ಕೆ.ಆರ್.ಕ್ಷೇತ್ರದಿಂದ ಸುಚಿತ್ರಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ
ಮೈಸೂರು, ಏಪ್ರಿಲ್ 14: ಮೈಸೂರಿನ ವಿಧಾನಸಭಾ ಕ್ಷೇತ್ರಗಳಲ್ಲೊಂದಾದ ಕೆ.ಆರ್.ವಿಧಾನಸಭಾಕ್ಷೇತ್ರ ಎಲ್ಲರ ಕುತೂಹಲ ಕೆರಳಿಸಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಆಕಾಂಕ್ಷಿಗಳು ಪೈಪೋಟಿಗಿಳಿದಿದ್ದು, ರಾಜ್ಯದಾದ್ಯಂತ ಸುದ್ದಿಗೆ ಗ್ರಾಸವಾಗಿದೆ.
ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ನೀಡುವುದಕ್ಕೆ ಮುಖಂಡ ಹೆಚ್.ವಿ.ರಾಜೀವ್ ಮತ್ತು ಮಾಜಿ ಎಂಎಲ್ ಸಿ ಗೋ.ಮಧುಸೂದನ್ ಅವರು ವಿರೋಧ ವ್ಯಕ್ತಪಡಿಸುತ್ತಿರುವುದು ಜಗಜ್ಜಾಹೀರಾಗಿದೆ. ಈ ನಡುವೆ ಜೆಡಿಎಸ್ ನಿಂದ ಕೆ.ವಿ.ಮಲ್ಲೇಶ್ ಅವರು ಕಣಕ್ಕಿಳಿದಿದ್ದರೆ, ಕಾಂಗ್ರೆಸ್ ನಿಂದ ಹಾಲಿ ಶಾಸಕ ಎಂ.ಕೆ.ಸೋಮಶೇಖರ್ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ.
ಇದೆಲ್ಲದರ ನಡುವೆ ಕ್ಷೇತ್ರದಿಂದ ಸ್ಪರ್ಧಿಸಲಿರುವ ಘಟಾನುಘಟಿಗಳಿಗೆ ಪೈಪೋಟಿ ನೀಡಲು ಸ್ನಾತಕೋತ್ತರ ಪದವೀಧರೆ ಕು.ಸುಚಿತ್ರಾ ಮುಂದಾಗಿದ್ದಾರೆ. ಇವರು ಮೈಸೂರಿನ ಲಕ್ಷ್ಮೀಪುರಂನ ಸಂಜೀವಿನಿ ಫೌಂಡೇಷನ್ ವತಿಯಿಂದ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುವ ಮೂಲಕ ಸಾಮಾಜಿಕ ಕ್ಷೇತ್ರದಲ್ಲಿ ಒಂದಷ್ಟು ಜನರ ಒಡನಾಟ ಹೊಂದಿದ್ದಾರೆ.

ಎಂ.ಎಸ್ಸಿ.ನರ್ಸಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಖಾಸಗಿಯಾಗಿ ಸಂಜೀವಿನಿ ಫೌಂಡೇಷನ್ ವತಿಯಿಂದ ಸಮಾಜ ಸೇವೆ ಸಲ್ಲಿಸುತ್ತಿರುವ ಇವರು ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಬುದ್ಧ, ಬಸವ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸ್ಪರ್ಧೆ ಮಾಡುತ್ತಿರುವುದಾಗಿ ಘೋಷಿಸಿಗೊಂಡಿದ್ದಾರೆ.
ಸಮಾಜ ಸೇವಾ ಕಾರ್ಯವನ್ನೇ ಜೀವನದ ಮೂಲ ಮಂತ್ರ ಎಂದು ಅರಿತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜಾಪ್ರತಿನಿಧಿಯಾಗಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ, ನ್ಯಾಯಯುತ ಹಾಗೂ ಪ್ರಾಮಾಣಿಕವಾಗಿ ಬದ್ಧತೆಯಿಂದ ನಡೆಸಬೇಕೆಂದು ಸ್ಪರ್ಧಿಸಲಿಚ್ಛಿಸಿರುವುದಾಗಿ ಹೇಳಿದ್ದಾರೆ.
ಮೌಲ್ಯಾಧಾರಿತ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿ ಜಾತಿ, ಮತ, ಧರ್ಮ, ಪಂಥ, ಪಂಗಡ, ಪಕ್ಷ ರಾಜಕಾರಣ ಮತ್ತು ವಂಶಪಾರಂಪರ್ಯ ರಾಜಕಾರಣ ಇವೆಲ್ಲವನ್ನೂ ಮೆಟ್ಟಿ ನಿಂತು ಸಾಮಾಜಿಕ ಹೊಣೆಗಾರಿಕೆ ಹೊತ್ತು ಜನಪರ ಸೇವಾಕಾಂಕ್ಷಿ ಪ್ರಜಾ ಪ್ರತಿನಿಧಿಯಾಗಿ ಸ್ಪರ್ಧೆಗಿಳಿಯುತ್ತಿರುವುದಾಗಿ ಘೋಷಿಸಿದ್ದಾರೆ.
ಕೆ.ಆರ್.ಕ್ಷೇತ್ರದಿಂದ ಇನ್ನಷ್ಟು ಪಕ್ಷೇತರರು ಕಣಕ್ಕಿಳಿಯುವ ಸಾಧ್ಯತೆಯಿದ್ದು, ಮುಂದಿನ ದಿನಗಳಲ್ಲಿ ಈ ಕ್ಷೇತ್ರದ ನೈಜ ಚಿತ್ರಣ ತಿಳಿಯಲಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications