ಅರಮನೆ ನಗರಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಹವಾ!
ಇಂದಿನಿಂದ ಏಪ್ರಿಲ್ 12 ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅರಮನೆ ನಗರಿ ಮೈಸೂರಿನ ವಿದ್ಯಾರ್ಥಿಗಳು ಉತ್ಸಾಹದಿಂದ ಸಜ್ಜಾದರು.
ಮೈಸೂರು, ಮಾರ್ಚ್ 30: ಹಲವರು ಕಣ್ಮುಚ್ಚಿ ಕುಳಿತು ಓದಿರುವುದನ್ನು ನೆನಪು ಮಾಡಿಕೊಳ್ಳುತ್ತಿದ್ದರೆ, ಇನ್ಕೆಲವರು ಪ್ರಶ್ನೆ ಹೀಗೆ ಬರಬಹುದಾ ಎಂದು ತಮ್ಮ ಸಹಪಾಠಿಗಳಲ್ಲಿ ಚರ್ಚಿಸುತ್ತಿದ್ದರು. ಹಲವರು ನಮ್ಮ ನೋಂದಣಿ ಸಂಖ್ಯೆ ಯಾವ ಕೊಠಡಿಯಲ್ಲಿದೆ ಎಂಬುದನ್ನು ಖಚಿತ ಪಡಿಸಿಕೊಳ್ಳುತ್ತಿದ್ದರು... ಇಂದು ಜೀವನದ ಪ್ರಮುಖ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಮೈಸೂರಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕಂಡುಬಂದಿದ್ದು ಹೀಗೆ. ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ನಡೆಯಲಿರುವ ಪರೀಕ್ಷೆ ಸುಸೂತ್ರವಾಗಬೇಕೆಂದು ಈಗಾಗಲೇ ಸರ್ಕಾರ ಹಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದೆ.
ಮೈಸೂರು ಜಿಲ್ಲೆಯಲ್ಲಿ 19,831 ಹುಡುಗರು ಮತ್ತು 19,492 ಹುಡುಗಿಯರು ಪರೀಕ್ಷೆ ಬರೆಯುತ್ತಿದ್ದು, ಒಟ್ಟು 39,323 ವಿದ್ಯಾರ್ಥಿಗಳ ಭವಿಷ್ಯ 134 ಪರೀಕ್ಷಾ ಕೇಂದ್ರಗಳಲ್ಲಿ ಭದ್ರವಾಗಲಿದೆ. ಪರೀಕ್ಷೆಯಲ್ಲಿ ಯಾವುದೇ ನಕಲು ನಡೆಯಬಾರದು ಎನ್ನುವ ಉದ್ದೇಶದಿಂದ ಜಾಗೃತ ದಳವನ್ನು ನೇಮಿಸಲಾಗಿದೆ.[ಸದ್ದು. ನಮ್ಮ ಹುಡುಗರು, ಹುಡುಗಿಯರು ಪರೀಕ್ಷೆ ಬರೀತಾಯಿದಾರೆ]

ಪರೀಕ್ಷೆ ಬೆಳಿಗ್ಗೆ 9.30ರಿಂದ ಆರಂಭವಾಗಿದ್ದು, 9.15 ರಿಂದ 9.30ರೊಳಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವುದು ಕಡ್ಡಾಯವೆಂದು ಈ ಮೊದಲೇ ತಿಳಿಸಲಾಗಿದೆ. ಪರೀಕ್ಷಾ ಕೊಠಡಿಯೊಳಗೆ ವಿದ್ಯಾರ್ಥಿಗಳು ತಮ್ಮ ಗುರುತಿನ ಪತ್ರವನ್ನಲ್ಲದೆ ಇನ್ಯಾವುದೇ ದಾಖಲೆಯನ್ನು ತೆಗೆದುಕೊಂಡು ಹೋಗುವಂತಿಲ್ಲ. ಅಷ್ಟೇ ಅಲ್ಲದೇ ಮೇಲ್ವಿಚಾರಕರು ಕೂಡಾ ಸಂಚಾರಿ ದೂರವಾಣಿಯನ್ನು ಕೊಠಡಿಯೊಳಗೆ ಕೊಂಡೊಯ್ಯಲು ಅನುಮತಿ ನಿರಾಕರಿಸಲಾಗಿದೆ.[ಪರೀಕ್ಷೆಗೆ ತೆರಳುವ ಮುನ್ನ ಈ 10 ಅಂಶಗಳನ್ನು ಮರೆಯಲೇಬೇಡಿ]

ಪರೀಕ್ಷೆಯಲ್ಲಿ ಯಾವುದೇ ನಕಲು ನಡೆಯದಂತೆ ತಡೆಯಲು ಪರೀಕ್ಷಾ ಕೇಂದ್ರದ ನೂರು ಮೀಟರ್ ಅಂತರದಲ್ಲಿ ಇರುವ ಜೆರಾಕ್ಸ್ ಅಂಗಡಿಗಳನ್ನುತೆರೆಯದಂತೆ ಸೂಚನೆ ಹೊರಡಿಸಲಾಗಿದೆ. ಪರೀಕ್ಷೆ ಪ್ರಯುಕ್ತ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications