂದ ತೆಗೆದು ಹಾಕಬೇಕಿದೆ ಎಂದು ತಿಳಿಸಿದರು.
ವೀರಶೈವ ಲಿಂಗಾಯತರು ಮಾತ್ರವೇ ಬಸವಣ್ಣನವರ ಅನುಯಾಯಿಗಳಲ್ಲ. ಬದಲಾಗಿ ಪ್ರತಿಯೊಂದು ಸಮುದಾಯದ ಜನರು ಸಹ ಬಸವಣ್ಣನವರ ಅನುಯಾಯಿಗಳಾಗಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ನಾವೆಲ್ಲರೂ ಸೇರಿಕೊಂಡು ಬಸವಣ್ಣನವರನ್ನು ದಿನನಿತ್ಯವೂ ಕೊಲ್ಲುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ನಾನು ಬಸವಮೃತ್ಯುಂಜಯ ಸ್ವಾಮೀಜಿ ಅವರಲ್ಲಿ ಮನವಿ ಮಾಡುತ್ತಿದ್ದು, ಎಲ್ಲರಿಗೂ ತೊಂದರೆ ಕೊಡುವುದು ದಯವಿಟ್ಟು ಬೇಡ.
ಸ್ವಾಮೀಜಿಗಳು ಎಲ್ಲರ ನಡುವೆ, ಅಪನಂಬಿಕೆ ಹುಟ್ಟು ಹಾಕುವುದು ಬೇಡ. ಕುರುಬ ಸಮುದಾಯವನ್ನು 2ಎ ತೆಗೆದು ಬುಡಕಟ್ಟಿಗೆ ಸೇರಿಸಿಬಿಡಿ ಎಂದ ಅವರು, ಯಾವುದಾದರೂ ತತ್ವ ಸಿದ್ದಾಂತವಿಲ್ಲದ ಪಕ್ಷ ಎಂದಿದ್ದರೆ ಬಿಜೆಪಿ ಮಾತ್ರವೇ ಆಗಿದ್ದು, ಹೀಗಾಗಿಯೇ ಈ ಮೀಸಲಾತಿ ಹೋರಾಟಕ್ಕೆ ಬಿಜೆಪಿ ಬೆಂಬಲ ಕೊಡುತ್ತಿದೆ ಎಂದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications