ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಟೌನ್ ಶಿಪ್; ಎಷ್ಟು ಮನೆಗಳು?
ಮೈಸೂರು, ಡಿಸೆಂಬರ್ 16: ಮೈಸೂರು ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಟೌನ್ ಶಿಪ್ ನಿರ್ಮಾಣವಾಗಲಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ ಯಶಸ್ವಿಯಾಗಿರುವ ಇಂತಹ ಯೋಜನೆ ಈಗ ಮೈಸೂರು ನಗರಕ್ಕೂ ಬರಲಿದೆ.
ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಲಲಿತ್ರಾದಿಪುರದಲ್ಲಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಾಗದಲ್ಲಿ ಟೌನ್ಶಿಪ್ ನಿರ್ಮಾಣದ ಸ್ಥಳವನ್ನು ಪರಿಶೀಲನೆ ಮಾಡಿದರು.
ಬೆಂಗಳೂರಿನಲ್ಲಿ ಯಶಸ್ವಿಯಾಗಿರುವ ಗುಂಪು ಮನೆ ಯೋಜನೆಯನ್ನು ಮೈಸೂರು ನಗರದಲ್ಲಿಯೂ ಜಾರಿಗೊಳಿಸುವ ಉದ್ದೇಶದಿಂದ ಮುಡಾ ಅಧ್ಯಕ್ಷ ಎಚ್. ವಿ. ರಾಜೀವ್ ಮತ್ತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಎಸ್. ಟಿ. ಸೋಮಶೇಖರ್ ಮಾತನಾಡಿ, "ಬೆಂಗಳೂರು ಮಾದರಿಯಲ್ಲಿ ಮೈಸೂರಿನ ಜನರಿಗೂ ಕೈ ಗೆಟುಕುವ ದರದಲ್ಲಿ ಮನೆ ನೀಡಲು ಈ ಯೋಜನೆ ರೂಪಿಸಲಾಗುತ್ತಿದೆ" ಎಂದು ಹೇಳಿದರು.

22 ಎಕರೆ ಪ್ರದೇಶದಲ್ಲಿ ಟೌನ್ ಶಿಪ್
ಮಾಧ್ಯಮಗಳ ಜೊತೆ ಮಾತನಾಡಿದ ಎಸ್. ಟಿ. ಸೋಮಶೇಖರ್, "ಲಲಿತಾದ್ರಿಪುರದ 22 ಎಕರೆ ಪ್ರದೇಶದಲ್ಲಿ 2500 ಮನೆ ಕಟ್ಟುವ ಗುರಿ ಹೊಂದಲಾಗಿದೆ. ಈ ಟೌನ್ ಶಿಪ್ನಲ್ಲಿ ಅಗ್ಗದ ದರದಲ್ಲಿ ಜನರಿಗೆ ಮನೆ ನೀಡಲಾಗುತ್ತದೆ. ಇಲ್ಲಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುವ ಯೋಜನೆ ಇದೆ. ಇದಕ್ಕಾಗಿ ನಗರಾಭಿವೃದ್ಧಿ ಇಲಾಖೆಯ ಒಪ್ಪಿಗೆ ಪಡೆದು 15 ದಿನದೊಳಗೆ ಕೆಲಸ ಆರಂಭಿಸಲಾಗುವುದು" ಎಂದು ಸಚಿವರು ಹೇಳಿದರು.

85 ಸಾವಿರಕ್ಕೂ ಅಧಿಕ ಅರ್ಜಿ
"ಟೌನ್ ಶಿಪ್ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿದರೆ ಜನರು ಇಷ್ಟ ಪಡುತ್ತಾರೆ. ಮೂಡಾ ನಿವೇಶಕ್ಕಾಗಿ 85 ಸಾವಿರಕ್ಕೂ ಅಧಿಕ ಜನರು ಅರ್ಜಿ ಸಲ್ಲಿಸಿದ್ದಾರೆ. ಇವರಿಗೆ ನಿವೇಶನ ಕೊಡದಿದ್ದರೂ, ಮನೆಗಳನ್ನು ಕೊಡಬಹುದಾಗಿದೆ. ಇದಕ್ಕಾಗಿ ಮನೆ ನಿರ್ಮಿಸಿಕೊಡುವ ಯೋಜನೆ ರೂಪಿಸಲಾಗುವುದು" ಎಂದು ಸಚಿವರು ವಿವರಿಸಿದರು.

ಅಧಿಕ ಬೇಡಿಕೆ ಇದೆ
"ಬೆಂಗಳೂರು ನಗರದ ಹೊಲಗರನಹಳ್ಳಿಯಲ್ಲಿ ಗುಂಪು ಮನೆ ನಿರ್ಮಿಸಿದ್ದೇವೆ. ಆರಂಭದಲ್ಲಿ 25 ಲಕ್ಷ ರೂ.ಗೆ ಮಾರಾಟ ಆಗುತ್ತಿದ್ದ ಮನೆಗಳು, ಈಗ 75 ರಿಂದ 85 ಲಕ್ಷ ರೂ. ವರೆಗೆ ಮಾರಾಟ ಆಗುವ ಮಟ್ಟಿಗೆ ಬೇಡಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಇದೇ ಮಾದರಿಯಲ್ಲಿ ಮೈಸೂರಿನಲ್ಲಿಯೂ ಯೋಜನೆ ಜಾರಿಗೊಳಿಸಲಾಗುತ್ತದೆ" ಎಂದು ಎಸ್. ಟಿ. ಸೋಮಶೇಖರ್ ಹೇಳಿದರು.

ಸರ್ಕಾರದ ಅನುಮತಿ ಬೇಕಿದೆ
ಮೂಡಾ ಅಧ್ಯಕ್ಷ ಎಚ್. ವಿ. ರಾಜೀವ್ ಮಾತನಾಡಿ, "ಬೆಂಗಳೂರಿನಲ್ಲಿ ಸಾಮಾನ್ಯ ಜನರಿಗಾಗಿ ನಿರ್ಮಿಸಿರುವ ಗುಣಮಟ್ಟ ದ ಗುಂಪು ಮನೆಗಳಿಗೆ 10 ದಿನದ ಹಿಂದೆ ನಮ್ಮ ತಂಡ ಭೇಟಿ ನೀಡಿತ್ತು. ಅಲ್ಲಿರುವ ಸವಲತ್ತುಗಳನ್ನು ಗಮನಿಸಿದ್ದೇವೆ. ಅದೇ ಮಾದರಿಯಲ್ಲಿ ಮೈಸೂರಿನಲ್ಲಿಯೂ ಯೋಜನೆ ಜಾರಿಗೊಳಿಸುವ ಉದ್ದೇಶವಿದೆ. ಚಾಮುಂಡಿ ಬೆಟ್ಟದ ಅಹ್ಲಾದಕರ ವಾತವರಣ, ನೀರು, ಒಳ ಚರಂಡಿಯ ಮಾರ್ಗ ಈಗಾಗಲೇ ಇದೆ. ಯೋಜನೆಗೆ ಡಿಪಿಆರ್ ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗುವುದು" ಎಂದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications