"ಏ.29 ರಿಂದ ಚಂದನ ವಾಹಿನಿಯಲ್ಲಿ ಎಸ್ಸೆಸ್ಸೆಲ್ಸಿ ಪುನರ್ಮನನ ತರಗತಿ'
ಮೈಸೂರು, ಏಪ್ರಿಲ್ 22: ನಾನು ಈಗಾಗಲೇ ಪ್ರಕಟಿಸಿದಂತೆ ಕೊರೊನಾ ವೈರಸ್ ನಿಂದ ಲಾಕ್ ಡೌನ್ ಆಗಿದ್ದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ಮಕ್ಕಳಿಗೆ ದೂರದರ್ಶನದ ಚಂದನ ವಾಹಿನಿಯಲ್ಲಿ ಪುನರ್ಮನನ ತರಗತಿಗಳು ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.
ಈ ತರಗತಿಗಳು ಏ.29 ರಿಂದ ಪ್ರತಿ ದಿನ ಮಧ್ಯಾಹ್ನ 3 ರಿಂದ 4.30 ರವರೆಗೆ ನಡೆಯಲಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
""ಮೊದಲ 16 ದಿನ ಪ್ರತಿ 45 ನಿಮಿಷಗಳ ಎರಡು ಅವಧಿಗಳಲ್ಲಿ ಗಣಿತ ಹಾಗೂ ವಿಜ್ಞಾನ ವಿಷಯಗಳ ಬೋಧನಾ ತರಗತಿಗಳು ನಡೆಯಲಿದ್ದು, 17ನೇ ದಿನ ಈ ಎರಡೂ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡಲಿದ್ದಾರೆ.''

18 ನೇ ದಿನದಿಂದ ಸಮಾಜ ವಿಜ್ಞಾನದ ತರಗತಿಗಳು 6 ದಿನಗಳ ಅವಧಿಗೆ ನಡೆಯಲಿದ್ದು, ನಂತರದ ದಿನಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷಾ ವಿಷಯಗಳ ಬೋಧನೆಯನ್ನೂ ಸಹ ಮಾಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
""ಪ್ರತಿ ವಿಷಯ ಬೋಧನೆಯ ಕೊನೆಯಲ್ಲಿ ವಿಶೇಷವಾಗಿ ತಯಾರಿಸಲಾಗಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ. ನನ್ನೆಲ್ಲ ವಿದ್ಯಾರ್ಥಿ ಮಿತ್ರರು ಈ ಮಹತ್ವದ ತರಗತಿಗಳನ್ನು ತಪ್ಪದೇ ವೀಕ್ಷಿಸಿ ಮುಂಬರುವ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸುತ್ತೀರೆಂಬ ವಿಶ್ವಾಸ ನನ್ನದು'' ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟಿಸಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications