ನೀರು ಒದಗಿಸದಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಮಹದೇವಪ್ಪ
ಮೈಸೂರಿನಲ್ಲಿ ನೀರಿನ ಕೊರತೆ ಉಂಟಾದರೆ ಜಿಲ್ಲಾಡಳಿತದ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಮೈಸೂರು, ಏಪ್ರಿಲ್ 17 : ಇನ್ಮುಂದೆ ಮೈಸೂರಿನ ಜನತೆಗೆ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ ಅಂತಾ ಕಂಪ್ಲೆಂಟ್ ಬಂದ್ರೆ ನಾನು ಸುಮ್ಮನಿರೋಲ್ಲ ನೋಡಿ. ಮೊದಲು ಅಧಿಕಾರಿಗಳು ಇದಕ್ಕೆ ಇತಿಶ್ರೀ ಹಾಡಿ. ಇಲ್ಲವಾದರೆ ಪರಿಣಾಮ ನೆಟ್ಟಗಿರೋಲ್ಲ. ಹೀಗಂತ ತರಾಟೆಗೆ ತೆಗೆದುಕೊಂಡದ್ದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ.
ಜಿಲ್ಲೆಯ ಬರ ಕಾಮಗಾರಿ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸುವ ವೇಳೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳನ್ನು ಅವರು ಬೆವರಿಳಿಸಿದರು. ಇದೇ ವೇಳೆ ತಾಕೀತು ಮಾಡಿದ ಸಚಿವರು, ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ 31 ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಇವುಗಳಲ್ಲಿ 14 ಪೂರ್ಣಗೊಂಡಿದೆ. 15 ಪ್ರಗತಿಯಲ್ಲಿರುತ್ತದೆ ಹಾಗೂ 2 ಪ್ರಾರಂಭಿಕ ಹಂತದಲ್ಲಿರುತ್ತದೆ. ಪ್ರಗತಿಯಲ್ಲಿರುವ 15 ಕಾಮಗಾರಿಗಳನ್ನು ಡಿಸೆಂಬರ್ 2017 ರೊಳಗಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.
ಜನಸಾಮಾನ್ಯರಿಗೆ ಕುಡಿಯುವ ನೀರು, ನರೆಗಾ ಯೋಜನೆಯಡಿ ಉದ್ಯೋಗ ಹಾಗೂ ಜಾನುವಾರುಗಳಿಗೆ ಮೇವಿನಲ್ಲಿ ಕೊರತೆ ಉಂಟಾಗದಂತೆ ನೋಡಿಕೊಂಡು ಉತ್ತಮ ರೀತಿಯಲ್ಲಿ ಬರ ಪರಿಸ್ಥಿತಿಯನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.[ಮೈಸೂರು ಬಾಲಕನ ಸಾವಿಗೆ ಆರ್ ಬಿಐ ಕಾರಣ : ಎಎಪಿ]

"ಕೃಷಿ ಇಲಾಖೆಯಿಂದ ಅವಧಿ ಮುಗಿದಿರುವ ಬಿತ್ತನೆ ಬೀಜ ವಿತರಣೆಯ ಬಗ್ಗೆ ಪತ್ರಿಕಾ ವರದಿಗಳಿಂದ ತಿಳಿದುಬಂತು. ಈ ರೀತಿ ವಿತರಣೆಯಾದಲ್ಲಿ ರೈತರಿಗೆ ಇಲಾಖೆಯ ಮೇಲೆ ಯಾವ ರೀತಿಯ ಮನೋಭಾವ ಬೆಳೆಯುತ್ತದೆ ಎಂಬುದನ್ನು ಚಿಂತಿಸಬೇಕು. ಈ ಬಗ್ಗೆ ಸಂಬಂಧಿಸಿದವರಿಗೆ ನೊಟೀಸ್ ನೀಡಿ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಟ್ಯಾಂಕರ್ ಮೂಲಕ ನೀರು ಸರಬರಾಜಿಗೆ ತಾಕೀತು..
'ಯಾವುದೇ ಮೂಲಗಳಿಂದ ನೀರು ದೊರಕದಿದ್ದಾಗ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ನೀರು ಸರಬರಾಜು ಮಾಡುವ ಗ್ರಾಮಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು.[ಮೈಸೂರಿನಲ್ಲಿ ಬೆಂಕಿಯುಗುಳುವ ಭೂಮಿ: ಭೂವಿಜ್ಞಾನಿಗಳಿಗೇ ಸವಾಲು!]

ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿರುವ ಗ್ರಾಮಗಳಲ್ಲಿ ಫಲಕವನ್ನು ಅಳವಡಿಸಿ ಎಷ್ಟು ಟ್ರಿಪ್ ನೀರು ನೀಡಲಾಗುತ್ತಿದೆ ಹಾಗೂ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆಯನ್ನು ಅನಾವರಣಗೊಳಿಸಿ. ನೀರನ್ನು ಟ್ಯಾಂಕರ್ ಮೂಲಕ ತಲುಪಿಸಿದ ನಂತರ ಗ್ರಾಮದ ಸಾರ್ವಜನಿಕರಿಂದ ಸಹಿ ಪಡೆದುಕೊಳ್ಳಿ ಇದರಿಂದ ಪಾರದರ್ಶಕತೆಯನ್ನು ಹೆಚ್ಚಿಸಬಹುದು' ಎಂದರು.[ಬಲಮುರಿಯಲ್ಲೂ ಸೊರಗಿದ್ದಾಳೆ ಕಾವೇರಿ!]
ಹೆಚ್ಚುತ್ತಿರುವ ರೈತರ ಆತ್ಮಹತ್ಯೆಗೆ ಕಳವಳ:
ರೈತರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಏಪ್ರಿಲ್ 2016 ರಿಂದ ಮಾರ್ಚ್ 2017 ರವರೆಗೆ 74 ಪ್ರಕರಣಗಳು ವರದಿಯಾಗಿತ್ತು. 46 ಅರ್ಹ ಪ್ರಕರಣಗಳಾಗಿದ್ದು, 15 ಪ್ರಕರಣ ವಜಾಗೊಳಿಸಲಾಗಿದೆ. 13 ಪ್ರಕರಣಗಳು ಬಾಕಿ ಇರುತ್ತದೆ. ಈಗಾಗಲೇ 37 ಪ್ರಕರಣಗಳಿಗೆ 5 ಲಕ್ಷ ರೂ. ಪರಿಹಾರ ಹಾಗೂ 33 ಪ್ರಕರಣಗಳಿಗೆ ರೂ. 2,000 ಪಿಂಚಣಿ ಮಂಜೂರು ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ಒದಗಿಸಿದರು.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications