ಮೈಸೂರಿನ ಹೆಬ್ಬಲಗುಪ್ಪೆ ಗ್ರಾಮದ ಜಾತ್ರೆಯಲ್ಲಿ ನಡೆಯುತ್ತೆ ನಾಯಿ-ನರಿ ಕಾಳಗ
ಮೈಸೂರು, ಜನವರಿ 31: ಕೋಳಿ ಕಾಳಗ, ಟಗರು ಕಾಳಗ, ಹೋರಿ ಕಾಳಗ ನಡೆಯುವುದನ್ನು ಕೇಳಿದ್ದೇವೆ, ಕಂಡಿದ್ದೇವೆ. ಆದರೆ ಮೈಸೂರು ಜಿಲ್ಲೆಯ ಈ ಜಾತ್ರೆಯಲ್ಲಿ ನಾಯಿ- ನರಿಯ ನಡುವೆ ಕಾಳಗ ನಡೆಸಲಾಗುತ್ತದೆ.
ಭಾರತದಲ್ಲಿ ಸಂಪ್ರದಾಯ, ಆಚರಣೆಗಳಿಗೇನೂ ಕಮ್ಮಿ ಇಲ್ಲ. ಚಿತ್ರ ವಿಚಿತ್ರ ಆಚರಣೆಗಳಿಗೆ ಹೆಸರು ವಾಸಿಯಾಗಿರುವ ನಮ್ಮ ದೇಶದಲ್ಲಿ ಈಗ ಮತ್ತೂ ಒಂದು ವಿಚಿತ್ರ ಆಚರಣೆ ಬೆಳಕಿಗೆ ಬಂದಿದೆ.
ಈ ಆಚರಣೆ ನಡೆದಿರುವುದು ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ. ಇಲ್ಲಿನ ಹುಲಿಕೊರೆ ವೇಣುಗೋಪಾಲಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ದೇವರಿಗೆ ಆರತಿ ಮುಗಿದ ನಂತರ ಗ್ರಾಮಸ್ಥರು ಮೊದಲೇ ಕಾಡಿನಿಂದ ಹಿಡಿದು ತಂದಿದ್ದ ನರಿಯೊಂದನ್ನು ಸರಪಳಿಯಲ್ಲಿ ಕಟ್ಟಿ ನಾಯಿಯೊಂದಿಗೆ ಸೆಣಸಾಡಲು ಬಿಡುತ್ತಾರೆ. ಈ ಕಾಳಗದ ನಂತರ ಗಾಯಗೊಂಡ ನರಿಯನ್ನು ಪುನಃ ಅರಣ್ಯಕ್ಕೆ ಬಿಡುತ್ತಾರೆ.

ಈ ನಾಯಿ ನರಿ ಕಾಳಗವನ್ನು ಪ್ರತಿ ವರ್ಷವೂ ಪೂಜಾ ದಿನದಂದು ನಡೆಸಿಕೊಂಡು ಬರಲಾಗುತ್ತಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಈ ನಾಯಿ-ನರಿ ಕಾಳಗದಿಂದ ಗ್ರಾಮಕ್ಕೆ ಒಳ್ಳೆಯದಾಗುತ್ತದೆ ಎಂದು ನಂಬಿದ್ದಾರೆ ಇಲ್ಲಿನ ಗ್ರಾಮಸ್ಥರು.
ಆದರೆ ಈ ವಿಚಿತ್ರ ಆಚರಣೆಯಿಂದಾಗಿ ಮೂಕ ಪ್ರಾಣಿಗಳು ಹಿಂಸೆ ಅನುಭವಿಸಬೇಕಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ವನ್ಯ ಜೀವಿ ವಿಭಾಗದ ಡಿಸಿಎಫ್ ಏಡುಕೊಂಡಲು, "ವನ್ಯ ಜೀವಿಗಳನ್ನು ಸೆರೆ ಹಿಡಿಯುವುದು ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಅಪರಾಧ. ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು'' ಎಂದು ಹೇಳಿದ್ದಾರೆ.
ರಾಜ್ಯದ ಕೆಲವೆಡೆ ಕೋಳಿ ಕಾಳಗ, ಉತ್ತರ ಕರ್ನಾಟಕದಲ್ಲಿ ಟಗರು ಕಾಳಗ, ಹೋರಿ ಕಾಳಗ ಅಚರಣೆಯಲ್ಲಿದೆ. ಸರ್ಕಾರ ಇವುಗಳ ಮೇಲೆ ನಿಷೇಧ ಹೇರಿದೆ. ಹಾಗಿದ್ದರೂ ಕಾನೂನು ಉಲ್ಲಂಘಿಸಿ ಪ್ರಾಣಿಗಳನ್ನು ಹಿಂಸಿಸುವ ಆಚರಣೆ ನಡೆಯುತ್ತಿರುವುದು ವಿಷಾದನೀಯ ಎನ್ನುತ್ತಾರೆ ವನ್ಯಜೀವಿ ಪ್ರೇಮಿಗಳು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications