ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿಗೆ ಆಗಮಿಸಿದ ಸುಧಾ ನಾರಾಯಣ್ ಮೂರ್ತಿ, ಜಿಲ್ಲಾಡಳಿತದಿಂದ ಸ್ವಾಗತ

|
Google Oneindia Kannada News

ಮೈಸೂರು, ಅಕ್ಟೋಬರ್. 09 : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಈಗಾಗಲೇ ಕ್ಷಣಗಣನೆ ಆರಂಭವಾಗಿದ್ದು, ದಸರಾ ಉದ್ಘಾಟಕರಾದ ಇನ್ಫೋಸಿಸ್ ಅಧ್ಯಕ್ಷೆ ಸುಧಾ ನಾರಾಯಣ್ ಮೂರ್ತಿ ಅವರು ಮಂಗಳವಾರ ಮೈಸೂರಿಗೆ ಆಗಮಿಸಿದರು.

ಪತಿ ನಾರಾಯಣ್ ಮೂರ್ತಿ ಅವರೊಂದಿಗೆ ಮೈಸೂರಿಗೆ ಬಂದಿಳಿದ ಸುಧಾ ನಾರಾಯಣ್ ಮೂರ್ತಿ ಅವರಿಗೆ ಜಿಲ್ಲಾಡಳಿತದಿಂದ ಹೂ ಗುಚ್ಛ ನೀಡಿ ಸ್ವಾಗತ ಕೋರಲಾಯಿತು.

ದಸರಾ ಉದ್ಘಾಟನೆ - ಸಾಮಾನ್ಯಳಿಗೆ ಸಿಕ್ಕ ದೊಡ್ಡ ಸನ್ಮಾನ : ಸುಧಾ ಮೂರ್ತಿ ದಸರಾ ಉದ್ಘಾಟನೆ - ಸಾಮಾನ್ಯಳಿಗೆ ಸಿಕ್ಕ ದೊಡ್ಡ ಸನ್ಮಾನ : ಸುಧಾ ಮೂರ್ತಿ

ನಂತರ ಮಾಧ್ಯಮಗಳ ಜತೆ ಮಾತನಾಡಿದ ಸುಧಾಮೂರ್ತಿ ಅವರು, ಮೈಸೂರು ದಸರಾ ಉದ್ಘಾಟನೆ ಮಾಡುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ. ಉದ್ಘಾಟನೆ ಮಾಡಲು ನನ್ನ ಹೆಸರು ಪ್ರಕಟಿಸಿದಾಗ ಬಹಳ ಸಂತೋಷವಾಯಿತು.

Sudha Narayan Murthy arrived to Mysore today

ದಸರಾ ಕೇವಲ ಎಲ್ಲಾ ಹಬ್ಬಗಳಂತೆ ಅಲ್ಲ. ಇದು ವಿಶೇಷ ಹಬ್ಬ, ನಾಡ ಹಬ್ಬ. ಇದಕ್ಕೆ ಇತಿಹಾಸದ ನಂಟಿದೆ. ಇದು ಸಂಸ್ಕೃತಿ ಪ್ರತೀಕ. ಎಲ್ಲರೂ ಈ ಹಬ್ಬವನ್ನು ಆಚರಿಸಿ ಗೌರವಿಸುವಂತಾಗಬೇಕು. ಉದ್ಘಾಟನೆಗೆ ಅವಕಾಶ ಕೊಟ್ಟಿದ್ದಕ್ಕೆ ಋಣಿಯಾಗಿದ್ದಾನೆ. ನಮಗೆ ಇರುವ ಇತಿಮಿತಿಯಲ್ಲಿ ‌ನಾವು ಸರಳವಾಗಿ ದಸರಾ ಆಚರಿಸಬೇಕು ಎಂದು ಸಲಹೆ ನೀಡಿದರು.

ದಸರಾಕ್ಕೆ ಕ್ಷಣಗಣನೆ: ಮಧುವಣಗಿತ್ತಿಯಂತೆ ಸಿಂಗಾರಗೊಂಡ ಸಾಂಸ್ಕೃತಿಕ ನಗರಿದಸರಾಕ್ಕೆ ಕ್ಷಣಗಣನೆ: ಮಧುವಣಗಿತ್ತಿಯಂತೆ ಸಿಂಗಾರಗೊಂಡ ಸಾಂಸ್ಕೃತಿಕ ನಗರಿ

1950ರಲ್ಲಿ ಜಯ ಚಾಮರಾಜೇಂದ್ರ ಒಡೆಯರ ದರ್ಬಾರ್ ನಾನು‌ ನೋಡಿದ ದಸರಾ. ಆಗ ನಾನು ಎಂಟನೇ ತರಗತಿ ಓದುತ್ತಿದ್ದೆ. ಅಂದಿನ ದಸರಾಕ್ಕೂ ಇಂದಿನ ದಸರಾಕ್ಕೂ ಸಾಕಷ್ಟು ವ್ಯತ್ಯಾಸ ಇದೆ. 60 ವರ್ಷಗಳ ಇತಿಹಾಸದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ ಎಂದು ಸುಧಾಮೂರ್ತಿ ಸ್ಮರಿಸಿಕೊಂಡರು. ಅಲ್ಲದೆ ದಸರಾ ವಿಚಾರಗಳನ್ನು ಪಠ್ಯದಲ್ಲಿ ಅಳವಡಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

English summary
Sudha Narayan Murthy arrived to Mysore today. After that Sudha Narayan Murthy Said that I'm really glad to inaugurate Dasara.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X