ಜಂಬೂಸವಾರಿ ದಿನದಂದು ಅನಾವರಣವಾಗಲಿದೆ ವಿಶೇಷ ಸ್ತಬ್ಧ ಚಿತ್ರ

ಮೈಸೂರು, ಅಕ್ಟೊಬರ್ 25: ವಿಶ್ವವಿಖ್ಯಾತ ದಸರಾ ಜಂಬೂಸವಾರಿಯ ದಿನದಂದು ಕೊರೊನಾ ಮಹಾಮಾರಿಯ ವಿಷಯಾಧಾರಿತ ಪುಟ್ಟ ಸ್ತಬ್ಧ ಚಿತ್ರ ಸಾರ್ವಜನಿಕರಿಗೆ ಅನಾವರಣವಾಗಲಿದೆ. ಯುವ ಕಲಾವಿದ ಶಿವಕುಮಾರ್.ಎಚ್.ದೊಡ್ಡರಿಸಿನಕೆರೆ ಕೊರೊನಾ ವಾರಿಯರ್ಸ್ ಗೆ ಅರ್ಪಿಸಿದ್ದಾರೆ.

ಕಲಾವಿದ ಶಿವಕುಮಾರ್.ಎಚ್ ದೊಡ್ಡರಿಸಿನಕೆರೆ ಅವರು ಮಹಾಮಾರಿ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸಲು ನಾಲ್ಕು ಅಡಿ ಉದ್ದ, ಮೂರು ಅಡಿ ಅಗಲ, ಮೂರು ಅಡಿ ಎತ್ತರವುಳ್ಳ ಪುಟ್ಟ ಸ್ತಬ್ಧಚಿತ್ರವನ್ನು (ಟ್ಯಾಬ್ಲೋ) ತಯಾರಿಸಿದ್ದಾರೆ.

ಮೈಸೂರು ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಅ.26 ರಂದು ಬೆ.11ಕ್ಕೆ ಕೊರೊನಾ ವಾರಿಯರ್ಸ್ ಅವರು ಸ್ತಬ್ಧ ಚಿತ್ರವನ್ನು ಉದ್ಘಾಟಿಸಲಿದ್ದಾರೆ. ಮೈಸೂರು ನಗರದ ಜನತೆ ಕೊರೊನಾ ವಿರುದ್ಧ ಜಾಗೃತರಾಗಿ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Mysuru: Special Tablo To Be Unveiled On Dasara Jamboo Savari Day

ನಗರದ ಪ್ರಮುಖ ವೃತ್ತಗಳಾದ ಚಾಮರಾಜೇಂದ್ರ ಮತ್ತು ಕೃಷ್ಣರಾಜೇಂದ್ರ ವೃತ್ತಗಳಲ್ಲಿ ಸಾರ್ವಜನಿಕರಿಗೆ ಪ್ರದರ್ಶಿಸಲಾಗುವುದು. ಇದರಿಂದ ಟ್ರಾಫಿಕ್ ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯಿಂದಲೂ ತೊಂದರೆಯಾಗದಂತೆ ಗಮನದಲ್ಲಿಟ್ಟುಕೊಂಡು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯುವ ಕಲಾವಿದ ಶಿವಕುಮಾರ್ ಎಚ್.ದೊಡ್ಡರಸಿನಕೆರೆ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+