ಮೈಸೂರಿನ ಸುಬ್ರಹ್ಮಣ್ಯ ಷಷ್ಠಿ ಜಾತ್ರೆಯಲ್ಲಿ ಹಾವನ್ನು ರಕ್ಷಿಸಿದ ಸ್ನೇಕ್ ಶ್ಯಾಂ
ಮೈಸೂರು, ಡಿಸೆಂಬರ್ 13 : ಇಂದು ಸುಬ್ರಹ್ಮಣ್ಯ ಷಷ್ಠಿ ಹಬ್ಬದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮ ಮನೆ ಮಾಡಿದ್ದು, ಪ್ರತಿಷ್ಠಿತ ಸಿದ್ದಲಿಂಗಪುರದ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಸಡಗರದಿಂದ ಷಷ್ಠಿ ಜಾತ್ರೆ ನಡೆಯುತ್ತಿದೆ.
ಸಿದ್ದಲಿಂಗಪುರದ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೂ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ಮುಂಜಾನೆಯಿಂದಲೇ ಅಪಾರ ಜನಸ್ತೋಮ ಹರಿದು ಬರುತ್ತಿದೆ. ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ಸರತಿಸಾಲಿನಲ್ಲಿ ನಿಂತು ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆಯುತ್ತಿದ್ದಾರೆ.
ದೇವಾಲಯದಲ್ಲಿ ಷಷ್ಠಿ ಜಾತ್ರೆ ಹಿನ್ನೆಲೆ, ತಾತ್ಕಾಲಿಕವಾಗಿ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಮಧ್ಯರಾತ್ರಿ 12ರವರೆಗೂ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಬದಲಿ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಹೆದ್ದಾರಿಯಲ್ಲಿ ಜಾತ್ರೆಯ ಸಂಭ್ರಮ ಕಳೆಗಟ್ಟಿದೆ. ಅಂಗಡಿ- ಮುಂಗಟ್ಟುಗಳಲ್ಲಿ ವ್ಯಾಪಾರದ ಭರಾಟೆ ಜೋರಾಗಿದ್ದು, ಜಾತ್ರೆಗೆ ಪೊಲೀಸ್ ಭದ್ರತೆ ವಹಿಸಲಾಗಿದೆ.
ಅಂದಹಾಗೆ ಮೈಸೂರಿನಲ್ಲಿ ಷಷ್ಠಿ ಹಬ್ಬದ ದಿನವೂ ಉರಗ ತಜ್ಞ ಸ್ನೇಕ್ ಶ್ಯಾಂ ಅವರು ಹಾವನ್ನು ರಕ್ಷಿಸಿದ್ದಾರೆ. ಹೌದು, ಸುಬ್ರಮಣ್ಯಸ್ವಾಮಿ ದೇಗುಲದ ಬಳಿ ಜಾತ್ರೆ ನಡೆಯುತ್ತಿದ್ದು, ಜಾತ್ರೆಯಲ್ಲಿ ಭಕ್ತರ ಮುಂದೆ ಹಾವು ಆಡಿಸುತ್ತಿದ್ದ ವ್ಯಕ್ತಿಯಿಂದ ಸ್ನೇಕ್ ಶ್ಯಾಮ್ ಅವರು ಹಾವನ್ನು ರಕ್ಷಿಸಿದ್ದಾರೆ.

ಹಾಗೆಯೇ ಇದೇ ವೇಳೆ ನಿಜ ನಾಗರಕ್ಕೆ ಹಾಲು ಎರೆಯುತ್ತಿದ್ದ ಭಕ್ತರಿಗೆ ಹಾಲು ಎರೆಯೆದಂತೆ ಮನವಿ ಮಾಡಿ "ಹಾವು ಹಾಲು ಕುಡಿಯುವುದಿಲ್ಲ. ಬೆಣ್ಣೆ, ತುಪ್ಪ, ಹಾಲು ಹಾಕುವುದರಿಂದ ಹಾವು ಸಾವನ್ನಪ್ಪುವ ಸಾಧ್ಯತೆ ಹೆಚ್ಚಿರುತ್ತದೆ. ದೇವರ ಮೇಲೆ ಭಕ್ತಿ ಇರಲಿ, ಮೂಢನಂಬಿಕೆ ಬೇಡ. ಇತ್ತೀಚಿನ ದಿನಗಳಲ್ಲಿ ಹಾವುಗಳ ವಾಸಸ್ಥಾನ ನಾಶವಾಗುತ್ತಿವೆ. ಹಾವುಗಳು ನಾಶವಾದರೆ ಮಾನವ ಸಂಕುಲಕ್ಕೆ ಕಂಟಕ ಎಂದು ಹೇಳಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications