ಭ್ರಷ್ಟರೇ ಸಿಎಂ ಆಗುತ್ತಾರೆ ಎಂದಿದ್ದ ಸಿದ್ದರಾಮಯ್ಯಗೆ ಶ್ರೀನಿವಾಸ್ ಪ್ರಸಾದ್ ತಿರುಗೇಟು
ಮೈಸೂರು, ಜುಲೈ 26: ಸಿಎಂ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ್ದ ಬೆನ್ನಲ್ಲೆ ಯಡಿಯೂರಪ್ಪ ಭ್ರಷ್ಟ ಮುಖ್ಯಮಂತ್ರಿ ಹಾಗೂ ಮುಂದೆ ಬರುವವರು ಭ್ರಷ್ಟರೇ ಆಗಿರುತ್ತಾರೆ ಎಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಂಸದ ವಿ. ಶ್ರೀನಿವಾಸ್ ಪ್ರಸಾದ್, "ಸಿದ್ದರಾಮಯ್ಯ ಇವರೊಬ್ಬರೆ ಪ್ರಾಮಾಣಿಕರಾ? ಹಾಗಾದರೆ ಬೇರೆ ಯಾರನ್ನೂ ಸಿಎಂ ಮಾಡಬಾರದಾ? ಜವಾಬ್ದಾರಿಯುತವಾಗಿ ಮಾತನಾಡುವುದನ್ನು ಇನ್ನು ಸಿದ್ದರಾಮಯ್ಯ ಕಲಿತಿಲ್ಲ. ಅವರು ಬಾಲಿಷ ಹೇಳಿಕೆಗಳನ್ನು ಕೊಡುತ್ತಿದ್ದಾರೆ,'' ಎಂದು ಕಿಡಿಕಾರಿದ್ದಾರೆ.

"ಸಿಎಂ ಆಗಿದ್ದುಕೊಂಡೇ ಕಳೆದ ಚುನಾವಣೆಯಲ್ಲಿ ಸೋತರು, ಮಂತ್ರಿಗಳೆಲ್ಲ ಉದುರಿ ಹೋದರು. ಬಾದಾಮಿಯಲ್ಲಿ ಸೋತಿದ್ದರೆ ಸಿದ್ದರಾಮಯ್ಯ ಸ್ಥಿತಿ ಏನಾಗುತಿತ್ತು. ಇವರು ವಿರೋಧ ಪಕ್ಷದ ನಾಯಕ ಹೇಗಾಗಿದ್ದಾರೆ ಎಂಬುದು ಗೊತ್ತು. ನಾನೊಬ್ಬ ಹಿರಿಯ ನಾಯಕನಾಗಿದ್ದೆ. ನನ್ನನ್ನು ವ್ಯವಸ್ಥಿತವಾಗಿ ತುಳಿದರು. ಇದಕ್ಕೆ ಪ್ರತಿಯಾಗಿ ತಕ್ಕ ಪಾಠ ಕಲಿಸಿದ್ದೇನೆ. ಇವರ ಹೇಳಿಕೆಗಳೆಲ್ಲ ಬಾಲಿಷ,'' ಎಂದು ಸಿದ್ದರಾಮಯ್ಯ ವಿರುದ್ಧ ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications