Get Updates
Get notified of breaking news, exclusive insights, and must-see stories!

ದರೋಡೆಗೆ ಹೆದ್ದಾರಿಯೇ ಇವರ ಸ್ಪಾಟ್! ಕೊನೆಗೂ ಸಿಕ್ಕಿಬಿದ್ದರು ಖದೀಮರು

ಮೈಸೂರು, ಫೆಬ್ರವರಿ 08: ಕಳೆದ ವಾರವಷ್ಟೇ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ದರೋಡೆ ನಡೆಸಿದ್ದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿರುವ ಶ್ರೀರಂಗಪಟ್ಟಣ ಪೊಲೀಸರು 9 ಮಂದಿ ಖತರ್ನಾಕ್ ದರೋಡೆಕೋರರನ್ನ ಬಂಧಿಸಿದ್ದಾರೆ.

ಕಳೆದ ಕೆಲವು ವಾರಗಳಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾತ್ರಿ ಹೊತ್ತಿನಲ್ಲಿ ಪದೇ ಪದೇ ದರೋಡೆ ಪ್ರಕರಣಗಳು ನಡೆದಿದ್ದವು. ಹಿಂದಿನ ವಾರವಷ್ಟೆ ಕೊಡಗು ಮೂಲದ ವ್ಯಕ್ತಿಯೊಬ್ಬರಿಂದ ಕಾರು, ಮೊಬೈಲ್‌ ಹಾಗೂ ಹಣ ದೋಚಲಾಗಿತ್ತು. ಅದೇ ದಿನ ವ್ಯಕ್ತಿಯೊಬ್ಬರಿಂದ ಬೈಕ್, ಮೊಬೈಲ್‌ ಹಾಗೂ ಹಣ ದೋಚಲಾಗಿತ್ತು. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ದರೋಡೆ ನಡೆಸಿದ್ದುದಾಗಿ ವರದಿ ಆಗಿತ್ತು.

ಪ್ರಕರಣದ ಬೆನ್ನು ಬಿದ್ದ ಶ್ರೀರಂಗಪಟ್ಟಣ ಪೊಲೀಸರು ಉಪೇಂದ್ರ, ಕಿರಣ್, ಪ್ರತಾಪ್, ಮಾದಪ್ಪ, ಶೇಖರ, ಅನೂಜ್, ಕಿರಣ್, ರವಿಕುಮಾರ, ಶಿವಕುಮಾರ ಎಂಬುವವರನ್ನು ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಬಂಧಿತರೆಲ್ಲರೂ ಮೈಸೂರು ಮೂಲದವರಾಗಿದ್ದು, ರಾತ್ರಿ ವೇಳೆ ಹೆದ್ದಾರಿಗಳಲ್ಲಿ ವಾಹನಗಳನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

Srirangapattana Police Arrested 9 Who Robbed In Bengaluru Mysuru Highway

ಸದ್ಯ ಬಂಧಿತರಿಂದ 11 ಮೊಬೈಲ್​ಗಳು, ₹ 1400 ನಗದು, ಕೃತ್ಯಕ್ಕೆ ಬಳಸಿದ್ದ ಮಾರುತಿ ಓಮಿನಿ ಕಾರು, 2 ಸ್ಕೂಟರ್ ಹಾಗೂ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+