ಜಂಬೂ ಸವಾರಿಗೆ ಸಜ್ಜಾಗಿದೆ ಮೈಸೂರು
ಮೈಸೂರು, ಅ.13 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯು ವಿಜಯ ದಶಮಿಯ ದಿನವಾದ ಸೋಮವಾರ ನಡೆಯಲಿದೆ. ಇದಕ್ಕಾಗಿ ಸಾಂಸ್ಕೃತಿಕ ನಗರಿ ಮೈಸೂರು ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಸೋಮವಾರ ಮಧ್ಯಾಹ್ನ 1.12 ರಿಂದ 1.40ರೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿ ಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೂಜೆ ಸಲ್ಲಿಸಲಿದ್ದಾರೆ. ಮೈಸೂರಿನವರೇ ಆದ ಸಿದ್ದರಾಮಯ್ಯ ಅವರಿಗೆ ಜಂಬೂ ಸವಾರಿಗೆ ಚಾಲನೆ ನೀಡುವ ಅವಕಾಶ ಸಿಕ್ಕಿದೆ.

ಅರಮನೆಯ ಒಳಾವರಣದಲ್ಲಿ ನಿರ್ಮಿಸುವ ವಿಶೇಷ ವೇದಿಕೆಯಲ್ಲಿ ನಿಂತು ಸಿಎಂ ಗಜರಾಜ ಅರ್ಜುನ ಹೊರಲಿರುವ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿರುವ ಶ್ರೀ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಸಚಿವರಾದ ವಿ. ಶ್ರೀನಿವಾಸಪ್ರಸಾದ್, ಡಾ.ಎಚ್.ಸಿ. ಮಹದೇವಪ್ಪ ಮುಂತಾದವರು ಈ ಸಂರ್ಭದಲ್ಲಿ ಉಪಸ್ಥಿತರಿರುವರು. ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಅಧಿಕೃತ ಚಾಲನೆ ದೊರೆಯಲಿದೆ.
ಕರ್ನಾಟಕದಲ್ಲಿ ಈ ವರ್ಷ ಉತ್ತಮ ಮಳೆ ಬೆಳೆಯಾಗಿದ್ದು, ಜನರು ಸಂತಸಗೊಂಡಿದ್ದಾರೆ. ಆದ್ದರಿಂದ ಮೈಸೂರು ದಸರಾ ಮತ್ತಷ್ಟು ಸಂಭ್ರಮದಿಂದ ಕೂಡಿದೆ. ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರು ಸೋಮವಾರದ ಜಂಬೂ ಸವಾರಿಗೆ ಸಾಕ್ಷಿಯಾಗಲಿದ್ದಾರೆ.
ಜಂಬೂ ಸವಾರಿ ಸಾಗುವ ಮಾರ್ಗವನ್ನು ಸಿಂಗರಿಸುವ ಅಂತಿಮ ಹಂತದ ಕೆಲಸಗಳು ಭಾನುವಾರ ಭರದಿಂದ ಸಾಗಿದೆ. ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧ ಚಿತ್ರಗಳನ್ನು ಸಜ್ಜುಗೊಳಿಸುವ ಕಾರ್ಯ ಮುಕ್ತಾಯದ ಹಂತಕ್ಕೆ ಬಂದಿದೆ.
ಸೋಮವಾರ ಸಂಜೆ ನಡೆಯಲಿರುವ ಪಂಜಿನ ಕವಾಯಿತಿನಲ್ಲಿ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಗೌರವ ವಂದನೆ ಸ್ವೀಕರಿಸಲಿದ್ದಾರೆ. ಈ ಮೂಲಕ ಹತ್ತು ದಿನಗಳ ದಸರಾ ಉತ್ಸವಕ್ಕೆ ವಿದ್ಯುಕ್ತವಾಗಿ ತೆರೆ ಬೀಳಲಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications