ನಾಯಿ ಕದ್ದು ಒಎಲ್ ಎಕ್ಸ್ ನಲ್ಲಿ ಮಾರಾಟಕ್ಕಿಟ್ಟ ಭೂಪ
ಮೈಸೂರು, ಆಗಸ್ಟ್ 26 :ಮನೆಯ ಮುಂದೆ ಕಟ್ಟಿ ಹಾಕಿದ್ದ ನಾಯಿಯೊಂದನ್ನು ಖದೀಮನೊಬ್ಬ ಕಳವು ಮಾಡಿದ್ದಲ್ಲದೆ, ನಾಯಿ ಮಾರಾಟಕ್ಕಿದೆ ಎಂದು ಒಎಲ್ ಎಕ್ಸ್ ಹಾಗೂ ಪತ್ರಿಕೆಯಲ್ಲಿ ಫೋಟೋ ಸಮೇತ ಜಾಹೀರಾತು ನೀಡಿದ ಘಟನೆ ನಗರದಲ್ಲಿ ನಡೆದಿದೆ.
ನಗರದ ಜಯಲಕ್ಷ್ಮಿಪುರಂ ನಿವಾಸಿಯೊಬ್ಬರ ಮನೆಯಿಂದ ಗೋಲ್ಡನ್ ರಿಟ್ರೀವರ್ ಜಾತಿಯ ನಾಯಿ ಕಳವಾಗಿತ್ತು. ಅನಿಲ್ ಕುಮಾರ್ ಜೆ ಎಂಬುವರು ನಾಯಿಯನ್ನು ಸಾಕಿದ್ದರು. ಆಗಸ್ಟ್ 16ರಂದು ಬೆಳಗ್ಗೆ ಮನೆಯ ಕಾಂಪೌಂಡ್ ಒಳಗಿದ್ದ ನಾಯಿಯನ್ನು ಯಾರೋ ಕಳವು ಮಾಡಿಕೊಂಡು ಹೋಗಿದ್ದರು.

ಆಶ್ಚರ್ಯ ಎಂಬಂತೆ ಮಾರನೇ ಬೆಳಗ್ಗೆ ಅವರ ನಾಯಿಯ ಫೋಟೋ ಒಎಲ್ ಎಕ್ಸ್ ಜಾಲತಾಣದಲ್ಲಿ ಅನಿಲ್ ಅವರಿಗೆ ಕಂಡುಬಂದಿದೆ.
ಇದೇ ವೇಳೆ ನಾಯಿಯು ಮಾರಾಟಕ್ಕಿದೆ ಎಂದು ಸ್ಥಳೀಯ ಪತ್ರಿಕೆಯಲ್ಲಿಯೂ ಜಾಹೀರಾತು ಪ್ರಕಟವಾಗಿದೆ. ಜಾಹೀರಾತು ನೀಡಿದವರ ಹೆಸರು ಎಸ್.ಮಂಜುನಾಥ್, ಹಲೀಂ ನಗರ ಎಂಬುದು ತಿಳಿದು ಬಂದಿದೆ. ಈ ಸಂಬಂಧ ಅನಿಲ್ ಅವರು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications