ಕೆ.ಆರ್.ಕ್ಷೇತ್ರದಿಂದ ಸುಚಿತ್ರಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ
ಮೈಸೂರು, ಏಪ್ರಿಲ್ 14: ಮೈಸೂರಿನ ವಿಧಾನಸಭಾ ಕ್ಷೇತ್ರಗಳಲ್ಲೊಂದಾದ ಕೆ.ಆರ್.ವಿಧಾನಸಭಾಕ್ಷೇತ್ರ ಎಲ್ಲರ ಕುತೂಹಲ ಕೆರಳಿಸಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಆಕಾಂಕ್ಷಿಗಳು ಪೈಪೋಟಿಗಿಳಿದಿದ್ದು, ರಾಜ್ಯದಾದ್ಯಂತ ಸುದ್ದಿಗೆ ಗ್ರಾಸವಾಗಿದೆ.
ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ನೀಡುವುದಕ್ಕೆ ಮುಖಂಡ ಹೆಚ್.ವಿ.ರಾಜೀವ್ ಮತ್ತು ಮಾಜಿ ಎಂಎಲ್ ಸಿ ಗೋ.ಮಧುಸೂದನ್ ಅವರು ವಿರೋಧ ವ್ಯಕ್ತಪಡಿಸುತ್ತಿರುವುದು ಜಗಜ್ಜಾಹೀರಾಗಿದೆ. ಈ ನಡುವೆ ಜೆಡಿಎಸ್ ನಿಂದ ಕೆ.ವಿ.ಮಲ್ಲೇಶ್ ಅವರು ಕಣಕ್ಕಿಳಿದಿದ್ದರೆ, ಕಾಂಗ್ರೆಸ್ ನಿಂದ ಹಾಲಿ ಶಾಸಕ ಎಂ.ಕೆ.ಸೋಮಶೇಖರ್ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ.
ಇದೆಲ್ಲದರ ನಡುವೆ ಕ್ಷೇತ್ರದಿಂದ ಸ್ಪರ್ಧಿಸಲಿರುವ ಘಟಾನುಘಟಿಗಳಿಗೆ ಪೈಪೋಟಿ ನೀಡಲು ಸ್ನಾತಕೋತ್ತರ ಪದವೀಧರೆ ಕು.ಸುಚಿತ್ರಾ ಮುಂದಾಗಿದ್ದಾರೆ. ಇವರು ಮೈಸೂರಿನ ಲಕ್ಷ್ಮೀಪುರಂನ ಸಂಜೀವಿನಿ ಫೌಂಡೇಷನ್ ವತಿಯಿಂದ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುವ ಮೂಲಕ ಸಾಮಾಜಿಕ ಕ್ಷೇತ್ರದಲ್ಲಿ ಒಂದಷ್ಟು ಜನರ ಒಡನಾಟ ಹೊಂದಿದ್ದಾರೆ.

ಎಂ.ಎಸ್ಸಿ.ನರ್ಸಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಖಾಸಗಿಯಾಗಿ ಸಂಜೀವಿನಿ ಫೌಂಡೇಷನ್ ವತಿಯಿಂದ ಸಮಾಜ ಸೇವೆ ಸಲ್ಲಿಸುತ್ತಿರುವ ಇವರು ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಬುದ್ಧ, ಬಸವ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸ್ಪರ್ಧೆ ಮಾಡುತ್ತಿರುವುದಾಗಿ ಘೋಷಿಸಿಗೊಂಡಿದ್ದಾರೆ.
ಸಮಾಜ ಸೇವಾ ಕಾರ್ಯವನ್ನೇ ಜೀವನದ ಮೂಲ ಮಂತ್ರ ಎಂದು ಅರಿತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾಪ್ರತಿನಿಧಿಯಾಗಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ, ನ್ಯಾಯಯುತ ಹಾಗೂ ಪ್ರಾಮಾಣಿಕವಾಗಿ ಬದ್ಧತೆಯಿಂದ ನಡೆಸಬೇಕೆಂದು ಸ್ಪರ್ಧಿಸಲಿಚ್ಛಿಸಿರುವುದಾಗಿ ಹೇಳಿದ್ದಾರೆ.
ಮೌಲ್ಯಾಧಾರಿತ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿ ಜಾತಿ, ಮತ, ಧರ್ಮ, ಪಂಥ, ಪಂಗಡ, ಪಕ್ಷ ರಾಜಕಾರಣ ಮತ್ತು ವಂಶಪಾರಂಪರ್ಯ ರಾಜಕಾರಣ ಇವೆಲ್ಲವನ್ನೂ ಮೆಟ್ಟಿ ನಿಂತು ಸಾಮಾಜಿಕ ಹೊಣೆಗಾರಿಕೆ ಹೊತ್ತು ಜನಪರ ಸೇವಾಕಾಂಕ್ಷಿ ಪ್ರಜಾ ಪ್ರತಿನಿಧಿಯಾಗಿ ಸ್ಪರ್ಧೆಗಿಳಿಯುತ್ತಿರುವುದಾಗಿ ಘೋಷಿಸಿದ್ದಾರೆ.
ಕೆ.ಆರ್.ಕ್ಷೇತ್ರದಿಂದ ಇನ್ನಷ್ಟು ಪಕ್ಷೇತರರು ಕಣಕ್ಕಿಳಿಯುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಈ ಕ್ಷೇತ್ರದ ನೈಜ ಚಿತ್ರಣ ತಿಳಿಯಲಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications