ಮೈಸೂರಿನ ಸುಬ್ರಹ್ಮಣ್ಯ ಷಷ್ಠಿ ಜಾತ್ರೆಯಲ್ಲಿ ಹಾವನ್ನು ರಕ್ಷಿಸಿದ ಸ್ನೇಕ್ ಶ್ಯಾಂ
ಮೈಸೂರು, ಡಿಸೆಂಬರ್ 13 : ಇಂದು ಸುಬ್ರಹ್ಮಣ್ಯ ಷಷ್ಠಿ ಹಬ್ಬದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮ ಮನೆ ಮಾಡಿದ್ದು, ಪ್ರತಿಷ್ಠಿತ ಸಿದ್ದಲಿಂಗಪುರದ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಸಡಗರದಿಂದ ಷಷ್ಠಿ ಜಾತ್ರೆ ನಡೆಯುತ್ತಿದೆ.
ಸಿದ್ದಲಿಂಗಪುರದ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಮುಂಜಾನೆಯಿಂದಲೂ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ಮುಂಜಾನೆಯಿಂದಲೇ ಅಪಾರ ಜನಸ್ತೋಮ ಹರಿದು ಬರುತ್ತಿದೆ. ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ಸರತಿಸಾಲಿನಲ್ಲಿ ನಿಂತು ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆಯುತ್ತಿದ್ದಾರೆ.
ದೇವಾಲಯದಲ್ಲಿ ಷಷ್ಠಿ ಜಾತ್ರೆ ಹಿನ್ನೆಲೆ, ತಾತ್ಕಾಲಿಕವಾಗಿ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಮಧ್ಯರಾತ್ರಿ 12ರವರೆಗೂ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

ಬದಲಿ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಹೆದ್ದಾರಿಯಲ್ಲಿ ಜಾತ್ರೆಯ ಸಂಭ್ರಮ ಕಳೆಗಟ್ಟಿದೆ. ಅಂಗಡಿ- ಮುಂಗಟ್ಟುಗಳಲ್ಲಿ ವ್ಯಾಪಾರದ ಭರಾಟೆ ಜೋರಾಗಿದ್ದು, ಜಾತ್ರೆಗೆ ಪೊಲೀಸ್ ಭದ್ರತೆ ವಹಿಸಲಾಗಿದೆ.
ಅಂದಹಾಗೆ ಮೈಸೂರಿನಲ್ಲಿ ಷಷ್ಠಿ ಹಬ್ಬದ ದಿನವೂ ಉರಗ ತಜ್ಞ ಸ್ನೇಕ್ ಶ್ಯಾಂ ಅವರು ಹಾವನ್ನು ರಕ್ಷಿಸಿದ್ದಾರೆ. ಹೌದು, ಸುಬ್ರಮಣ್ಯಸ್ವಾಮಿ ದೇಗುಲದ ಬಳಿ ಜಾತ್ರೆ ನಡೆಯುತ್ತಿದ್ದು, ಜಾತ್ರೆಯಲ್ಲಿ ಭಕ್ತರ ಮುಂದೆ ಹಾವು ಆಡಿಸುತ್ತಿದ್ದ ವ್ಯಕ್ತಿಯಿಂದ ಸ್ನೇಕ್ ಶ್ಯಾಮ್ ಅವರು ಹಾವನ್ನು ರಕ್ಷಿಸಿದ್ದಾರೆ.

ಹಾಗೆಯೇ ಇದೇ ವೇಳೆ ನಿಜ ನಾಗರಕ್ಕೆ ಹಾಲು ಎರೆಯುತ್ತಿದ್ದ ಭಕ್ತರಿಗೆ ಹಾಲು ಎರೆಯೆದಂತೆ ಮನವಿ ಮಾಡಿ "ಹಾವು ಹಾಲು ಕುಡಿಯುವುದಿಲ್ಲ. ಬೆಣ್ಣೆ, ತುಪ್ಪ, ಹಾಲು ಹಾಕುವುದರಿಂದ ಹಾವು ಸಾವನ್ನಪ್ಪುವ ಸಾಧ್ಯತೆ ಹೆಚ್ಚಿರುತ್ತದೆ. ದೇವರ ಮೇಲೆ ಭಕ್ತಿ ಇರಲಿ, ಮೂಢನಂಬಿಕೆ ಬೇಡ. ಇತ್ತೀಚಿನ ದಿನಗಳಲ್ಲಿ ಹಾವುಗಳ ವಾಸಸ್ಥಾನ ನಾಶವಾಗುತ್ತಿವೆ. ಹಾವುಗಳು ನಾಶವಾದರೆ ಮಾನವ ಸಂಕುಲಕ್ಕೆ ಕಂಟಕ ಎಂದು ಹೇಳಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications