ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಟೌನ್ ಶಿಪ್; ಎಷ್ಟು ಮನೆಗಳು?
ಮೈಸೂರು, ಡಿಸೆಂಬರ್ 16: ಮೈಸೂರು ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಟೌನ್ ಶಿಪ್ ನಿರ್ಮಾಣವಾಗಲಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ ಯಶಸ್ವಿಯಾಗಿರುವ ಇಂತಹ ಯೋಜನೆ ಈಗ ಮೈಸೂರು ನಗರಕ್ಕೂ ಬರಲಿದೆ.
ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಲಲಿತ್ರಾದಿಪುರದಲ್ಲಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಾಗದಲ್ಲಿ ಟೌನ್ಶಿಪ್ ನಿರ್ಮಾಣದ ಸ್ಥಳವನ್ನು ಪರಿಶೀಲನೆ ಮಾಡಿದರು.
ಬೆಂಗಳೂರಿನಲ್ಲಿ ಯಶಸ್ವಿಯಾಗಿರುವ ಗುಂಪು ಮನೆ ಯೋಜನೆಯನ್ನು ಮೈಸೂರು ನಗರದಲ್ಲಿಯೂ ಜಾರಿಗೊಳಿಸುವ ಉದ್ದೇಶದಿಂದ ಮುಡಾ ಅಧ್ಯಕ್ಷ ಎಚ್. ವಿ. ರಾಜೀವ್ ಮತ್ತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಎಸ್. ಟಿ. ಸೋಮಶೇಖರ್ ಮಾತನಾಡಿ, "ಬೆಂಗಳೂರು ಮಾದರಿಯಲ್ಲಿ ಮೈಸೂರಿನ ಜನರಿಗೂ ಕೈ ಗೆಟುಕುವ ದರದಲ್ಲಿ ಮನೆ ನೀಡಲು ಈ ಯೋಜನೆ ರೂಪಿಸಲಾಗುತ್ತಿದೆ" ಎಂದು ಹೇಳಿದರು.

22 ಎಕರೆ ಪ್ರದೇಶದಲ್ಲಿ ಟೌನ್ ಶಿಪ್
ಮಾಧ್ಯಮಗಳ ಜೊತೆ ಮಾತನಾಡಿದ ಎಸ್. ಟಿ. ಸೋಮಶೇಖರ್, "ಲಲಿತಾದ್ರಿಪುರದ 22 ಎಕರೆ ಪ್ರದೇಶದಲ್ಲಿ 2500 ಮನೆ ಕಟ್ಟುವ ಗುರಿ ಹೊಂದಲಾಗಿದೆ. ಈ ಟೌನ್ ಶಿಪ್ನಲ್ಲಿ ಅಗ್ಗದ ದರದಲ್ಲಿ ಜನರಿಗೆ ಮನೆ ನೀಡಲಾಗುತ್ತದೆ. ಇಲ್ಲಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುವ ಯೋಜನೆ ಇದೆ. ಇದಕ್ಕಾಗಿ ನಗರಾಭಿವೃದ್ಧಿ ಇಲಾಖೆಯ ಒಪ್ಪಿಗೆ ಪಡೆದು 15 ದಿನದೊಳಗೆ ಕೆಲಸ ಆರಂಭಿಸಲಾಗುವುದು" ಎಂದು ಸಚಿವರು ಹೇಳಿದರು.

85 ಸಾವಿರಕ್ಕೂ ಅಧಿಕ ಅರ್ಜಿ
"ಟೌನ್ ಶಿಪ್ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿದರೆ ಜನರು ಇಷ್ಟ ಪಡುತ್ತಾರೆ. ಮೂಡಾ ನಿವೇಶಕ್ಕಾಗಿ 85 ಸಾವಿರಕ್ಕೂ ಅಧಿಕ ಜನರು ಅರ್ಜಿ ಸಲ್ಲಿಸಿದ್ದಾರೆ. ಇವರಿಗೆ ನಿವೇಶನ ಕೊಡದಿದ್ದರೂ, ಮನೆಗಳನ್ನು ಕೊಡಬಹುದಾಗಿದೆ. ಇದಕ್ಕಾಗಿ ಮನೆ ನಿರ್ಮಿಸಿಕೊಡುವ ಯೋಜನೆ ರೂಪಿಸಲಾಗುವುದು" ಎಂದು ಸಚಿವರು ವಿವರಿಸಿದರು.

ಅಧಿಕ ಬೇಡಿಕೆ ಇದೆ
"ಬೆಂಗಳೂರು ನಗರದ ಹೊಲಗರನಹಳ್ಳಿಯಲ್ಲಿ ಗುಂಪು ಮನೆ ನಿರ್ಮಿಸಿದ್ದೇವೆ. ಆರಂಭದಲ್ಲಿ 25 ಲಕ್ಷ ರೂ.ಗೆ ಮಾರಾಟ ಆಗುತ್ತಿದ್ದ ಮನೆಗಳು, ಈಗ 75 ರಿಂದ 85 ಲಕ್ಷ ರೂ. ವರೆಗೆ ಮಾರಾಟ ಆಗುವ ಮಟ್ಟಿಗೆ ಬೇಡಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಇದೇ ಮಾದರಿಯಲ್ಲಿ ಮೈಸೂರಿನಲ್ಲಿಯೂ ಯೋಜನೆ ಜಾರಿಗೊಳಿಸಲಾಗುತ್ತದೆ" ಎಂದು ಎಸ್. ಟಿ. ಸೋಮಶೇಖರ್ ಹೇಳಿದರು.

ಸರ್ಕಾರದ ಅನುಮತಿ ಬೇಕಿದೆ
ಮೂಡಾ ಅಧ್ಯಕ್ಷ ಎಚ್. ವಿ. ರಾಜೀವ್ ಮಾತನಾಡಿ, "ಬೆಂಗಳೂರಿನಲ್ಲಿ ಸಾಮಾನ್ಯ ಜನರಿಗಾಗಿ ನಿರ್ಮಿಸಿರುವ ಗುಣಮಟ್ಟ ದ ಗುಂಪು ಮನೆಗಳಿಗೆ 10 ದಿನದ ಹಿಂದೆ ನಮ್ಮ ತಂಡ ಭೇಟಿ ನೀಡಿತ್ತು. ಅಲ್ಲಿರುವ ಸವಲತ್ತುಗಳನ್ನು ಗಮನಿಸಿದ್ದೇವೆ. ಅದೇ ಮಾದರಿಯಲ್ಲಿ ಮೈಸೂರಿನಲ್ಲಿಯೂ ಯೋಜನೆ ಜಾರಿಗೊಳಿಸುವ ಉದ್ದೇಶವಿದೆ. ಚಾಮುಂಡಿ ಬೆಟ್ಟದ ಅಹ್ಲಾದಕರ ವಾತವರಣ, ನೀರು, ಒಳ ಚರಂಡಿಯ ಮಾರ್ಗ ಈಗಾಗಲೇ ಇದೆ. ಯೋಜನೆಗೆ ಡಿಪಿಆರ್ ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗುವುದು" ಎಂದರು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications