SSLC Result: ಅವಳಿ ಸಹೋದರಿಯರಿಗೆ ಬಂತು ಒಂದೇ ಅಂಕ!
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೈಸೂರು ನಗರದ ಮರಿಮಲ್ಲಪ್ಪ ಪ್ರೌಢಶಾಲೆಯ ಅವಳಿ ಸಹೋದರಿಯರಾದ ಅಂಜಲಿ ವಿ.ಶಾಸಿ ಹಾಗೂ ಅದಿತಿ ವಿ.ಶಾಸಿ ಇಬ್ಬರೂ 619 ಅಂಕ ಪಡೆದು ಗಮನ ಸೆಳೆದಿದ್ದಾರೆ. ಈ ಅವಳಿ ಸಹೋದರಿಯರು ನಗರದ ಅಗ್ರಹಾರದ ವೆಂಕಟರಮಣ, ವಿನಯಾ ದಂಪತಿ ಪುತ್ರಿಯರಾಗಿದ್ದಾರೆ.
ಅದಿತಿ ವಿ.ಶಾಸಿ ಕನ್ನಡದಲ್ಲಿ 125, ಇಂಗ್ಲಿಷ್ನಲ್ಲಿ 99, ಹಿಂದಿಯಲ್ಲಿ 99, ಗಣಿತದಲ್ಲಿ 98, ವಿಜ್ಞಾನದಲ್ಲಿ 100, ಸಮಾಜ ವಿಜ್ಞಾನದಲ್ಲಿ 98 ಅಂಕಗಳನ್ನು ಪಡೆದುಕೊಂಡಿದ್ದಾರೆ. ಅಂಜಲಿ ವಿ. ಶಾಸಿ ಕನ್ನಡದಲ್ಲಿ 125, ಇಂಗ್ಲಿಷ್ನಲ್ಲಿ 100, ಹಿಂದಿಯಲ್ಲಿ 100, ಗಣಿತದಲ್ಲಿ 98, ವಿಜ್ಞಾನದಲ್ಲಿ 98, ಸಮಾಜ ವಿಜ್ಞಾನದಲ್ಲಿ 98 ಅಂಕಗಳನ್ನು ಪಡೆದುಕೊಂಡಿದ್ದಾರೆ. ಇಬ್ಬರಿಗೂ ಸಮಾನ ಅಂಕ ಬಂದಿರುವುದಕ್ಕೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

ಕಿರು ಪರೀಕ್ಷೆಗಳಲ್ಲೂ ಒಂದೇ ಅಂಕ
"ಎಷ್ಟೋ ಸಲ ನಾವು ತರಗತಿಯಲ್ಲಿ ನಡೆಯುತ್ತಿದ್ದ ಕಿರು ಪರೀಕ್ಷೆಗಳಲ್ಲೂ ಸಮಾನ ಅಂಕ ಪಡೆಯುತ್ತಿದ್ದೆವು. ಆದರೆ, ಮುಖ್ಯ ಪರೀಕ್ಷೆಯಲ್ಲೂ ಸಮಾನ ಅಂಕ ಬಂದಿರುವುದು ಅಚ್ಚರಿ ಮೂಡಿಸಿದೆ. ಮನೆಯಲ್ಲಿ ಕಲಿಕೆಗೆ ಉತ್ತಮ ವಾತಾವರಣ ಇತ್ತು. ಪೋಷಕರು ಹೆಚ್ಚಿನ ಸಹಕಾರ ನೀಡಿದರು. ಶಾಲೆಯಲ್ಲಿ ಎಲ್ಲಾ ಶಿಕ್ಷಕರು ಉತ್ತಮ ಮಾರ್ಗದರ್ಶನ ಮಾಡಿದರು. ಎಂದಿಗೂ ಸಮಾನ ಅಂಕ ಬರುತ್ತದೆ ಎಂಬ ನಿರೀಕ್ಷೆ ಇರಲಿಲ್ಲ" ಎಂದು ಸಹೋದರಿಯರು ಸಂತಸ ವ್ಯಕ್ತಪಡಿಸಿದ್ದಾರೆ.
ಸೆಕ್ಯೂರಿಟಿ ಗಾರ್ಡ್ ಮಗಳಿಗೆ 623 ಅಂಕ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೈಸೂರಿನ ಭಾರತೀಯ ವಿದ್ಯಾಭವನ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಜಾಹ್ನವಿ 623 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಜಾಹ್ನವಿ ತಂದೆ ಶಿವಕುಮಾರ್ ನಗರದ ಜೆಎಸ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್ ಕಾರ್ಯ ನಿರ್ವಹಿಸುತ್ತಿದ್ದರೆ, ತಾಯಿ ಪುಷ್ಪಲತಾ ಗೃಹಿಣಿ. ಡಿಪ್ಲೊಮಾ ಓದಿದ್ದ ಶಿವಕುಮಾರ್ ಗುಲ್ಕನ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಕಾರ್ಖಾನೆ ಮುಚ್ಚಿದ ಪರಿಣಾಮ ಕಳೆದ 5 ವರ್ಷದಿಂದ ಸೆಕ್ಯೂರಿಟಿ ಗಾರ್ಡ್ ಆಗಿದ್ದಾರೆ.
ಎಸ್ಸೆಸ್ಸೆಲಿ ಪರೀಕ್ಷೆಯಲ್ಲಿ ವಿಜಯನಗರದ ಸದ್ವಿದ್ಯಾ ಶಾಲೆಯ ಡಿ.ಎಸ್.ಧನ್ವಿ 623 ಅಂಕ ಪಡೆದಿದ್ದಾರೆ. ಧನ್ವಿ ತಂದೆ ಡಿ.ಪಿ.ಸುಧನ್ವ ಅವರು ಸದ್ವಿದ್ಯಾ ಕಾಲೇಜಿನಲ್ಲಿ ಹಾಗೂ ತಾಯಿ ಕುಸುಮಾ ಪ್ರಮತಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಭವಿಷ್ಯದಲ್ಲಿ ಡಿ.ಎಸ್.ಧನ್ವಿಗೆ ಏರೋನಾಟಿಕಲ್ ಎಂಜಿನಿಯರ್ ಆಗುವ ಗುರಿ ಇದೆ.
-
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications