ಶ್ರೀರಂಗಪಟ್ಟಣ ದಸರಾದಲ್ಲಿ ಪಟಾಕಿ ಸದ್ದಿಗೆ ಬೆದರಿ ತಿರುಗಿಬಿದ್ದ ಆನೆ; ದಿಕ್ಕಾಪಾಲಾದ ಜನ
ಮೈಸೂರು, ಅಕ್ಟೋಬರ್ 9: ಮೈಸೂರು ಜಿಲ್ಲೆಯ ಶ್ರೀರಂಗಪಟ್ಟಣದ ದಸರೆಯಲ್ಲಿ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಪಟಾಕಿ ಶಬ್ದಕ್ಕೆ ಬೆದರಿದ ಗೋಪಾಲಸ್ವಾಮಿ ಆನೆ ಗಾಬರಿಯಿಂದ ಹಠಾತ್ತನೆ ಜನರತ್ತ ತಿರುಗಿಬಿದ್ದ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ದಸರಾ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸಿದ್ದ ಅಂಬಾರಿ ಹೊತ್ತಿದ್ದ ಗೋಪಾಲಸ್ವಾಮಿ ಆನೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಾ ಸಾಗುತ್ತಿದ್ದ. ಈ ವೇಳೆ ಸ್ಥಳೀಯರು ಪಟಾಕಿ ಸಿಡಿಸಿದ್ದಾರೆ.
ಪಟಾಕಿ ಸದ್ದಿಗೆ ಬೆದರಿದ ಗೋಪಾಲಸ್ವಾಮಿ, ಅಂಬಾರಿ ಸಹಿತ ಏಕಾಏಕಿ ಜನರತ್ತ ಹಿಂದಿರುಗಿ ಬಿದ್ದಿದ್ದಾನೆ. ಇದರಿಂದ ಗಾಬರಿಗೊಂಡ ಜನರು ದಿಕ್ಕಾಪಾಲಾಗಿ ಓಡಿದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ವಲ್ಪ ಕಾಲ ಮೆರವಣಿಗೆಯನ್ನು ಸ್ಥಗಿತಗೊಳಿಸಿದರು.

ಮೈಸೂರಿನಲ್ಲೂ ಪಟಾಕಿ ಟ್ರೈನಿಂಗ್ ಹಾಗೂ ಫಿರಂಗಿ ತಾಲೀಮಿನ ವೇಳೆಯಲ್ಲೂ ಗೋಪಾಲಸ್ವಾಮಿ ಆನೆ ಬೆದರಿದ್ದ. ಇದೀಗ ಪಟಾಕಿ, ವಾದ್ಯದ ಸದ್ದಿಗೆ ಬೆದರಿದ್ದಾನೆ.
ನಾಡದೇವಿಗೆ ಪುಷ್ಪಾರ್ಚನೆ ಬಳಿಕ ಮರದ ಅಂಬಾರಿ ಹೊತ್ತಿದ್ದ ಗೋಪಾಲಸ್ವಾಮಿ ಆನೆ ಬೆದರಿದ್ದು, ಶ್ರೀರಂಗಪಟ್ಟಣದ ಬನ್ನಿಮಂಟಪ ಬಳಿ ಈ ಘಟನೆ ನಡೆದಿದೆ. ಗಾಬರಿಗೊಂಡು ಒಂದು ಸುತ್ತು ತಿರುಗಿದ ಗೋಪಾಲಸ್ವಾಮಿ ಏಕಾಏಕಿ ಹಿಂದಕ್ಕೆ ತಿರುಗಿ ನಿಂತಿದ್ದಾನೆ. ಈ ನಡುವೆ ಆನೆ ಬೆದರುತ್ತಿದ್ದಂತೆ ಜನರು ಸಹ ಚೆಲ್ಲಾಪಿಲ್ಲಿಯಾಗಿ ಓಡಿದರು. ಈ ನಡುವೆ ವಾದ್ಯ, ಧ್ವನಿವರ್ಧಕ ಬಂದ್ ಮಾಡಿದ ಬಳಿಕ ಆನೆ ಸಮಾಧಾನಗೊಂಡಿತು.
ಶ್ರೀರಂಗಪಟ್ಟಣದ ದಸರಾ ಮಹೋತ್ಸವದಲ್ಲಿ ಪಟಾಕಿ ಸದ್ದಿಗೆ ಗೋಪಾಲಸ್ವಾಮಿ ಆನೆ ಬೆದರಿದ ಹಿನ್ನೆಲೆ ಜಂಬೂಸವಾರಿ ಮೆರವಣಿಗೆ ಸ್ಥಗಿತಗೊಳಿಸಲಾಗಿದೆ. ಗೋಪಾಲಸ್ವಾಮಿ ಬೆನ್ನ ಮೇಲಿದ್ದ ಮರದ ಅಂಬಾರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೆಳಗೆ ಇಳಿಸಿದರು. ನಂತರ ಬೆಳ್ಳಿ ರಥದಲ್ಲಿ ಚಾಮುಂಡೇಶ್ವರಿ ವಿಗ್ರಹ ಇಟ್ಟು ಮೆರವಣಿಗೆ ನಡೆಸಿದರು.

ಇದಕ್ಕೂ ಮುನ್ನ ಶ್ರೀರಂಗಪಟ್ಟಣ ದಸರಾಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ನಾಡದೇವತೆ ಚಾಮುಂಡೇಶ್ವರಿ ವಿಗ್ರಹಕ್ಕೆ ಆದಿ ಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಪುಷ್ಟಾರ್ಚನೆ ಮಾಡುವ ಮೂಲಕ ಶ್ರೀರಂಗಪಟ್ಟಣ ದಸರಾ ಮೆರವಣಿಗೆಯನ್ನು ಉದ್ಘಾಟನೆ ಮಾಡಿದರು.
ಈ ವೇಳೆ ಚುಂಚಶ್ರೀ ಜೊತೆಗೆ ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ, ಸ್ಥಳೀಯ ಶಾಸಕ ರವೀಂದ್ರ ಶ್ರೀಕಂಠಯ್ಯ ಸೇರಿದಂತೆ ಅಧಿಕಾರಿಗಳು ಪುಷ್ಟಾರ್ಚನೆ ಮಾಡಿದರು. ಶುಭ ಕುಂಭ ಲಗ್ನದಲ್ಲಿ ಜಂಬೂ ಸವಾರಿ ಆರಂಭವಾಗಿತ್ತು. ಬನ್ನಿ ಮರಕ್ಕೆ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ಸಹ ನಡೆಸಲಾಗಿತ್ತು.
ಈ ಎಲ್ಲಾ ಪೂಜಾ ಕೈಂಕರ್ಯ ಮುಗಿದ ಬಳಿಕ ಜಂಬೂಸವಾರಿ ಆರಂಭಿಸಲಾಗಿತ್ತು. ನಾಡದೇವಿ ಚಾಮುಂಡೇಶ್ವರಿ ಹೊತ್ತ ಗೋಪಾಲಸ್ವಾಮಿ ಆನೆ ನಿಧಾನವಾಗಿ ಹೆಜ್ಜೆ ಹಾಕುತ್ತಾ ಮೆರವಣಿಗೆಯಲ್ಲಿ ಸಾಗುತ್ತಿದ್ದ. ಅಂಬಾರಿ ಹೊತ್ತು ಸಾಗುತ್ತಿದ್ದ ಗೋಪಾಲಸ್ವಾಮಿಗೆ ಕಾವೇರಿ ಆನೆ ಸಾಥ್ ನೀಡಿತ್ತು.
ಮೆರವಣಿಗೆಯಲ್ಲಿ ಭಾಗವಹಿಸಿದ್ದ 25ಕ್ಕೂ ಹೆಚ್ಚು ಕಲಾತಂಡಗಳು ಶ್ರೀರಂಗಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಶ್ರೀರಂಗನಾಥ ದೇವಾಲಯದ ಬಳಿ ಜಂಬೂಸವಾರಿ ಸಂಪನ್ನವಾಗಬೇಕಿತ್ತು. ಆದರೆ ದಾರಿ ಮಧ್ಯೆ ಆನೆಗಳು ಬೆದರಿದ ಕಾರಣ ಅರ್ಧದಲ್ಲೇ ನಿಲ್ಲಿಸಬೇಕಾಯಿತು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications