ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆ: ಇನ್ನೂ ಬಾರದ ಫಲಿತಾಂಶ, ಎರಡನೇ ಪ್ರಾಶಸ್ತ್ಯ ಮತದಲ್ಲೂ ಕಾಂಗ್ರೆಸ್ ಮುಂದೆ
ಮೈಸೂರು, ಜೂ. 16: ವಿಧಾನ ಪರಿಷತ್ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದೆ.
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು, 23 ತಾಸು ಕಳೆದರೂ ಇನ್ನೂ ಬಾರದ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣಾ ಫಲಿತಾಂಶ. ಮೊದಲ ಪ್ರಾಶಸ್ರ್ಯದ ಮತ ಎಣಿಕೆ ಮುಗಿದು ಎರಡನೇ ಪ್ರಾಶಸ್ತ್ಯ ಪ್ರಕ್ರಿಯೆ ಆರಂಭವಾಗಿದ್ದು, ಇನ್ನೂ ಸುಮಾರು 25 ಸಾವಿರ ಮತ ಎಣಿಕೆ ಬಾಕಿ ಇದೆ. ಒಂದು ವೇಳೆ ನಿಗದಿತ ಖೋಟಾ ತಲುಪದಿದ್ದರೆ ದ್ವಿತೀಯ ಸ್ಥಾನದಲ್ಲಿರುವ ಬಿಜೆಪಿಯ ಮೈ ವಿ ರವಿಶಂಕರ್ ಅವರ ಎರಡನೇ ಪ್ರಾಶಸ್ತ್ಯ ಮತ ಎಣಿಕೆ ನಡೆಸುವ ಸಾಧ್ಯತೆ ಇದೆ. ರವಿಶಂಕರ್ 26 ಸಾವಿರಕ್ಕೂ ಅಧಿಕ ವೋಟ್ ಪಡೆದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡ ಅವರಿಗೆ 34,437 ಮತ, ಬಿಜೆಪಿ ಅಭ್ಯರ್ಥಿಗೆ 27,119 ಹಾಗೂ ಜೆಡಿಎಸ್ ನ ರಾಮುಗೆ 17,713 ಮತ ಲಭಿಸಿದೆ. ಎಲಿಮಿನೇಷನ್ ರೌಂಡ್ ನಲ್ಲೂ ಕಾಂಗ್ರೆಸ್ ಗೆ ಅಧಿಕ ಮತ ಸಿಕ್ಕಿದೆ. ಇದೀಗ ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲೂ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

ಪಕ್ಷೇತರ ಅಭ್ಯರ್ಥಿ ವಿನಯ್ ಮತ ಬಂಡಲ್ ನಲ್ಲಿ ಪ್ರಸನ್ನ ಎನ್.ಗೌಡ ಅವರ ವೋಟ್ ಕಂಡು ಕೆಂಡಾಮಂಡಲರಾದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್. ಈ ರೀತಿ ಎಷ್ಟು ಮತಗಳು ತಪ್ಪಿರಬಹುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಣಿಕೆ ಸಂದರ್ಭ ನಿಮ್ಮಏಜೆಂಟ್ ತಕರಾರು ವ್ಯಕ್ತಪಡಿಸಿಲ್ಲ, ನಮ್ಮ ಸಿಬ್ಬಂದಿಯೂ ಗಮನಹರಿಸಿಲ್ಲ. ಹಾಗಾಗಿ ಈ ಮತವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ಮೈಸೂರು ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಹೇಳಿ ಪ್ರಕ್ರಿಯೆ ಮುಂದುವರಿಸಿದರು.

ಮೊದಲ ಪ್ರಸ್ತಾಸ್ತ್ಯದ ಮತ ಎಣಿಕೆ ಸಂಪೂರ್ಣ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ 5905 ಮತಗಳಿಂದ ಮುನ್ನಡೆ ಗಳಿಸಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಕಾಶ್ ಅಧಿಕೃತ ಘೋಷಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ 32,592, ಬಿಜೆಪಿಗೆ 26,687, ಜೆಡಿಎಸ್ ಗೆ 17,072, ಪ್ರಸನ್ನ ಗೌಡ ಅವರಿಗೆ 6,470 ಪ್ರಸನ್ನ, ವಿನಯ್ ಅವರಿಗೆ 3,672, ತಿರಸ್ಕೃತ ಮತ 7307 ಆಗಿದೆ.

ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 19 ಮಂದಿ
ದಕ್ಷಿಣ ಪದವೀಧರ ಕ್ಷೇತ್ರದಿಂದ ರಾಜ್ಯ ವಿಧಾನಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಸ್ಥಿತಿ ಇದು. ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳನ್ನೊಳಗೊಂಡ ಈನ ಕ್ಷೇತ್ರದಲ್ಲಿ 19 ಮಂದಿ ಕಣದಲ್ಲಿದ್ದಾರೆ. ಬಿಜೆಪಿಯ ಮೈ.ವಿ.ರವಿಶಂಕರ್, ಜೆಡಿಎಸ್ ಎಚ್.ಕೆ.ರಾಮು, ಕಾಂಗ್ರೆಸ್ ಮಧು ಜಿ.ಮಾದೇಗೌಡ ಹಾಗೂ ರೈತಸಂಘ, ದಲಿತ ಸಂಘರ್ಷ ಸಮಿತಿಗಳು, ಪ್ರಗತಿಪರ ಸಂಘಟನೆಗಳು, ಆಮ್ ಆದ್ಮಿ ಪಕ್ಷದ ಬೆಂಬಲಿತ ಅಭ್ಯರ್ಥಿ ಪ್ರಸನ್ನ ಎನ್.ಗೌ, ರಾಮು, ಮಧು ಜಿ.ಮಾದೇಗೌಡ, ಪ್ರಸನ್ನ ಎನ್.ಗೌಡ, ಮಾಜಿ ಶಾಸಕ ವಾಟಾಳ್ ನಾಗರಾಜ್, ಎಸ್ ಡಿಪಿಐ ರಫತ್ ಉಲ್ಲಾಖಾನ್, ಆರ್ ಪಿಐ ಪಕ್ಷದಿಂದ ಎನ್.ವೀರಭದ್ರಸ್ವಾಮಿ, ಪಕ್ಷೇತರ ಅಭ್ಯರ್ಥಿ ವಿನಯ್, ಬಿಎಸ್ ಪಿಯು ಡಾ.ಬಿ.ಎಚ್.ಚನ್ನಕೇಶವಮೂರ್ತಿ ಪಕ್ಷೇತರರಾಗಿ ಸ್ಪರ್ಧಿಸಿದ್ದರು.
ಒನ್ಇಂಡಿಯಾ ಸುದ್ದಿ)
Recommended Video
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications