Srirangapatna bypass: ಸಂಚಾರಕ್ಕೆ ಮುಕ್ತವಾದ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇಯ ಶ್ರೀರಂಗಪಟ್ಟಣ ಬೈಪಾಸ್
ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚೆಗೆ ಮಂಡ್ಯ ಬೈಪಾಸ್ ಅನ್ನು ಸಂಚಾರ ಮುಕ್ತಗೊಳಿಸಲಾಗಿತ್ತು. ಇದೀಗ ಶ್ರೀರಂಗಪಟ್ಟಣ ಬೈಪಾಸ್ ಅನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.
ಮೈಸೂರು, ಜನವರಿ. 30: ಮೈಸೂರು - ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿನ ಮಂಡ್ಯ ಬೈಪಾಸ್ ಸಂಚಾರಕ್ಕೆ ಮುಕ್ತವಾದ ಕೆಲವೇ ದಿನಗಳ ನಂತರ ಶ್ರೀರಂಗಪಟ್ಟಣ ಬೈಪಾಸ್ ರಸ್ತೆ ಕೂಡ ಸಂಚಾರಕ್ಕೆ ಮುಕ್ತವಾಗಿದೆ.
ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿನ 7 ಕಿಮೀ ಉದ್ದದ ಶ್ರೀರಂಗಪಟ್ಟಣ ಬೈಪಾಸ್ ರಸ್ತೆ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಪ್ರಕಟಿಸಿದ್ದಾರೆ. ಇದರೊಂದಿಗೆ ಹತ್ತು ಪಥಗಳ ಎಕ್ಸ್ಪ್ರೆಸ್ವೇಯ ಬಹುನಿರೀಕ್ಷಿತ ಎಲ್ಲಾ ಗ್ರೀನ್ಫೀಲ್ಡ್ ವಿಭಾಗಗಳು ಪೂರ್ಣಗೊಂಡಿದೆ.
ಮೈಸೂರು ಸಂಸದ ಪ್ರತಾಪ್ ಸಿಂಹ ಶ್ರೀರಂಗಪಟ್ಟಣ ಬೈಪಾಸ್ನ ಸ್ಥಿತಿಗತಿಯನ್ನು ತೋರಿಸುವ ವಿಡಿಯೋವೊಂದನ್ನು ಈ ಹಿಂದೆ ಟ್ವೀಟ್ ಮಾಡಿದ್ದರು. ಇದೀಗ ಮಂಡ್ಯ ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿ ಬೈಪಾಸ್ನಲ್ಲಿ ವಾಹನಗಳ ಸಂಚಾರ ನಡೆಸುತ್ತಿದೆ ಎಂದು ದೃಢಪಡಿಸಿದೆ.

ಮಂಡ್ಯ ಜಿಲ್ಲೆಯ ಮೂಲಕ ಹಾದುಹೋಗುವ ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇಯ ಎಲ್ಲಾ ಬೈಪಾಸ್ಗಳು ಸಂಚಾರಕ್ಕೆ ಮುಕ್ತವಾಗಿವೆ ಎಂದು ನಿಯಂತ್ರಣ ಕೊಠಡಿಯ ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳು ಈಗಾಗಲೇ 7 ಕಿಮೀ ಉದ್ದದ ಬಿಡದಿ ಬೈಪಾಸ್ ಗ್ರೀನ್ಫೀಲ್ಡ್ ವಿಭಾಗವನ್ನು, 22 ಕಿಮೀ ಉದ್ದದ ರಾಮನಗರ ಮತ್ತು ಚನ್ನಪಟ್ಟಣ ಬೈಪಾಸ್ ಮಾಡುವ ಮತ್ತು 7 ಕಿಮೀ ಉದ್ದದ ಮದ್ದೂರು ಬೈಪಾಸ್ಗಳನ್ನು ಈಗಾಗಲೇ ಸಂಚಾರ ಮುಕ್ತಗೊಳಿಸಿದ್ದಾರೆ. ಜನವರಿ 25 ರಂದು 10 ಕಿಮೀ ಉದ್ದದ ಮಂಡ್ಯ ಬೈಪಾಸ್ ಅನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.

ಈ ಹೊಸ ಮೈಸೂರು - ಬೆಂಗಳೂರು ಎಕ್ಸ್ಪ್ರೆಸ್ವೇಯಿಂದಾಗಿ ಎರಡು ನಗರಗಳ ನಡುವಿನ ಪ್ರಯಾಣದ ಸಮಯವು ಮೂರು ಗಂಟೆಗಳಿಂದ ಸುಮಾರು 90 ನಿಮಿಷಗಳಿಗೆ ಇಳಿಯುವ ನಿರೀಕ್ಷೆಯಿದೆ. 119 ಕಿಮೀ ಉದ್ದದ ಎಕ್ಸ್ಪ್ರೆಸ್ವೇ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯ ಬಳಿ ಪ್ರಾರಂಭವಾಗಿ ಮೈಸೂರಿನ ಔಟರ್ ರಿಂಗ್ ರೋಡ್ನಲ್ಲಿ ಕೊನೆಗೊಳ್ಳುತ್ತದೆ.
ರಾಷ್ಟ್ರೀಯ ಹೆದ್ದಾರಿ 275 ನಲ್ಲಿನ ಎಕ್ಸ್ಪ್ರೆಸ್ವೇಯನ್ನು ದಿಲೀಪ್ ಬಿಲ್ಡ್ಕಾನ್ 8,000 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಕೈಗೆತ್ತಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯು 19 ಪ್ರಮುಖ ಸೇತುವೆಗಳು, 44 ಚಿಕ್ಕ ಸೇತುವೆಗಳು, ನಾಲ್ಕು ರೈಲು ಮೇಲ್ಸೇತುವೆಗಳು ಮತ್ತು ಸುಮಾರು 50 ಅಂಡರ್ಪಾಸ್ಗಳನ್ನು ಒಳಗೊಂಡಿದೆ. ಎಕ್ಸ್ಪ್ರೆಸ್ವೇ 2022 ರಲ್ಲಿ ಪೂರ್ಣಗೊಳ್ಳಬೇಕಾಗಿದ್ದರೂ, ಹಲವಾರು ವಿಳಂಬಗಳು ನಿರ್ಮಾಣ ಹಂತದಲ್ಲಿರುವ ರಸ್ತೆಯಿಂದಾಗಿ ಇನ್ನು ಸಾರ್ವಜನಿಕರಿಗೆ ಮುಕ್ತವಾಗಿಲ್ಲ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications