Mysuru Dasara: ಅರಮನೆಯಲ್ಲಿ ಕುಶಾಲತೋಪುಗಳಿಗೆ ವಿಶೇಷ ಪೂಜೆ; ಏನಿದರ ಮಹತ್ವ ತಿಳಿಯಿರಿ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಗರಿಗೆದರಿದೆ. 14 ಆನೆಗಳು ಈಗಾಗಲೇ ಅರಮನೆ ಪ್ರವೇಶಿಸಿದ್ದು, ದಿನನಿತ್ಯ ತಾಲೀಮಿನಲ್ಲಿ ಭಾಗಿಯಾಗಿವೆ. ನಿತ್ಯ ಬೆಳಗ್ಗೆ ಸಂಜೆ ಮೈಸೂರಿನ ರಸ್ತೆಗಳಲ್ಲಿ ಆನೆಗಳ ತಾಲೀಮು ಕಂಡು ಮೈಸೂರು ನಿವಾಸಿಗಳು, ಪ್ರವಾಸಿಗರು ಸಂತೋಷಗೊಂಡಿದ್ದಾರೆ. ಈ ನಡುವೆ ಫಿರಂಗಿಗಳಿಗೆ ಗುರುವಾರ ಅರಮನೆಯ ಆನೆ ಬಾಗಿಲಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಸಾಮಾನ್ಯವಾಗಿ ದಸರಾ ಜಂಬೂಸವಾರಿ ದಿನ ತಾಯಿ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆಯನ್ನು ನೆರವೇರಿಸುತ್ತಾರೆ. ಈ ವೇಳೆ ಗೌರವಾರ್ಥವಾಗಿ 21 ಕುಶಾಲತೋಪುಗಳನ್ನು ಸಿಡಿಸಲಾಗುತ್ತದೆ. ಕುಶಾಲತೋಪಿನ ಫಿರಂಗಿ ಸದ್ದಿಗೆ ಆನೆಗಳನ್ನು ಹೆದರಬಾರದು ಎಂದು ತಾಲೀಮು ಈಗಿನಿಂದಲೇ ನಡೆಸಲಾಗುತ್ತದೆ. ಇದಕ್ಕೂ ಮುನ್ನ ಗುರುವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಅರ್ಚಕ ಪ್ರಹ್ಲಾದ್ ರಾವ್ ಫಿರಂಗಿ ಪೂಜೆ ನೆರವೇರಿಸಿದರು. 11 ಫಿರಂಗಿಗಳನ್ನು ಸ್ವಚ್ಛ ಮಾಡಿದ ಬಳಿಕ ಸಾಲಾಗಿ ನಿಲ್ಲಿಸಿ, ವಿಭೂತಿ, ಕುಂಕುಮ, ಅರಿಶಿಣ ಹಚ್ಚಿ, ಮಾವಿನ ತೋರಣ, ಬಾಳೆ ಕಂದುಗಳನ್ನು ಕಟ್ಟಿ, ಚಾಮುಂಡೇಶ್ವರಿಯ ಫೋಟೊ ಇಟ್ಟು ಪೂಜೆ ಮಾಡಲಾಯಿತು. ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿ ಮುತ್ತುರಾಜ್ ಸೇರಿದಂತೆ ಅರಮನೆಯ ಭದ್ರತಾ ಅಧಿಕಾರಿಗಳು ಭಾಗವಹಿಸಿದ್ದರು.
ಸಿಬ್ಬಂದಿಗೂ ತರಬೇತಿ
ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮಾತನಾಡಿ, ದಸರೆ ಜಂಬೂ ಸವಾರಿ ಸಂದರ್ಭ 21 ಕುಶಾಲತೋಪುಗಳನ್ನು ಸಿಡಿಸಲು ಹಾಗೂ ಬನ್ನಿಮಂಟಪದ ಬಳಿ ಕುಶಾಲತೋಪು ಸಿಡಿಸಲು ಫಿರಂಗಿಗಳನ್ನು ಬಳಸುತ್ತೇವೆ. ಇದಕ್ಕೆ ಸಿಬ್ಬಂದಿಗೆ ತರಬೇತಿ ನೀಡುವುದನ್ನು ಆರಂಭಿಸಲು ಫಿರಂಗಿಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು ಎಂದು ತಿಳಿಸಿದರು.
ಮುಖ್ಯ ಅರ್ಚಕ ಪ್ರಹ್ಲಾದ್ ರಾವ್ ಮಾತನಾಡಿ, ಗಣಪತಿ, ಚಾಮುಂಡೇಶ್ವರಿ ಪೂಜೆ ಬಳಿಕ ಫಿರಂಗಿಗಳ ಪೂಜೆ ನಡೆಯಿತು. ಅರಮನೆಯ ಪಕ್ಕದ ಮಾರಮ್ಮ ದೇವಾಲಯದ ಪಕ್ಕದಲ್ಲಿರುವ ಪಾರ್ಕಿಂಗ್ ಪ್ರದೇಶದಲ್ಲಿ 14 ಆನೆಗಳು ಹಾಗೂ ಅಶ್ವದಳಕ್ಕೆ ಮೂರು ಬಾರಿ ಫಿರಂಗಿ ಸಿಡಿಸುವ ತಾಲೀಮು ನಡೆಯುತ್ತದೆ ಎಂದರು.
ಅದ್ದೂರಿ ದಸರಾ ಆಚರಣೆಗೆ ತಯಾರಿ
ಈ ಬಾರಿ ಅದ್ದೂರಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದ್ದು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿರುವ ಕಾರಣ ಅದ್ದೂರಿಯಾಗಿಯೇ ದಸರಾ ಆಚರಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಅಭಿಮನ್ಯು ಈ ಬಾರಿ ಅಂಬಾರಿ ಹೊರಲು ಸಜ್ಜಾಗಿದ್ದು ಎಲ್ಲಾ 14 ಆನೆಗಳು ಈಗಾಗಲೇ ತಾಲೀಮು ನಡೆಸುತ್ತಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications