ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಮೃಗಾಲಯಕ್ಕೆ ನೆರವು ಕೇಳಿ ಇನ್ಫೋಸಿಸ್ ಸುಧಾಮೂರ್ತಿಗೆ ಪತ್ರ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 02: ಕೊರೊನಾ ಲಾಕ್ ಡೌನ್ ನಿಂದಾಗಿ ಮೈಸೂರು ಮೃಗಾಲಯವು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೆಲವೇ ದಿನಗಳ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ‌.ಸೋಮಶೇಖರ್, ಮೃಗಾಲಯಕ್ಕೆ ನೆರವು ನೀಡುವಂತೆ ಮನವಿ ಮಾಡಿದ್ದರು.

Recommended Video

ಪೊಲೀಸನ್ನು ಕಾರ್ ಬಾನೆಟ್ ಮೇಲೆ ಕೂರಿಸಿಕೊಂಡು ಹೋಗಿದ್ದಕ್ಕೆ ವ್ಯಕ್ತಿ ಅರೆಸ್ಟ್ | Oneindia Kannada

ಇದೀಗ ಮೃಗಾಲಯದ ಸಹಾಯಕ್ಕೆ ನಿಲ್ಲಲು ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ ಡಾ‌.ಸುಧಾಮೂರ್ತಿ ಅವರಿಗೆ ಮನವಿ ಮಾಡಿದ್ದಾರೆ. ಸುಧಾ ಮೂರ್ತಿ ಅವರಿಗೆ ಪತ್ರ ಬರೆದಿರುವ ಜಿಲ್ಲಾ ಉಸ್ತುವಾರಿ ಸಚಿವರು, "ದೇಶದ ಆರ್ಥಿಕತೆಯಲ್ಲಿ ಇನ್ಫೋಸಿಸ್ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಅದೇ ರೀತಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮೈಸೂರು ಮೃಗಾಲಯಕ್ಕೆ ಸಹಾಯ ನೀಡಿ" ಎಂದು ಮನವಿ ಮಾಡಿದ್ದಾರೆ.

ST Somashekhar Written Letter To Infosys Sudha Murthy Asking Help To Mysuru Zoo

ಮೃಗಾಲಯದ ಪ್ರಾಣಿ, ಪಕ್ಷಿಗಳಿಗೆ ಆಹಾರ ಮತ್ತು ಇನ್ನಿತರೆ ಸೌಲಭ್ಯಗಳಿಗೆ ತೊಂದರೆಯಾಗಿದೆ. ಹೀಗಾಗಿ ಮೃಗಾಲಯಕ್ಕೆ ಆರ್ಥಿಕ ಸಹಾಯ ನೀಡಿ ನೆರವಾಗಿ. ಭಗವಂತನ ಕೃಪೆಯಿಂದ ಮತ್ತಷ್ಟು ಹೆಚ್ಚಿನ ಸೇವೆ ಸಲ್ಲಿಸಲು ನಿಮಗೆ ಆಯಸ್ಸು, ಆರೋಗ್ಯವನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ತಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ಪತ್ರದಲ್ಲಿ ಸೋಮಶೇಖರ್ ತಿಳಿಸಿದ್ದಾರೆ.

English summary
District incharge minister ST Somashekhar wrote letter to infosys sudha murthy asking help to Mysuru Zoo in this lockdown time,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X