ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಾ.ಜಿ. ಪರಮೇಶ್ವರ್ ಡಿಸಿಎಂ ಹುದ್ದೆಗೂ ಬಂತು ಕಂಟಕ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 1: ಇತ್ತೀಚೆಗಷ್ಟೇ ಮೈತ್ರಿ ಸರ್ಕಾರದ ಸಹಭಾಗಿತ್ವದಲ್ಲಿ ರಾಜ್ಯದ ನೂತನ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿರುವ ಡಾ.ಜಿ. ಪರಮೇಶ್ವರ್ ಅವರಿಗೆ ಕಂಟಕ ಎದುರಾಗಿದೆ.

ಉಪಮುಖ್ಯಮಂತ್ರಿ ಹುದ್ದೆ ಅಸಂವಿಧಾನಿಕವಾಗಿದ್ದು, ಹುದ್ದೆಯನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ: ಎಸ್‌ಐಟಿಯಿಂದ 650 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ: ಎಸ್‌ಐಟಿಯಿಂದ 650 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಮೈಸೂರು ಮೂಲದ ಶೇಖರ್ ಐಯ್ಯರ್ ಎಂಬುವವರು ಡಿಸಿಎಂ ಹುದ್ದೆಯನ್ನು ರದ್ದು ಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ಸಂವಿಧಾನದಲ್ಲಿ ಉಪಮುಖ್ಯಮಂತ್ರಿ ಎಂಬುದಿಲ್ಲ.

Submission of PIL to cancel Deputy Chief Ministers post

ಆದರೂ ಕಾನೂನು ಬಾಹಿರವಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೀಗಾಗಿ ಈ ಹುದ್ದೆಯನ್ನು ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ ವೇಳೆ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದರು.

English summary
The Deputy Chief Minister's post is unconstitutional and the public interest petition is filed to the High Court seeking the abolition of the post. Shekar Iyer, a native of Mysore, submitted the PIL to the High Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X