ಮೈಸೂರು ವಿವಿ ಉಪ ಕುಲಪತಿ ಹುದ್ದೆಗೆ ತೀವ್ರ ಪೈಪೋಟಿ, 150 ಅರ್ಜಿಗಳು!
ಮೈಸೂರು,ಜನವರಿ. 19 : ಶತಮಾನವನ್ನು ಪೂರೈಸಿರುವ ದೇಶದ ಪ್ರತಿಷ್ಠಿತ ವಿಶ್ವ ವಿದ್ಯಾನಿಲಯಗಳಲ್ಲಿ ಒಂದಾದ ಮೈಸೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಸ್ಥಾನಕ್ಕೆ ಭಾರಿ ಪೈಪೋಟಿ ಆರಂಭವಾಗಿದ್ದು, ಸುಮಾರು 150ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.
ಉಪ ಕುಲಪತಿಯಾಗಿದ್ದ ಪ್ರೊ.ಕೆ.ಎಸ್.ರಂಗಪ್ಪ ಅವರ 4 ವರ್ಷ ಅವಧಿ ಜನವರಿ 10ಕ್ಕೆ ಪೂರ್ಣಗೊಂಡು ಅವರ ನಿವೃತ್ತಿಯಿಂದ ಈ ಸ್ಥಾನ ತೆರವಾಗಿದೆ. ಈ ಹಿನ್ನೆಲೆಯಲ್ಲಿ ನೂತನ ಉಪ ಕುಲಪತಿ ಆಯ್ಕೆ ಕಸರತ್ತು ಆರಂಭವಾಗಿದ್ದು, ಇದೇ ಮೊದಲ ಬಾರಿಗೆ ಸರ್ಕಾರ ಅರ್ಜಿ ಆಹ್ವಾನಿಸಿದೆ.
ಮೂಲಗಳ ಪ್ರಕಾರ ಉನ್ನತ ಶಿಕ್ಷಣ ಇಲಾಖೆಗೆ 150ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸುವ ಅವಧಿ ಜನವರಿ 13 ಕೊನೆಯಾಗಿದ್ದು, ಇನ್ನು ಅರ್ಜಿಗಳ ಪರಿಶೀಲನೆ ನಡೆಯಬೇಕಿದೆ.[ಮೈಸೂರು: ನಾನು ರಾಜಕೀಯ ಪ್ರವೇಶಿಸುವುದಿಲ್ಲ, ಪ್ರೊ.ರಂಗಪ್ಪ]

ಉಪ ಕುಲಪತಿ ಆಯ್ಕೆಗೆ ರಚಿಸಿರುವ ಶೋಧನಾ ಸಮಿತಿ 150ಕ್ಕೂ ಹೆಚ್ಚು ಮಂದಿಯ ಅರ್ಜಿಗಳನ್ನು ಪರಿಶೀಲಿಸಿ ಅವರಲ್ಲಿ ನಾಲ್ವರು ಸಂಭಾವ್ಯರ ಹೆಸರುಗಳನ್ನು ಶಿಫಾರಸು ಮಾಡಬೇಕಿದೆ.
ಸರ್ಕಾರ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪ ಕುಲಪತಿ ಡಾ.ಎಚ್.ಪಿ.ಕಿಂಚ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ಶೋಧನಾ ಸಮಿತಿಯಲ್ಲಿ ರಾಜ್ಯಪಾಲರ ಪ್ರತಿನಿಧಿಯಾಗಿ ಎಂ.ಮುನಿಯಮ್ಮ, ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸೂಚಿಸಿರುವ ಸದಸ್ಯರಾಗಿ ಹರಿ ಗೌತಮ್, ಯುಜಿಸಿ ಪ್ರತಿನಿಧಿಯಾಗಿ ವಿ.ಎಸ್.ಚೌಹಾಣ್ ಇದ್ದಾರೆ.
ಮೈಸೂರು ವಿಶ್ವ ವಿದ್ಯಾನಿಲಯದಿಂದಲೇ ಸುಮಾರು 15ಕ್ಕೂ ಹೆಚ್ಚು ಮಂದಿ ಅವಕಾಶಕ್ಕಾಗಿ ಪ್ರಯತ್ನ ಮಾಡಿದ್ದಾರೆ. ಸಾಹಿತಿ ಪ್ರೊ.ಸಿ.ಪಿ.ಸಿದ್ಧಾಶ್ರಮ, ಲೇಖಕ, ವೈಚಾರಿಕ ಚಿಂತಕ ಪ್ರೊ.ಅರವಿಂದ ಮಾಲಗತ್ತಿ,
ಅರ್ಥಶಾಸ್ತ್ರ ಪ್ರಾಧ್ಯಾಪಕಿ ಡಾ.ಬಿ.ಕೆ.ತುಳಸಿಮಾಲಾ, ಮೈಸೂರು ವಿವಿ ಕುಲಸಚಿವರಾಗಿ ಕಾರ್ಯನಿರ್ವಹಿಸಿರುವ ಪ್ರೊ.ಸಿ.ಬಸವರಾಜು, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಅಧ್ಯಕ್ಷ ಡಾ.ವಿ. ರವಿಶಂಕರ್ ರೈ, ಡಾ.ಬಿ.ಎಚ್. ಸುರೇಶ್, ಡಾ.ಜಿ. ಕೊಟ್ರೇಶ್ವರ್, ಪ್ರೊ. ಬ.ಸ.ಸುಂದರಯ್ಯ ಅರ್ಜಿ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ.
ಇವರಲ್ಲದೆ, ರಾಜ್ಯದ ಇತರ ವಿವಿಗಳ ಅರ್ಹ ಪ್ರಾಧ್ಯಾಪಕರು, ಶಿಕ್ಷಣ ತಜ್ಞರು, ನಿವೃತ್ತ ಪ್ರಾಧ್ಯಾಪಕರುಗಳೂ ಅರ್ಜಿ ಸಲ್ಲಿಸಿದ್ದು, ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ಕುಲಪತಿ ಡಾ. ಮಲ್ಲಿಕಾ ಎಸ್.ಘಂಟಿ ಅವರು ಮೈಸೂರು ವಿವಿ ಉಪ ಕುಲಪತಿ ರೇಸ್ನಲ್ಲಿದ್ದಾರೆ ಎಂದು ಹೇಳಲಾಗಿದೆ.
ಕೆಲವರು ನೇರವಾಗಿ ಉನ್ನತ ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಿರುವುದರಿಂದ ಇನ್ನು ಯಾರು ಯಾರು ಆಕಾಂಕ್ಷಿಗಳಾಗಿದ್ದಾರೆ ಎಂಬ ಪೂರ್ಣ ಮಾಹಿತಿ ಲಭ್ಯವಾಗಿಲ್ಲ.
ಶೋಧನಾ ಸಮಿತಿ ಮುಂದಿನ ವಾರ ಸಭೆ ಸೇರಲಿದ್ದು, ಅರ್ಜಿಗಳನ್ನು ಪರಿಶೀಲಿಸಿ ನಾಲ್ವರ ಹೆಸರುಗಳನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಲಿದೆ. ಅರ್ಜಿಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಭೆ 2ರಿಂದ 3 ದಿನಗಳ ವರೆಗೆ ನಡೆಯಬಹುದು ಎಂದು ಹೇಳಲಾಗುತ್ತಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications