ಮುಷ್ಕರ; ಪೊಲೀಸ್ ಭದ್ರತೆಯಲ್ಲಿ ಸಾಗುತ್ತಿದ್ದ ಬಸ್ಗೆ ಕಲ್ಲು!
ಮೈಸೂರು, ಡಿಸೆಂಬರ್ 14: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಸಾರಿಗೆ ನಿಗಮಗಳ ನೌಕರರು 4 ದಿನದಿಂದ ನಡೆಸುತ್ತಿದ್ದ ಮುಷ್ಕರ ಅಂತ್ಯಗೊಂಡಿದೆ. ಸೋಮವಾರ ಮುಷ್ಕರದ ನಡೆಯವೆಯೇ ಕೆಲವು ಬಸ್ಗಳು ಸಂಚಾರ ನಡೆಸಿವೆ.
ಸೋಮವಾರ ಮೈಸೂರಿನಲ್ಲಿ ಪೊಲೀಸ್ ಭದ್ರತೆಯೊಂದಿಗೆ ಸಂಚಾರ ನಡೆಸುತ್ತಿದ್ದ ಬಸ್ಗೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ನಡೆದಿದೆ. ಬಸ್ಸಿನಲ್ಲಿ 26 ಮಂದಿ ಪ್ರಯಾಣಿಕರು ಹಾಗೂ 6 ಸಾರಿಗೆ ಸಿಬ್ಬಂದಿ ಇದ್ದರು.
ದಾವಣಗೆರೆ; ಮುಷ್ಕರ, ರಸ್ತೆಗಿಳಿದಿದ್ದು 6 ಸರ್ಕಾರಿ ಬಸ್ ಮಾತ್ರ!
ಪಿರಿಯಾಪಟ್ಟಣ ಸಾರಿಗೆ ಘಟಕದಿಂದ ಬೆಳಗ್ಗೆ ಒಂದು ಬಸ್ ಮಾತ್ರ ಸಂಚಾರ ಆರಂಭಿಸಿತ್ತು. ಸಾರಿಗೆ ಅಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿ ಭದ್ರತೆಯೊಂದಿಗೆ ಈ ಬಸ್ ಪಿರಿಯಾಪಟ್ಟಣದಿಂದ ಬೆಟ್ಟದಪುರಕ್ಕೆ ಸಂಚಾರ ನಡೆಸಿತ್ತು.
ಸಾರಿಗೆ ಮುಷ್ಕರ: ಕೋಡಿಹಳ್ಳಿ ಚಂದ್ರಶೇಖರ್ ಹಿಂದಿರುವ ಆ ಕಾಣದ 'ಕೈ'!
ಬೆಟ್ಟದಪುರದಿಂದ ಪಿರಿಯಾಪಟ್ಟಣಕ್ಕೆ ವಾಪಸ್ ಬರುವ ಸಂದರ್ಭದಲ್ಲಿ ಸೀಗೂರು ಗೇಟ್ ಬಳಿ ಹಿಂಭಾಗದ ಗಾಜಿಗೆ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ. ಇದರಿಂದಾಗಿ ಬಸ್ಸಿನ ಗಾಜು ಜಖಂಗೊಂಡಿದೆ.
ಸಾರಿಗೆ ಮುಷ್ಕರ ವಾಪಸ್: ಕೆಎಸ್ಸಾರ್ಟಿಸಿ ಸಂಚಾರ ಆರಂಭ
ಬಸ್ಸಿನಲ್ಲಿದ್ದ 26 ಮಂದಿ ಪ್ರಯಾಣಿಕರನ್ನು ತಕ್ಷಣ ಕೆಳಗಿಳಿಸಲಾಗಿದೆ. ಬಸ್ನಲ್ಲಿದ್ದ ಮೈಸೂರು ವಿಭಾಗೀಯ ಕಾರ್ಮಿಕ ನಿರೀಕ್ಷಕ ಸೋಮಶೇಖರ್, ಘಟಕ ವ್ಯವಸ್ಥಾಪಕ ದರ್ಶನ್ ಹಾಗೂ ಆರಕ್ಷಕ ಸಿಬ್ಬಂದಿ ಬಸ್ಸನ್ನು ಬೆಟ್ಟದಪುರ ಠಾಣೆಗೆ ತೆಗೆದುಕೊಂಡು ಹೋದರು.
4 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರ ಸೋಮವಾರ ಮಧ್ಯಾಹ್ನ ಅಧಿಕೃತವಾಗಿ ಅಂತ್ಯಗೊಂಡಿದೆ. ಹೋರಾಟದ ನೇತೃತ್ವ ವಹಿಸಿಕೊಂಡಿದ್ದ ಕೋಡಿಹಳ್ಳಿ ಚಂದ್ರಶೇಖರ್ ಈ ಕುರಿತು ಘೋಷಣೆ ಮಾಡಿದರು.
ನೌಕರರ ಕೆಲವು ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ 3 ತಿಂಗಳ ಗಡುವು ಕೊಡಲಾಗಿದೆ. ಬೇಡಿಕೆ ಈಡೇರದಿದ್ದರೆ ಪುನಃ ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿದೆ.
ಮುಷ್ಕರ ಅಂತ್ಯವಾದ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಸ್ಗಳ ಸಂಚಾರ ಆರಂಭವಾಗಿದೆ. ನಾಲ್ಕು ದಿನಗಳ ಕಾಲ ಬಸ್ಗಳ ಸಂಚಾರ ಇಲ್ಲದೆ ಜನರು ಪರದಾಟ ನಡೆಸಿದ್ದರು.