ಶ್ರೀರಂಗಪಟ್ಟಣ ದಸರಾದಲ್ಲಿ ಪಟಾಕಿ ಸದ್ದಿಗೆ ಬೆದರಿ ತಿರುಗಿಬಿದ್ದ ಆನೆ; ದಿಕ್ಕಾಪಾಲಾದ ಜನ
ಮೈಸೂರು, ಅಕ್ಟೋಬರ್ 9: ಮೈಸೂರು ಜಿಲ್ಲೆಯ ಶ್ರೀರಂಗಪಟ್ಟಣದ ದಸರೆಯಲ್ಲಿ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಪಟಾಕಿ ಶಬ್ದಕ್ಕೆ ಬೆದರಿದ ಗೋಪಾಲಸ್ವಾಮಿ ಆನೆ ಗಾಬರಿಯಿಂದ ಹಠಾತ್ತನೆ ಜನರತ್ತ ತಿರುಗಿಬಿದ್ದ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ದಸರಾ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸಿದ್ದ ಅಂಬಾರಿ ಹೊತ್ತಿದ್ದ ಗೋಪಾಲಸ್ವಾಮಿ ಆನೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಾ ಸಾಗುತ್ತಿದ್ದ. ಈ ವೇಳೆ ಸ್ಥಳೀಯರು ಪಟಾಕಿ ಸಿಡಿಸಿದ್ದಾರೆ.
ಪಟಾಕಿ ಸದ್ದಿಗೆ ಬೆದರಿದ ಗೋಪಾಲಸ್ವಾಮಿ, ಅಂಬಾರಿ ಸಹಿತ ಏಕಾಏಕಿ ಜನರತ್ತ ಹಿಂದಿರುಗಿ ಬಿದ್ದಿದ್ದಾನೆ. ಇದರಿಂದ ಗಾಬರಿಗೊಂಡ ಜನರು ದಿಕ್ಕಾಪಾಲಾಗಿ ಓಡಿದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ವಲ್ಪ ಕಾಲ ಮೆರವಣಿಗೆಯನ್ನು ಸ್ಥಗಿತಗೊಳಿಸಿದರು.

ಮೈಸೂರಿನಲ್ಲೂ ಪಟಾಕಿ ಟ್ರೈನಿಂಗ್ ಹಾಗೂ ಫಿರಂಗಿ ತಾಲೀಮಿನ ವೇಳೆಯಲ್ಲೂ ಗೋಪಾಲಸ್ವಾಮಿ ಆನೆ ಬೆದರಿದ್ದ. ಇದೀಗ ಪಟಾಕಿ, ವಾದ್ಯದ ಸದ್ದಿಗೆ ಬೆದರಿದ್ದಾನೆ.
ನಾಡದೇವಿಗೆ ಪುಷ್ಪಾರ್ಚನೆ ಬಳಿಕ ಮರದ ಅಂಬಾರಿ ಹೊತ್ತಿದ್ದ ಗೋಪಾಲಸ್ವಾಮಿ ಆನೆ ಬೆದರಿದ್ದು, ಶ್ರೀರಂಗಪಟ್ಟಣದ ಬನ್ನಿಮಂಟಪ ಬಳಿ ಈ ಘಟನೆ ನಡೆದಿದೆ. ಗಾಬರಿಗೊಂಡು ಒಂದು ಸುತ್ತು ತಿರುಗಿದ ಗೋಪಾಲಸ್ವಾಮಿ ಏಕಾಏಕಿ ಹಿಂದಕ್ಕೆ ತಿರುಗಿ ನಿಂತಿದ್ದಾನೆ. ಈ ನಡುವೆ ಆನೆ ಬೆದರುತ್ತಿದ್ದಂತೆ ಜನರು ಸಹ ಚೆಲ್ಲಾಪಿಲ್ಲಿಯಾಗಿ ಓಡಿದರು. ಈ ನಡುವೆ ವಾದ್ಯ, ಧ್ವನಿವರ್ಧಕ ಬಂದ್ ಮಾಡಿದ ಬಳಿಕ ಆನೆ ಸಮಾಧಾನಗೊಂಡಿತು.
ಶ್ರೀರಂಗಪಟ್ಟಣದ ದಸರಾ ಮಹೋತ್ಸವದಲ್ಲಿ ಪಟಾಕಿ ಸದ್ದಿಗೆ ಗೋಪಾಲಸ್ವಾಮಿ ಆನೆ ಬೆದರಿದ ಹಿನ್ನೆಲೆ ಜಂಬೂಸವಾರಿ ಮೆರವಣಿಗೆ ಸ್ಥಗಿತಗೊಳಿಸಲಾಗಿದೆ. ಗೋಪಾಲಸ್ವಾಮಿ ಬೆನ್ನ ಮೇಲಿದ್ದ ಮರದ ಅಂಬಾರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೆಳಗೆ ಇಳಿಸಿದರು. ನಂತರ ಬೆಳ್ಳಿ ರಥದಲ್ಲಿ ಚಾಮುಂಡೇಶ್ವರಿ ವಿಗ್ರಹ ಇಟ್ಟು ಮೆರವಣಿಗೆ ನಡೆಸಿದರು.

ಇದಕ್ಕೂ ಮುನ್ನ ಶ್ರೀರಂಗಪಟ್ಟಣ ದಸರಾಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ನಾಡದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ಆದಿ ಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಪುಷ್ಟಾರ್ಚನೆ ಮಾಡುವ ಮೂಲಕ ಶ್ರೀರಂಗಪಟ್ಟಣ ದಸರಾ ಮೆರವಣಿಗೆಯನ್ನು ಉದ್ಘಾಟನೆ ಮಾಡಿದರು.
ಈ ವೇಳೆ ಚುಂಚಶ್ರೀ ಜೊತೆಗೆ ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ, ಸ್ಥಳೀಯ ಶಾಸಕ ರವೀಂದ್ರ ಶ್ರೀಕಂಠಯ್ಯ ಸೇರಿದಂತೆ ಅಧಿಕಾರಿಗಳು ಪುಷ್ಟಾರ್ಚನೆ ಮಾಡಿದರು. ಶುಭ ಕುಂಭ ಲಗ್ನದಲ್ಲಿ ಜಂಬೂ ಸವಾರಿ ಆರಂಭವಾಗಿತ್ತು. ಬನ್ನಿ ಮರಕ್ಕೆ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ಸಹ ನಡೆಸಲಾಗಿತ್ತು.
ಈ ಎಲ್ಲಾ ಪೂಜಾ ಕೈಂಕರ್ಯ ಮುಗಿದ ಬಳಿಕ ಜಂಬೂಸವಾರಿ ಆರಂಭಿಸಲಾಗಿತ್ತು. ನಾಡದೇವಿ ಚಾಮುಂಡೇಶ್ವರಿ ಹೊತ್ತ ಗೋಪಾಲಸ್ವಾಮಿ ಆನೆ ನಿಧಾನವಾಗಿ ಹೆಜ್ಜೆ ಹಾಕುತ್ತಾ ಮೆರವಣಿಗೆಯಲ್ಲಿ ಸಾಗುತ್ತಿದ್ದ. ಅಂಬಾರಿ ಹೊತ್ತು ಸಾಗುತ್ತಿದ್ದ ಗೋಪಾಲಸ್ವಾಮಿಗೆ ಕಾವೇರಿ ಆನೆ ಸಾಥ್ ನೀಡಿತ್ತು.
ಮೆರವಣಿಗೆಯಲ್ಲಿ ಭಾಗವಹಿಸಿದ್ದ 25ಕ್ಕೂ ಹೆಚ್ಚು ಕಲಾತಂಡಗಳು ಶ್ರೀರಂಗಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಶ್ರೀರಂಗನಾಥ ದೇವಾಲಯದ ಬಳಿ ಜಂಬೂಸವಾರಿ ಸಂಪನ್ನವಾಗಬೇಕಿತ್ತು. ಆದರೆ ದಾರಿ ಮಧ್ಯೆ ಆನೆಗಳು ಬೆದರಿದ ಕಾರಣ ಅರ್ಧದಲ್ಲೇ ನಿಲ್ಲಿಸಬೇಕಾಯಿತು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications